<p><strong>ಚೆನ್ನೈ (ಪಿಟಿಐ): </strong>ಕಳೆದೊಂದು ವಾರದಿಂದ ಅಡುಗೆ ಅನಿಲದ (ಎಲ್ಪಿಜಿ) ವ್ಯತ್ಯಯದಿಂದ ಪರದಾಡುತ್ತಿದ್ದವರಿಗಿದು ಸಂತಸದ ಸುದ್ದಿ...!</p>.<p>ಅನಿಲ ಸಾಗಣೆ ಟ್ಯಾಂಕರ್ಗಳ ಬಾಡಿಗೆ ದರ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದ ಟ್ಯಾಂಕರ್ ಮಾಲಿಕರು ಸರ್ಕಾರ ಬುಧವಾರ ತೈಲ ಮಾರಾಟ ಕಂಪೆನಿಗಳ ಜತೆ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗುರುವಾರ ಮುಷ್ಕರ ಕೈ ಬಿಟ್ಟಿದ್ದಾರೆ.<br /> <br /> ದರ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 29 ರಂದು ದಕ್ಷಿಣ ಪ್ರಾಂತೀಯ ಸಗಟು ಎಲ್ಪಿಜಿ ಸಾಗಣೆ ಟ್ಯಾಂಕರ್ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಎಲ್ಪಿಜಿ ಗ್ರಾಹಕರು ವಾರಪೂರ್ತಿ ಪರದಾಡುವಂತಾಗಿತ್ತು.<br /> <br /> ಮುಷ್ಕರವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ತೈಲ ಮಾರಾಟ ಕಂಪೆನಿ ಹಾಗೂ ಟ್ಯಾಂಕರ್ ಮಾಲಿಕರ ಜತೆ ಶನಿವಾರ ನಡೆಸಿದ ಸಭೆ ವಿಫಲಗೊಂಡಿತ್ತು.</p>.<p>ಆದ್ದರಿಂದ ಬುಧವಾರ ಸರ್ಕಾರ ನಾಗರೀಕ ಪೂರೈಕೆ ಮತ್ತು ಗ್ರಾಹಕರ ಹಿತರಕ್ಷಣಾ ಆಯೋಗದ ಆಯುಕ್ತ ಪಿ.ಎಂ.ಬಷಿರ್ ಅಮ್ಮಹದ್ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ಕಳೆದೊಂದು ವಾರದಿಂದ ಅಡುಗೆ ಅನಿಲದ (ಎಲ್ಪಿಜಿ) ವ್ಯತ್ಯಯದಿಂದ ಪರದಾಡುತ್ತಿದ್ದವರಿಗಿದು ಸಂತಸದ ಸುದ್ದಿ...!</p>.<p>ಅನಿಲ ಸಾಗಣೆ ಟ್ಯಾಂಕರ್ಗಳ ಬಾಡಿಗೆ ದರ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದ ಟ್ಯಾಂಕರ್ ಮಾಲಿಕರು ಸರ್ಕಾರ ಬುಧವಾರ ತೈಲ ಮಾರಾಟ ಕಂಪೆನಿಗಳ ಜತೆ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗುರುವಾರ ಮುಷ್ಕರ ಕೈ ಬಿಟ್ಟಿದ್ದಾರೆ.<br /> <br /> ದರ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 29 ರಂದು ದಕ್ಷಿಣ ಪ್ರಾಂತೀಯ ಸಗಟು ಎಲ್ಪಿಜಿ ಸಾಗಣೆ ಟ್ಯಾಂಕರ್ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಎಲ್ಪಿಜಿ ಗ್ರಾಹಕರು ವಾರಪೂರ್ತಿ ಪರದಾಡುವಂತಾಗಿತ್ತು.<br /> <br /> ಮುಷ್ಕರವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ತೈಲ ಮಾರಾಟ ಕಂಪೆನಿ ಹಾಗೂ ಟ್ಯಾಂಕರ್ ಮಾಲಿಕರ ಜತೆ ಶನಿವಾರ ನಡೆಸಿದ ಸಭೆ ವಿಫಲಗೊಂಡಿತ್ತು.</p>.<p>ಆದ್ದರಿಂದ ಬುಧವಾರ ಸರ್ಕಾರ ನಾಗರೀಕ ಪೂರೈಕೆ ಮತ್ತು ಗ್ರಾಹಕರ ಹಿತರಕ್ಷಣಾ ಆಯೋಗದ ಆಯುಕ್ತ ಪಿ.ಎಂ.ಬಷಿರ್ ಅಮ್ಮಹದ್ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>