<p><strong>ರಾಮನಗರ: </strong>ದಲಿತರ ಎಸ್.ಸಿ.ಪಿ ಯೋಜನೆಗಳ ಸೂಕ್ತ ಅನುಷ್ಠಾನಕ್ಕಾಗಿ `ಕೇಂದ್ರ ಶಾಸನ~ ಜಾರಿಗೆ ತರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ದಲಿತರ ಹಕ್ಕುಗಳ ಹೋರಾಟ ಸಮಿತಿಯ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಎನ್ಸಿಪಿ ಯೋಜನೆಗಳು ಸರ್ಕಾರದ ವಾರ್ಷಿಕ ಮತ್ತು ಪಂಚ ವಾರ್ಷಿಕ ಯೋಜನೆಗಳ ಸಮಗ್ರ ಭಾಗವಾಗಿರಬೇಕು. ಈ ಹಂಚಿಕೆಯ ಮೊತ್ತವನ್ನು ಪರಿವರ್ತನೆಗೊಳಿಸುವುದು ಮತ್ತು ಅಳಿದು ಹೋಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.<br /> <br /> ಎನ್ಸಿಪಿ ಯೋಜನೆ ಅನುಷ್ಠಾನದ ಪರಿಶೀಲನೆಗೆ ಶ್ವೇತಪತ್ರ ಹೊರಡಿಸಬೇಕು. ಎಸ್.ಸಿ, ಎಸ್.ಟಿ ಸಂಬಂಧಿಸಿದ ಚರ್ಚೆಗೆ ವಿಶೇಷವಾದ ವಿಧಾನಸಭೆ ಮತ್ತು ಪಾರ್ಲಿಮೆಂಟ್ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದರು.<br /> ಅರಣ್ಯ ಮತ್ತು ಬಗರ್ ಹುಕುಂನಲ್ಲಿ ದಲಿತರು ಒತ್ತುವರಿ ಮಾಡಿರುವ ಭೂಮಿಗೆ ಸಾಗುವಳಿ ಚೀಟಿ ನೀಡಬೇಕು. <br /> <br /> ರಾಜ್ಯದಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ತುಂಬಬೇಕು. ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಬೇಕು. ಸಫಾಯಿ ಕರ್ಮಚಾರಿಗಳಿೆ ಪುನರ್ವಸತಿ ಕಲ್ಪಿಸಬೇಕು. <br /> <br /> ದಲಿತ ಕಾರ್ಮಿಕತರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬದ ಸದಸ್ಯರಿಗೆ ತಕ್ಷಣ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು. ಸಂಚಾಲಕರಾದ ಸುಜಾತ, ಸಹ ಸಂಚಾಲಕರಾದ ಸಂಜೀವಯ್ಯ, ಎಂ.ಶ್ರೀನಿವಾಸ್, ಜಿ.ಕೃಷ್ಣಾನಾಯಕ್, ವನಜ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ದಲಿತರ ಎಸ್.ಸಿ.ಪಿ ಯೋಜನೆಗಳ ಸೂಕ್ತ ಅನುಷ್ಠಾನಕ್ಕಾಗಿ `ಕೇಂದ್ರ ಶಾಸನ~ ಜಾರಿಗೆ ತರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ದಲಿತರ ಹಕ್ಕುಗಳ ಹೋರಾಟ ಸಮಿತಿಯ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಎನ್ಸಿಪಿ ಯೋಜನೆಗಳು ಸರ್ಕಾರದ ವಾರ್ಷಿಕ ಮತ್ತು ಪಂಚ ವಾರ್ಷಿಕ ಯೋಜನೆಗಳ ಸಮಗ್ರ ಭಾಗವಾಗಿರಬೇಕು. ಈ ಹಂಚಿಕೆಯ ಮೊತ್ತವನ್ನು ಪರಿವರ್ತನೆಗೊಳಿಸುವುದು ಮತ್ತು ಅಳಿದು ಹೋಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.<br /> <br /> ಎನ್ಸಿಪಿ ಯೋಜನೆ ಅನುಷ್ಠಾನದ ಪರಿಶೀಲನೆಗೆ ಶ್ವೇತಪತ್ರ ಹೊರಡಿಸಬೇಕು. ಎಸ್.ಸಿ, ಎಸ್.ಟಿ ಸಂಬಂಧಿಸಿದ ಚರ್ಚೆಗೆ ವಿಶೇಷವಾದ ವಿಧಾನಸಭೆ ಮತ್ತು ಪಾರ್ಲಿಮೆಂಟ್ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದರು.<br /> ಅರಣ್ಯ ಮತ್ತು ಬಗರ್ ಹುಕುಂನಲ್ಲಿ ದಲಿತರು ಒತ್ತುವರಿ ಮಾಡಿರುವ ಭೂಮಿಗೆ ಸಾಗುವಳಿ ಚೀಟಿ ನೀಡಬೇಕು. <br /> <br /> ರಾಜ್ಯದಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ತುಂಬಬೇಕು. ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಬೇಕು. ಸಫಾಯಿ ಕರ್ಮಚಾರಿಗಳಿೆ ಪುನರ್ವಸತಿ ಕಲ್ಪಿಸಬೇಕು. <br /> <br /> ದಲಿತ ಕಾರ್ಮಿಕತರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬದ ಸದಸ್ಯರಿಗೆ ತಕ್ಷಣ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು. ಸಂಚಾಲಕರಾದ ಸುಜಾತ, ಸಹ ಸಂಚಾಲಕರಾದ ಸಂಜೀವಯ್ಯ, ಎಂ.ಶ್ರೀನಿವಾಸ್, ಜಿ.ಕೃಷ್ಣಾನಾಯಕ್, ವನಜ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>