<p><strong>ಬೆಂಗಳೂರು:</strong> ‘ಗ್ಯಾಸ್ ಏಜೆನ್ಸಿಗಳು ಆಧಾರ್ ಕಾರ್ಡ್ ಇಲ್ಲದ ಗ್ರಾಹಕರಿಗೂ ಅಡುಗೆ ಅನಿಲ ಪೂರೈಸಬೇಕು’ ಎಂದು ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ತಾಕೀತು ಮಾಡಿದರು. ಭಾರತೀಯ ವಾಣಿಜ್ಯ ಒಕ್ಕೂಟಗಳು ಸೆಂಟ್ರಲ್ ಕಾಲೇ ಜಿನಲ್ಲಿ ಶನಿವಾರ ಆಯೋಜಿಸಿದ್ದ ಅಖಿಲ ಭಾರತ ವಾಣಿಜ್ಯ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿ, ‘ಸಾರ್ವಜ ನಿಕರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿತ್ತು. ಸುಪ್ರೀಂಕೋರ್ಟ್ ಆದೇಶದ ನಂತರ ಇದನ್ನು ಬದ ಲಾಯಿಸಲಾಗಿದೆ. ಹಾಗಾಗಿ ಎಲ್ಪಿಜಿ ಪೂರೈಕೆಗೆ ಆಧಾರ್ ಕಾರ್ಡ್ ಅವಶ್ಯಕತೆ ಇಲ್ಲ’ ಎಂದರು.<br /> <br /> ‘ದೇಶದಲ್ಲಿ 14 ಕೋಟಿಗೂ ಹೆಚ್ಚು ಮಂದಿ ಎಲ್ಪಿಜಿ ಸಂಪರ್ಕ ಪಡೆದಿದ್ದಾರೆ. 3 ಕೋಟಿಗಿಂತ ಹೆಚ್ಚು ಮಂದಿ ನಕಲಿ ದಾಖಲೆ ಸೃಷ್ಟಿಸಿ ಸಂಪರ್ಕ ಪಡೆದಿದ್ದಾರೆ. ಆಧಾರ್ ಕಾರ್ಡ್ ಇದ್ದರೆ, ಅರ್ಹ ಗ್ರಾಹಕರಿಗೆ ಹೆಚ್ಚಿನ ಸಬ್ಸಿಡಿ ದೊರೆಯುತ್ತದೆ. ಗ್ರಾಹಕರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್ ಇರುವುದು ಒಳಿತು’ ಎಂದು ಪ್ರತಿಪಾದಿಸಿದರು. ‘ದೇಶದ ಇಂಧನ ವ್ಯವಸ್ಥೆ ಯಲ್ಲಿ ಸುಧಾರಣೆಗಳಾಗುತ್ತಿದ್ದು, 2030ರ ವೇಳೆಗೆ ಈ ಕ್ಷೇತ್ರ ದಲ್ಲಿ ಭಾರತ ಸ್ವಾವಲಂಬನೆಯನ್ನು ಸಾಧಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ಯಾಸ್ ಏಜೆನ್ಸಿಗಳು ಆಧಾರ್ ಕಾರ್ಡ್ ಇಲ್ಲದ ಗ್ರಾಹಕರಿಗೂ ಅಡುಗೆ ಅನಿಲ ಪೂರೈಸಬೇಕು’ ಎಂದು ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ತಾಕೀತು ಮಾಡಿದರು. ಭಾರತೀಯ ವಾಣಿಜ್ಯ ಒಕ್ಕೂಟಗಳು ಸೆಂಟ್ರಲ್ ಕಾಲೇ ಜಿನಲ್ಲಿ ಶನಿವಾರ ಆಯೋಜಿಸಿದ್ದ ಅಖಿಲ ಭಾರತ ವಾಣಿಜ್ಯ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿ, ‘ಸಾರ್ವಜ ನಿಕರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿತ್ತು. ಸುಪ್ರೀಂಕೋರ್ಟ್ ಆದೇಶದ ನಂತರ ಇದನ್ನು ಬದ ಲಾಯಿಸಲಾಗಿದೆ. ಹಾಗಾಗಿ ಎಲ್ಪಿಜಿ ಪೂರೈಕೆಗೆ ಆಧಾರ್ ಕಾರ್ಡ್ ಅವಶ್ಯಕತೆ ಇಲ್ಲ’ ಎಂದರು.<br /> <br /> ‘ದೇಶದಲ್ಲಿ 14 ಕೋಟಿಗೂ ಹೆಚ್ಚು ಮಂದಿ ಎಲ್ಪಿಜಿ ಸಂಪರ್ಕ ಪಡೆದಿದ್ದಾರೆ. 3 ಕೋಟಿಗಿಂತ ಹೆಚ್ಚು ಮಂದಿ ನಕಲಿ ದಾಖಲೆ ಸೃಷ್ಟಿಸಿ ಸಂಪರ್ಕ ಪಡೆದಿದ್ದಾರೆ. ಆಧಾರ್ ಕಾರ್ಡ್ ಇದ್ದರೆ, ಅರ್ಹ ಗ್ರಾಹಕರಿಗೆ ಹೆಚ್ಚಿನ ಸಬ್ಸಿಡಿ ದೊರೆಯುತ್ತದೆ. ಗ್ರಾಹಕರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್ ಇರುವುದು ಒಳಿತು’ ಎಂದು ಪ್ರತಿಪಾದಿಸಿದರು. ‘ದೇಶದ ಇಂಧನ ವ್ಯವಸ್ಥೆ ಯಲ್ಲಿ ಸುಧಾರಣೆಗಳಾಗುತ್ತಿದ್ದು, 2030ರ ವೇಳೆಗೆ ಈ ಕ್ಷೇತ್ರ ದಲ್ಲಿ ಭಾರತ ಸ್ವಾವಲಂಬನೆಯನ್ನು ಸಾಧಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>