<p><strong>ಆನೇಕಲ್: </strong>ಪ್ರತಿ ಗ್ರಾಮದಲ್ಲೂ ಗ್ರಂಥಾಲಯ ಸ್ಥಾಪನೆಯ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನುಡಿದರು.<br /> <br /> ತಾಲ್ಲೂಕಿನ ನಾರಾಯಣಘಟ್ಟದಲ್ಲಿ ಭಾನುವಾರ ಸಾರ್ವಜನಿಕ ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮಕ್ಕೊಂದು ಗ್ರಂಥಾಲಯವಿದ್ದರೆ ಜನರ ಜ್ಞಾನಾಭಿವೃದ್ದಿಗೆ ಸಹಾಯವಾಗುತ್ತದೆ. ಸರ್ಕಾರ ಗ್ರಾಮ ಪಂಚಾಯಿತಿಗೊಂದು ಗ್ರಂಥಾಲಯದ ವ್ಯವಸ್ಥೆ ಮಾಡುತ್ತಿದೆ. ಪ್ರತಿ ಗ್ರಾಮಗಳಲ್ಲೂ ಗ್ರಂಥಾಲಯ ಸ್ಥಾಪನೆಯಾದರೇ ಆಯಾ ಗ್ರಾಮಗಳ ಜನರಿಗೆ ಉಪಯುಕ್ತವಾಗುತ್ತದೆ.<br /> <br /> ನಾರಾಯಣಘಟ್ಟ ಗ್ರಾಮದ ನಡುವೆಯೇ ಐಆರ್ಆರ್ ರಸ್ತೆ ಹಾದು ಹೋಗುತ್ತಿದ್ದು ಗ್ರಾಮ ಸ್ಥಳಾಂತರ ಮಾಡಬೇಕಾದ ಪರಿಸ್ಥಿತಿಯಿದೆ. ಹಾಗಾಗಿ ಗ್ರಾಮವನ್ನು ಉಳಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ನೀಡಿದ ಮನವಿಗೆ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಮೂಲಗ್ರಾಮವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ಸಿ.ರಾಮಚಂದ್ರ ಮಾತನಾಡಿ ಗ್ರಂಥಾಲಯಗಳು ಗ್ರಾಮದ ಜ್ಞಾನದ ದೀವಿಗೆಗಳು ಮನುಕುಲಕ್ಕೆ ಅವಶ್ಯಕ<br /> ವಿರುವ ಜೀವನದ ಮೌಲ್ಯಗಳನ್ನು ತಿಳಿದುಕೊಳ್ಳಲು ಗ್ರಂಥಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.<br /> <br /> ಶಾಸಕ ಬಿ.ಶಿವಣ್ಣ ಮಾತನಾಡಿ, ಗ್ರಂಥಾಲಯವನ್ನು ಉನ್ನತೀಕರಿಸಲಾಗುವುದು. ಡಿಜಿಟಲ್ ಗ್ರಂಥಾಲಯ ಸ್ಥಾಪನೆಯ ಬಗ್ಗೆ ಪ್ರಸ್ತಾವನೆಯಿದೆ. ಇದಕ್ಕೆ ಅವಶ್ಯಕ ಇರುವ ಐದು ಗಣಕಯಂತ್ರಗಳನ್ನು ಶಾಸಕರ ಅನುದಾನದಲ್ಲಿ ನೀಡಲಾಗುವುದು. ಗ್ರಂಥಾಲಯದ ಕಾಂಪೌಂಡ್ ನಿರ್ಮಾಣಕ್ಕೆ ಈಗಾಗಲೇ ₨5 ಲಕ್ಷ ನೀಡಲಾಗಿದೆ. ಗ್ರಂಥಾಲಯದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.<br /> <br /> ಸಾಹಿತಿ ಶೂದ್ರ ಶ್ರೀನಿವಾಸ್ ಮಾತನಾಡಿ, ರಾಜಕೀಯ ಜಂಜಾಟಗಳಿಂದ ಜನಪ್ರತಿನಿಧಿಗಳು ಓದುವ ಹವ್ಯಾಸವನ್ನು ಬಿಟ್ಟಿದ್ದಾರೆ. ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವ ಅವಶ್ಯಕತೆಯಿದೆ. ಪ್ರತಿಯೊಬ್ಬರ ಮನೆಯಲ್ಲಿಯೂ ಗ್ರಂಥಾಲಯವನ್ನು ಸ್ಥಾಪಿಸಿಕೊಳ್ಳಬೇಕು. ಪುಸ್ತಕಗಳನ್ನು ಕೊಳ್ಳುವ, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.<br /> <br /> ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಚಂದ್ರರೆಡ್ಡಿ, ಸದಸ್ಯರಾದ ಮಂಜುಳಾ, ರಮೇಶ್ರೆಡ್ಡಿ, ಜೆ.ಶಿವಕುಮಾರ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿದೇರ್ಶಕ ಡಾ.ಸತೀಶ್ ಕುಮಾರ್.ಎಸ್.ಹೊಸಮನಿ, ಉಪನಿದೇರ್ಶಕ ದಿವಾಕರ್, ನಿವೃತ್ತ ಮುಖ್ಯ ಶಿಕ್ಷಕ ಯಲ್ಲಾರೆಡ್ಡಿ, ಗೋಪಾಲರೆಡ್ಡಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪ್ರತಿ ಗ್ರಾಮದಲ್ಲೂ ಗ್ರಂಥಾಲಯ ಸ್ಥಾಪನೆಯ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನುಡಿದರು.<br /> <br /> ತಾಲ್ಲೂಕಿನ ನಾರಾಯಣಘಟ್ಟದಲ್ಲಿ ಭಾನುವಾರ ಸಾರ್ವಜನಿಕ ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮಕ್ಕೊಂದು ಗ್ರಂಥಾಲಯವಿದ್ದರೆ ಜನರ ಜ್ಞಾನಾಭಿವೃದ್ದಿಗೆ ಸಹಾಯವಾಗುತ್ತದೆ. ಸರ್ಕಾರ ಗ್ರಾಮ ಪಂಚಾಯಿತಿಗೊಂದು ಗ್ರಂಥಾಲಯದ ವ್ಯವಸ್ಥೆ ಮಾಡುತ್ತಿದೆ. ಪ್ರತಿ ಗ್ರಾಮಗಳಲ್ಲೂ ಗ್ರಂಥಾಲಯ ಸ್ಥಾಪನೆಯಾದರೇ ಆಯಾ ಗ್ರಾಮಗಳ ಜನರಿಗೆ ಉಪಯುಕ್ತವಾಗುತ್ತದೆ.<br /> <br /> ನಾರಾಯಣಘಟ್ಟ ಗ್ರಾಮದ ನಡುವೆಯೇ ಐಆರ್ಆರ್ ರಸ್ತೆ ಹಾದು ಹೋಗುತ್ತಿದ್ದು ಗ್ರಾಮ ಸ್ಥಳಾಂತರ ಮಾಡಬೇಕಾದ ಪರಿಸ್ಥಿತಿಯಿದೆ. ಹಾಗಾಗಿ ಗ್ರಾಮವನ್ನು ಉಳಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ನೀಡಿದ ಮನವಿಗೆ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಮೂಲಗ್ರಾಮವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ಸಿ.ರಾಮಚಂದ್ರ ಮಾತನಾಡಿ ಗ್ರಂಥಾಲಯಗಳು ಗ್ರಾಮದ ಜ್ಞಾನದ ದೀವಿಗೆಗಳು ಮನುಕುಲಕ್ಕೆ ಅವಶ್ಯಕ<br /> ವಿರುವ ಜೀವನದ ಮೌಲ್ಯಗಳನ್ನು ತಿಳಿದುಕೊಳ್ಳಲು ಗ್ರಂಥಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.<br /> <br /> ಶಾಸಕ ಬಿ.ಶಿವಣ್ಣ ಮಾತನಾಡಿ, ಗ್ರಂಥಾಲಯವನ್ನು ಉನ್ನತೀಕರಿಸಲಾಗುವುದು. ಡಿಜಿಟಲ್ ಗ್ರಂಥಾಲಯ ಸ್ಥಾಪನೆಯ ಬಗ್ಗೆ ಪ್ರಸ್ತಾವನೆಯಿದೆ. ಇದಕ್ಕೆ ಅವಶ್ಯಕ ಇರುವ ಐದು ಗಣಕಯಂತ್ರಗಳನ್ನು ಶಾಸಕರ ಅನುದಾನದಲ್ಲಿ ನೀಡಲಾಗುವುದು. ಗ್ರಂಥಾಲಯದ ಕಾಂಪೌಂಡ್ ನಿರ್ಮಾಣಕ್ಕೆ ಈಗಾಗಲೇ ₨5 ಲಕ್ಷ ನೀಡಲಾಗಿದೆ. ಗ್ರಂಥಾಲಯದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.<br /> <br /> ಸಾಹಿತಿ ಶೂದ್ರ ಶ್ರೀನಿವಾಸ್ ಮಾತನಾಡಿ, ರಾಜಕೀಯ ಜಂಜಾಟಗಳಿಂದ ಜನಪ್ರತಿನಿಧಿಗಳು ಓದುವ ಹವ್ಯಾಸವನ್ನು ಬಿಟ್ಟಿದ್ದಾರೆ. ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವ ಅವಶ್ಯಕತೆಯಿದೆ. ಪ್ರತಿಯೊಬ್ಬರ ಮನೆಯಲ್ಲಿಯೂ ಗ್ರಂಥಾಲಯವನ್ನು ಸ್ಥಾಪಿಸಿಕೊಳ್ಳಬೇಕು. ಪುಸ್ತಕಗಳನ್ನು ಕೊಳ್ಳುವ, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.<br /> <br /> ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಚಂದ್ರರೆಡ್ಡಿ, ಸದಸ್ಯರಾದ ಮಂಜುಳಾ, ರಮೇಶ್ರೆಡ್ಡಿ, ಜೆ.ಶಿವಕುಮಾರ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿದೇರ್ಶಕ ಡಾ.ಸತೀಶ್ ಕುಮಾರ್.ಎಸ್.ಹೊಸಮನಿ, ಉಪನಿದೇರ್ಶಕ ದಿವಾಕರ್, ನಿವೃತ್ತ ಮುಖ್ಯ ಶಿಕ್ಷಕ ಯಲ್ಲಾರೆಡ್ಡಿ, ಗೋಪಾಲರೆಡ್ಡಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>