<p>ಚೆನ್ನೈ (ಪಿಟಿಐ): ದೇಶದಲ್ಲಿ ಎಲ್ಟಿಟಿಇ ನಿಷೇಧ ಕುರಿತಾದ ಕೇಂದ್ರ ಸರ್ಕಾರ ಅಧಿಸೂಚನೆ ವಿರುದ್ಧ ಎಂಡಿಎಂಕೆ ನಾಯಕ ವೈಕೋ ಮತ್ತು ವಕೀಲ ಪಿ. ಪುಗಳೇಂದಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಕಾಯ್ದಿರಿಸಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಪರ ಮಂಡಿಸಿದ ವಾದ- ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಎಲಿಪ್ ಧರ್ಮರಾವ್ ಮತ್ತು ಎಂ. ವೇಣುಗೋಪಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.<br /> <br /> 1992ರಲ್ಲಿ ಕೇಂದ್ರ ಸರ್ಕಾರ ಎಲ್ಟಿಟಿಇಯನ್ನು ನಿಷೇಧಿಸಿತ್ತು. ನಂತರ ಪ್ರತಿ ಎರಡು ವರ್ಷಗಳಿಗೊಮ್ಮೆ ಆ ನಿಷೇಧವನ್ನು ವಿಸ್ತರಿಸುತ್ತಿದೆ. ಕೇಂದ್ರದ ಈ ಕ್ರಮದಿಂದ ಅಮಾಯಕ ಜನರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಟಿಟಿಇ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕು ಎಂದು ವೈಕೋ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. <br /> <br /> ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ. ರವೀಂದ್ರನ್, `ಕೇಂದ್ರದ ನಿಲುವು ಪ್ರಶ್ನಿಸಿರುವ ವೈಕೋ ಆ ಸಂಘಟನೆಗೆ ಸೇರಿಲ್ಲದ ಕಾರಣ; ಎಲ್ಟಿಟಿಇ ನಿಷೇಧ ತೆರವುಗೊಳಿಸಿ ಎಂದು ಕೇಳುವ ಹಕ್ಕು ಅವರಿಗಿಲ್ಲ. ಹಾಗಾಗಿ ಅವರ ಅರ್ಜಿ ವಜಾಗೊಳಿಸಬೇಕು~ ಎಂದು ಕೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ (ಪಿಟಿಐ): ದೇಶದಲ್ಲಿ ಎಲ್ಟಿಟಿಇ ನಿಷೇಧ ಕುರಿತಾದ ಕೇಂದ್ರ ಸರ್ಕಾರ ಅಧಿಸೂಚನೆ ವಿರುದ್ಧ ಎಂಡಿಎಂಕೆ ನಾಯಕ ವೈಕೋ ಮತ್ತು ವಕೀಲ ಪಿ. ಪುಗಳೇಂದಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಕಾಯ್ದಿರಿಸಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಪರ ಮಂಡಿಸಿದ ವಾದ- ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಎಲಿಪ್ ಧರ್ಮರಾವ್ ಮತ್ತು ಎಂ. ವೇಣುಗೋಪಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.<br /> <br /> 1992ರಲ್ಲಿ ಕೇಂದ್ರ ಸರ್ಕಾರ ಎಲ್ಟಿಟಿಇಯನ್ನು ನಿಷೇಧಿಸಿತ್ತು. ನಂತರ ಪ್ರತಿ ಎರಡು ವರ್ಷಗಳಿಗೊಮ್ಮೆ ಆ ನಿಷೇಧವನ್ನು ವಿಸ್ತರಿಸುತ್ತಿದೆ. ಕೇಂದ್ರದ ಈ ಕ್ರಮದಿಂದ ಅಮಾಯಕ ಜನರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಟಿಟಿಇ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕು ಎಂದು ವೈಕೋ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. <br /> <br /> ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ. ರವೀಂದ್ರನ್, `ಕೇಂದ್ರದ ನಿಲುವು ಪ್ರಶ್ನಿಸಿರುವ ವೈಕೋ ಆ ಸಂಘಟನೆಗೆ ಸೇರಿಲ್ಲದ ಕಾರಣ; ಎಲ್ಟಿಟಿಇ ನಿಷೇಧ ತೆರವುಗೊಳಿಸಿ ಎಂದು ಕೇಳುವ ಹಕ್ಕು ಅವರಿಗಿಲ್ಲ. ಹಾಗಾಗಿ ಅವರ ಅರ್ಜಿ ವಜಾಗೊಳಿಸಬೇಕು~ ಎಂದು ಕೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>