<p>ಕರ್ನಾಟಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಾಧನೆಗಳಿಂದ ಜಗತ್ತಿನ ಗಮನ ಸೆಳೆದಿದ್ದರೂ ಅಭಿವೃದ್ಧಿಯ ವಿವಿಧ ಮಾನದಂಡಗಳಲ್ಲಿ ಹಿಂದುಳಿದಿದೆ. <br /> <br /> ಇತ್ತೀಚೆಗೆ ಬಿಡುಗಡೆಯಾದ 2011ರ ಮನೆಗಣತಿಯ ಅಂಕಿ ಅಂಶಗಳ ಅನ್ವಯ ಕರ್ನಾಟಕ ಕುಡಿಯುವ ನೀರು, ವಿದ್ಯುತ್, ಸಾರಿಗೆ, ಶೌಚಾಲಯ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ಜನರಿಗೆ ಸಮಾನವಾಗಿ ಒದಗಿಸುವ ವಿಷಯದಲ್ಲಿ ದಕ್ಷಿಣ ಭಾರತದ ಉಳಿದೆಲ್ಲ ರಾಜ್ಯಗಳಿಗಿಂತಲೂ ಹಿಂದುಳಿದಿದೆ. <br /> <br /> ಈ ಹಿನ್ನಡೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ. ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ಸರ್ಕಾರಿ ಭೂಮಿ ಕಬಳಿಕೆ, ರಾಜಕೀಯ ಅಸ್ಥಿರತೆ ಸೇರಿದಂತೆ ಅನೇಕ ಅವ್ಯವಹಾರಗಳಿಂದ ಕರ್ನಾಟಕ ದೇಶದ ಗಮನ ಸೆಳೆಯುತ್ತಿದೆ. <br /> <br /> ಆಡಳಿತ ಪಕ್ಷದ ಶಾಸಕರು, ಸಂಸದರೇ ಗುಂಪುಗಾರಿಕೆಯಲ್ಲಿ ತೊಡಗಿ ಸರ್ಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ. ನಾಯಕತ್ವಕ್ಕಾಗಿ ಪೈಪೋಟಿ ಹೆಚ್ಚಾಗಿ ಜನಹಿತವನ್ನು ಕಡೆಗಣಿಸಲಾಗಿದೆ. ರಾಜಕೀಯ ಅನಿಶ್ಚಿತತೆಯೇ ಅಭಿವೃದ್ಧಿ ಹಿನ್ನಡೆಗೆ ಕಾರಣ. <br /> <br /> ಮೇಲುನೋಟಕ್ಕೆ ಎಲ್ಲ ವ್ಯವಸ್ಥಿತವಾಗಿರುವಂತೆ ಕಂಡರೂ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಒಂದೆರಡು ದಶಕಗಳ ಹಿಂದಿನವರೆಗೂ ಮಾದರಿ ರಾಜ್ಯವಾಗಿದ್ದ ಕರ್ನಾಟಕ ಈಗ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ಆತಂಕದ ವಿಷಯ. ರಾಜ್ಯದಲ್ಲಿ ಸಂಪನ್ಮೂಲಗಳಿಗೆ ಕೊರತೆ ಇಲ್ಲ. <br /> <br /> ಆದರೆ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸುವ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜಾಗತೀಕರಣದ ನಂತರ ನಗರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಸಿಕ್ಕಿದೆ.<br /> <br /> ಸರ್ಕಾರ ಗ್ರಾಮೀಣ ಪ್ರದೇಶದ ಜನರನ್ನು ಕಡೆಗಣಿಸಿದೆ. ಸಾಕ್ಷರತೆ ಹೆಚ್ಚಾಗಿರುವ ಕೇರಳ ಅಭಿವೃದ್ಧಿ ವಿಷಯದಲ್ಲಿ ದಕ್ಷಿಣದ ಉಳಿದ ಮೂರು ರಾಜ್ಯಗಳಿಗಿಂತ ಮುಂದಿರುವುದು ಹೊಸ ಬೆಳವಣಿಗೆ. ಈ ವಿಷಯದಲ್ಲಿ ಕೇರಳ ರಾಜ್ಯಕ್ಕೆ ಮಾದರಿ ಆಗಬೇಕಿದೆ.<br /> <br /> ಕರ್ನಾಟಕ ಪ್ರತಿ ಮೂರು ನಾಲ್ಕು ವರ್ಷಗಳಿಗೊಮ್ಮೆ ಬರಗಾಲದ ಪರಿಸ್ಥಿತಿ ಎದುರಿಸುತ್ತಿದೆ. ಉತ್ತರ ಕರ್ನಾಟಕದ 8-10 ಜಿಲ್ಲೆಗಳ ಲಕ್ಷಾಂತರ ಜನರು ಪ್ರತಿ ವರ್ಷ ಕೆಲಸ ಅರಸಿ ಗುಳೆ ಹೋಗುತ್ತಾರೆ. ಇಡೀ ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ವಿದ್ಯುತ್ ಕೊರತೆ ಹೆಚ್ಚಾಗಿದೆ. ಕೃಷಿ, ಕೈಗಾರಿಕೆ ಉತ್ಪಾದನೆ ಕುಸಿದಿದೆ. <br /> <br /> ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ. ಬೆಂಗಳೂರು ಮತ್ತಿತರ ನಗರಗಳಿಗೆ ಹೊರ ರಾಜ್ಯಗಳಿಂದ ವಲಸೆ ಬರುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ರಾಜ್ಯದ ಸಂಪನ್ಮೂಲ ಕ್ರೋಡೀಕರಿಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡುವ ಬದ್ಧತೆ ಮತ್ತು ದಕ್ಷತೆ ಸರ್ಕಾರಿ ಸಿಬ್ಬಂದಿಯಲ್ಲಿ ಕಾಣುತ್ತಿಲ್ಲ.<br /> <br /> ರಾಜ್ಯದ ಅಭಿವೃದ್ಧಿ ಹಿನ್ನಡೆಗೆ ಇವು ಮುಖ್ಯ ಕಾರಣಗಳು. ಅದೇನೇ ಇರಲಿ, ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಭಿವೃದ್ಧಿ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಅಭಿವೃದ್ಧಿ ಮಂತ್ರವನ್ನು ಮತಗಳಿಕೆಯ ತಂತ್ರವಾಗಿ ಮಾತ್ರ ಜಪಿಸುವುದನ್ನು ಬಿಟ್ಟು ಜನರ ಸಮಸ್ಯೆಗಳತ್ತ ಗಮನಹರಿಸಬೇಕು. <br /> <br /> ಲಭ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ನ್ಯಾಯಸಮ್ಮತವಾಗಿ ಎಲ್ಲ ಜಿಲ್ಲೆಗಳಿಗೂ ಹಂಚುವ ರಾಜಕೀಯ ಬದ್ಧತೆಯನ್ನು ಪ್ರದರ್ಶಿಸಬೇಕು. ಅದು ಸಾಧ್ಯವಾದರೆ ಅಭಿವೃದ್ಧಿ ಇನ್ನಷ್ಟು ಕುಸಿಯದಂತೆ ತಡೆಯಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕರ್ನಾಟಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಾಧನೆಗಳಿಂದ ಜಗತ್ತಿನ ಗಮನ ಸೆಳೆದಿದ್ದರೂ ಅಭಿವೃದ್ಧಿಯ ವಿವಿಧ ಮಾನದಂಡಗಳಲ್ಲಿ ಹಿಂದುಳಿದಿದೆ. <br /> <br /> ಇತ್ತೀಚೆಗೆ ಬಿಡುಗಡೆಯಾದ 2011ರ ಮನೆಗಣತಿಯ ಅಂಕಿ ಅಂಶಗಳ ಅನ್ವಯ ಕರ್ನಾಟಕ ಕುಡಿಯುವ ನೀರು, ವಿದ್ಯುತ್, ಸಾರಿಗೆ, ಶೌಚಾಲಯ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ಜನರಿಗೆ ಸಮಾನವಾಗಿ ಒದಗಿಸುವ ವಿಷಯದಲ್ಲಿ ದಕ್ಷಿಣ ಭಾರತದ ಉಳಿದೆಲ್ಲ ರಾಜ್ಯಗಳಿಗಿಂತಲೂ ಹಿಂದುಳಿದಿದೆ. <br /> <br /> ಈ ಹಿನ್ನಡೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ. ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ಸರ್ಕಾರಿ ಭೂಮಿ ಕಬಳಿಕೆ, ರಾಜಕೀಯ ಅಸ್ಥಿರತೆ ಸೇರಿದಂತೆ ಅನೇಕ ಅವ್ಯವಹಾರಗಳಿಂದ ಕರ್ನಾಟಕ ದೇಶದ ಗಮನ ಸೆಳೆಯುತ್ತಿದೆ. <br /> <br /> ಆಡಳಿತ ಪಕ್ಷದ ಶಾಸಕರು, ಸಂಸದರೇ ಗುಂಪುಗಾರಿಕೆಯಲ್ಲಿ ತೊಡಗಿ ಸರ್ಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ. ನಾಯಕತ್ವಕ್ಕಾಗಿ ಪೈಪೋಟಿ ಹೆಚ್ಚಾಗಿ ಜನಹಿತವನ್ನು ಕಡೆಗಣಿಸಲಾಗಿದೆ. ರಾಜಕೀಯ ಅನಿಶ್ಚಿತತೆಯೇ ಅಭಿವೃದ್ಧಿ ಹಿನ್ನಡೆಗೆ ಕಾರಣ. <br /> <br /> ಮೇಲುನೋಟಕ್ಕೆ ಎಲ್ಲ ವ್ಯವಸ್ಥಿತವಾಗಿರುವಂತೆ ಕಂಡರೂ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಒಂದೆರಡು ದಶಕಗಳ ಹಿಂದಿನವರೆಗೂ ಮಾದರಿ ರಾಜ್ಯವಾಗಿದ್ದ ಕರ್ನಾಟಕ ಈಗ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ಆತಂಕದ ವಿಷಯ. ರಾಜ್ಯದಲ್ಲಿ ಸಂಪನ್ಮೂಲಗಳಿಗೆ ಕೊರತೆ ಇಲ್ಲ. <br /> <br /> ಆದರೆ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸುವ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜಾಗತೀಕರಣದ ನಂತರ ನಗರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಸಿಕ್ಕಿದೆ.<br /> <br /> ಸರ್ಕಾರ ಗ್ರಾಮೀಣ ಪ್ರದೇಶದ ಜನರನ್ನು ಕಡೆಗಣಿಸಿದೆ. ಸಾಕ್ಷರತೆ ಹೆಚ್ಚಾಗಿರುವ ಕೇರಳ ಅಭಿವೃದ್ಧಿ ವಿಷಯದಲ್ಲಿ ದಕ್ಷಿಣದ ಉಳಿದ ಮೂರು ರಾಜ್ಯಗಳಿಗಿಂತ ಮುಂದಿರುವುದು ಹೊಸ ಬೆಳವಣಿಗೆ. ಈ ವಿಷಯದಲ್ಲಿ ಕೇರಳ ರಾಜ್ಯಕ್ಕೆ ಮಾದರಿ ಆಗಬೇಕಿದೆ.<br /> <br /> ಕರ್ನಾಟಕ ಪ್ರತಿ ಮೂರು ನಾಲ್ಕು ವರ್ಷಗಳಿಗೊಮ್ಮೆ ಬರಗಾಲದ ಪರಿಸ್ಥಿತಿ ಎದುರಿಸುತ್ತಿದೆ. ಉತ್ತರ ಕರ್ನಾಟಕದ 8-10 ಜಿಲ್ಲೆಗಳ ಲಕ್ಷಾಂತರ ಜನರು ಪ್ರತಿ ವರ್ಷ ಕೆಲಸ ಅರಸಿ ಗುಳೆ ಹೋಗುತ್ತಾರೆ. ಇಡೀ ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ವಿದ್ಯುತ್ ಕೊರತೆ ಹೆಚ್ಚಾಗಿದೆ. ಕೃಷಿ, ಕೈಗಾರಿಕೆ ಉತ್ಪಾದನೆ ಕುಸಿದಿದೆ. <br /> <br /> ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ. ಬೆಂಗಳೂರು ಮತ್ತಿತರ ನಗರಗಳಿಗೆ ಹೊರ ರಾಜ್ಯಗಳಿಂದ ವಲಸೆ ಬರುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ರಾಜ್ಯದ ಸಂಪನ್ಮೂಲ ಕ್ರೋಡೀಕರಿಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡುವ ಬದ್ಧತೆ ಮತ್ತು ದಕ್ಷತೆ ಸರ್ಕಾರಿ ಸಿಬ್ಬಂದಿಯಲ್ಲಿ ಕಾಣುತ್ತಿಲ್ಲ.<br /> <br /> ರಾಜ್ಯದ ಅಭಿವೃದ್ಧಿ ಹಿನ್ನಡೆಗೆ ಇವು ಮುಖ್ಯ ಕಾರಣಗಳು. ಅದೇನೇ ಇರಲಿ, ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಭಿವೃದ್ಧಿ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಅಭಿವೃದ್ಧಿ ಮಂತ್ರವನ್ನು ಮತಗಳಿಕೆಯ ತಂತ್ರವಾಗಿ ಮಾತ್ರ ಜಪಿಸುವುದನ್ನು ಬಿಟ್ಟು ಜನರ ಸಮಸ್ಯೆಗಳತ್ತ ಗಮನಹರಿಸಬೇಕು. <br /> <br /> ಲಭ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ನ್ಯಾಯಸಮ್ಮತವಾಗಿ ಎಲ್ಲ ಜಿಲ್ಲೆಗಳಿಗೂ ಹಂಚುವ ರಾಜಕೀಯ ಬದ್ಧತೆಯನ್ನು ಪ್ರದರ್ಶಿಸಬೇಕು. ಅದು ಸಾಧ್ಯವಾದರೆ ಅಭಿವೃದ್ಧಿ ಇನ್ನಷ್ಟು ಕುಸಿಯದಂತೆ ತಡೆಯಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>