<p><strong>ಬೆಂಗಳೂರು</strong>: `ಎಲ್ಲ ರೀತಿಯ ದೇಶ ವಿಭಜಕ ಶಕ್ತಿಗಳನ್ನು ಕೊನೆಗೊಳಿಸಬೇಕು. ಎಲ್ಲ ಧರ್ಮೀಯರು ಒಟ್ಟಾಗಿ ಬಾಳಬೇಕು. ಆಗಲೇ ವಿಶ್ವದ ಮುಂದೆ ನಮ್ಮದು ವಿಶಿಷ್ಟ ರಾಷ್ಟ್ರ ಎಂಬುದು ತಿಳಿಸಿದಂತಾಗುತ್ತದೆ~ ಎಂದು ರಾಜ್ಯಪಾಲ ಎಚ್. ಆರ್.ಭಾರದ್ವಾಜ್ ಅಭಿಪ್ರಾಯಪಟ್ಟರು. <br /> <br /> `ಕಾರಿಟಸ್ ಇಂಡಿಯಾ~ ಸಾಮಾಜಿಕ ಸೇವಾ ಸಂಸ್ಥೆಗೆ 50 ವರ್ಷ ತುಂಬಿದ ಪ್ರಯುಕ್ತ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಸುವರ್ಣ ಮಹೋತ್ಸವದ ಸಮಾರೋಪದಲ್ಲಿ ಮಾತನಾಡಿದರು. <br /> <br /> ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ಮಾತನಾಡಿ, ` ಕಾನೂನು ತಿಳಿವಳಿಕೆ ನೀಡಲು ಕಾರಿಟಸ್ ಸಂಸ್ಥೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಬೆಂಗಳೂರು ಆರ್ಚ್ ಬಿಷಪ್ ಡಾ.ಬರ್ನಾರ್ಡ್ ಮೋರಸ್ ಮಾತನಾಡಿ, ಕೇಂದ್ರ ಯೋಜನಾ ಆಯೋಗವು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ವಿತರಣೆಯ ಮಾನದಂಡವನ್ನು ವಿವರಿಸಲಾಗಿದೆ. <br /> <br /> ನಗರ ಪ್ರದೇಶದಲ್ಲಿ 32 ರೂಪಾಯಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ 25 ತಲಾದಾಯ ಇದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಬೇಕಿಲ್ಲ ಎಂದು ವರದಿ ನೀಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಎಲ್ಲ ರೀತಿಯ ದೇಶ ವಿಭಜಕ ಶಕ್ತಿಗಳನ್ನು ಕೊನೆಗೊಳಿಸಬೇಕು. ಎಲ್ಲ ಧರ್ಮೀಯರು ಒಟ್ಟಾಗಿ ಬಾಳಬೇಕು. ಆಗಲೇ ವಿಶ್ವದ ಮುಂದೆ ನಮ್ಮದು ವಿಶಿಷ್ಟ ರಾಷ್ಟ್ರ ಎಂಬುದು ತಿಳಿಸಿದಂತಾಗುತ್ತದೆ~ ಎಂದು ರಾಜ್ಯಪಾಲ ಎಚ್. ಆರ್.ಭಾರದ್ವಾಜ್ ಅಭಿಪ್ರಾಯಪಟ್ಟರು. <br /> <br /> `ಕಾರಿಟಸ್ ಇಂಡಿಯಾ~ ಸಾಮಾಜಿಕ ಸೇವಾ ಸಂಸ್ಥೆಗೆ 50 ವರ್ಷ ತುಂಬಿದ ಪ್ರಯುಕ್ತ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಸುವರ್ಣ ಮಹೋತ್ಸವದ ಸಮಾರೋಪದಲ್ಲಿ ಮಾತನಾಡಿದರು. <br /> <br /> ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ಮಾತನಾಡಿ, ` ಕಾನೂನು ತಿಳಿವಳಿಕೆ ನೀಡಲು ಕಾರಿಟಸ್ ಸಂಸ್ಥೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಬೆಂಗಳೂರು ಆರ್ಚ್ ಬಿಷಪ್ ಡಾ.ಬರ್ನಾರ್ಡ್ ಮೋರಸ್ ಮಾತನಾಡಿ, ಕೇಂದ್ರ ಯೋಜನಾ ಆಯೋಗವು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ವಿತರಣೆಯ ಮಾನದಂಡವನ್ನು ವಿವರಿಸಲಾಗಿದೆ. <br /> <br /> ನಗರ ಪ್ರದೇಶದಲ್ಲಿ 32 ರೂಪಾಯಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ 25 ತಲಾದಾಯ ಇದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಬೇಕಿಲ್ಲ ಎಂದು ವರದಿ ನೀಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>