<p><strong>ಕಾರವಾರ: </strong>ಗೋವಾದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ನೂರಾರು ಕಿ.ಮೀ. ದೂರವಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಉಳಗಾಕ್ಕೆ ಬರಬೇಕು. ಇಲ್ಲಿಗೆ ಬರುವ ಮಕ್ಕಳು ತಮ್ಮ ಸ್ವಂತ ಖರ್ಚಿನಲ್ಲೇ ವಸತಿ ವ್ಯವಸ್ಥೆ ಮಾಡಿಕೊಂಡು ಪರೀಕ್ಷೆಯನ್ನು ಎದುರಿಸಬೇಕಾದ ದುಃಸ್ಥಿತಿ ಇದೆ.<br /> <br /> ಹಲವು ವರ್ಷಗಳಿಂದ ಅಲ್ಲಿನ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಗೆ ಗೋವಾದ ಕನ್ನಡ ಶಾಲೆಯ ಒಟ್ಟು 70 ವಿದ್ಯಾರ್ಥಿಗಳು ಉಳಗಾ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ. ಅವರಲ್ಲಿ 35 ಬಾಲಕರು, 35 ಬಾಲಕಿಯರು ಇದ್ದಾರೆ.<br /> <br /> ಬಾಲಕಿಯರು ಉಳಗಾದ ಹಾಸ್ಟೆಲ್ನಲ್ಲಿ ತಂಗಿದ್ದು, ಬಾಲಕರು ಬಾಡಿಗೆ ಕೊಠಡಿಯಲ್ಲಿ ಉಳಿದುಕೊಂಡಿದ್ದಾರೆ. ಪರೀಕ್ಷೆಗಳು ಏಪ್ರಿಲ್ 9ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಆ ಮಕ್ಕಳು ಇಲ್ಲಿಯೇ ತಂಗುತ್ತಾರೆ. ಈ ಮಕ್ಕಳ ಜೊತೆಗೆ ಅಲ್ಲಿನ ಶಿಕ್ಷಣ ಸಂಸ್ಥೆಯ ಇಬ್ಬರು ಶಿಕ್ಷಕರು ಹಾಗೂ ಒಬ್ಬರು ಶಿಕ್ಷಕಿಯರು ಬಂದಿದ್ದಾರೆ. <br /> ಕಾಳಿದಾಸ ಶಿಕ್ಷಣ ಸಂಸ್ಥೆಯು ಗೋವಾದ ಬೈನಾ ಹಾಗೂ ವಾಸ್ಕೊ ಎಂಬಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳನ್ನು ನಡೆಸುತ್ತಿದೆ.<br /> <br /> ಉತ್ತರ ಕರ್ನಾಟಕದಿಂದ ವಲಸೆ ಹೋದವರ 300ಕ್ಕೂ ಅಧಿಕ ಮಕ್ಕಳು ಅಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಗೋವಾ ಸರ್ಕಾರ ಆ ಪ್ರೌಢಶಾಲೆಗಳಿಗೆ ಅನುದಾನ ನೀಡುತ್ತದೆ. ಆದರೆ, ಪಠ್ಯ ಮಾತ್ರ ಕರ್ನಾಟಕದ್ದು. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಗೋವಾದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಿಲ್ಲ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಕಾರವಾರ ಸಮೀಪದ ಉಳಗಾಕ್ಕೆ ಬಂದು ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> <strong>ಸಚಿವರ, ಅಧಿಕಾರಿಗಳ ನಿರ್ಲಕ್ಷ್ಯ: </strong>ಗೋವಾದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರ ತೆರೆಯಬೇಕು ಎಂಬುದು ಶಾಲೆಯ ಆಡಳಿತ ಮಂಡಳಿ, ಪಾಲಕರ ಹಾಗೂ ಗೋವಾ ಕನ್ನಡಿಗರ ಕೂಗು. ಆದರೆ, ಇಲ್ಲಿನ ಸಚಿವರು, ಅಧಿಕಾರಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ.<br /> ಎಲ್ಲರೂ ಕೂಲಿ ಕಾರ್ಮಿಕರ ಮಕ್ಕಳು: ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಧಾರವಾಡ, ಬೆಳಗಾವಿ, ವಿಜಾಪುರ ಮತ್ತಿತರ ಜಿಲ್ಲೆಗಳಿಂದ ಸಾವಿರಾರು ಮಂದಿ ಗೋವಾಕ್ಕೆ ವಲಸೆ ಹೋಗಿ ಕೂಲಿ ಕಾರ್ಮಿಕರಾಗಿ ಬದುಕು ಸಾಗಿಸುತ್ತಿದ್ದಾರೆ.<br /> <br /> ತಮಗೆ ಸಿಗುವ ಅಲ್ಪ ಸ್ವಲ್ಪ ಹಣವನ್ನು ಉಳಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ. ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ಮಕ್ಕಳು ಪರೀಕ್ಷೆ ಬರೆಯಲು ಸಾವಿರಾರು ರೂ. ಖರ್ಚು ಮಾಡಿಕೊಂಡು ಉಳಗಾದ ಸಮೀಪ ಉಳಿದುಕೊಳ್ಳಬೇಕಾಗಿದೆ. ಈ ವೆಚ್ಚವನ್ನು ಭರಿಸಲು ಪಾಲಕರು ಪರದಾಡುವಂತಾಗಿದೆ. ‘ಗೋವಾದಲ್ಲೇ ಪರೀಕ್ಷಾ ಕೇಂದ್ರ ತೆರೆಯಬೇಕು. ಇಲ್ಲವೇ ಪರೀಕ್ಷೆ ಬರೆಯಲು ತಗಲುವ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸಲಿ’ ಎನ್ನುತ್ತಾರೆ ಸ್ಥಳೀಯ ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್. ದತ್ತ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಗೋವಾದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ನೂರಾರು ಕಿ.ಮೀ. ದೂರವಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಉಳಗಾಕ್ಕೆ ಬರಬೇಕು. ಇಲ್ಲಿಗೆ ಬರುವ ಮಕ್ಕಳು ತಮ್ಮ ಸ್ವಂತ ಖರ್ಚಿನಲ್ಲೇ ವಸತಿ ವ್ಯವಸ್ಥೆ ಮಾಡಿಕೊಂಡು ಪರೀಕ್ಷೆಯನ್ನು ಎದುರಿಸಬೇಕಾದ ದುಃಸ್ಥಿತಿ ಇದೆ.<br /> <br /> ಹಲವು ವರ್ಷಗಳಿಂದ ಅಲ್ಲಿನ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಗೆ ಗೋವಾದ ಕನ್ನಡ ಶಾಲೆಯ ಒಟ್ಟು 70 ವಿದ್ಯಾರ್ಥಿಗಳು ಉಳಗಾ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ. ಅವರಲ್ಲಿ 35 ಬಾಲಕರು, 35 ಬಾಲಕಿಯರು ಇದ್ದಾರೆ.<br /> <br /> ಬಾಲಕಿಯರು ಉಳಗಾದ ಹಾಸ್ಟೆಲ್ನಲ್ಲಿ ತಂಗಿದ್ದು, ಬಾಲಕರು ಬಾಡಿಗೆ ಕೊಠಡಿಯಲ್ಲಿ ಉಳಿದುಕೊಂಡಿದ್ದಾರೆ. ಪರೀಕ್ಷೆಗಳು ಏಪ್ರಿಲ್ 9ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಆ ಮಕ್ಕಳು ಇಲ್ಲಿಯೇ ತಂಗುತ್ತಾರೆ. ಈ ಮಕ್ಕಳ ಜೊತೆಗೆ ಅಲ್ಲಿನ ಶಿಕ್ಷಣ ಸಂಸ್ಥೆಯ ಇಬ್ಬರು ಶಿಕ್ಷಕರು ಹಾಗೂ ಒಬ್ಬರು ಶಿಕ್ಷಕಿಯರು ಬಂದಿದ್ದಾರೆ. <br /> ಕಾಳಿದಾಸ ಶಿಕ್ಷಣ ಸಂಸ್ಥೆಯು ಗೋವಾದ ಬೈನಾ ಹಾಗೂ ವಾಸ್ಕೊ ಎಂಬಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳನ್ನು ನಡೆಸುತ್ತಿದೆ.<br /> <br /> ಉತ್ತರ ಕರ್ನಾಟಕದಿಂದ ವಲಸೆ ಹೋದವರ 300ಕ್ಕೂ ಅಧಿಕ ಮಕ್ಕಳು ಅಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಗೋವಾ ಸರ್ಕಾರ ಆ ಪ್ರೌಢಶಾಲೆಗಳಿಗೆ ಅನುದಾನ ನೀಡುತ್ತದೆ. ಆದರೆ, ಪಠ್ಯ ಮಾತ್ರ ಕರ್ನಾಟಕದ್ದು. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಗೋವಾದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಿಲ್ಲ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಕಾರವಾರ ಸಮೀಪದ ಉಳಗಾಕ್ಕೆ ಬಂದು ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> <strong>ಸಚಿವರ, ಅಧಿಕಾರಿಗಳ ನಿರ್ಲಕ್ಷ್ಯ: </strong>ಗೋವಾದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರ ತೆರೆಯಬೇಕು ಎಂಬುದು ಶಾಲೆಯ ಆಡಳಿತ ಮಂಡಳಿ, ಪಾಲಕರ ಹಾಗೂ ಗೋವಾ ಕನ್ನಡಿಗರ ಕೂಗು. ಆದರೆ, ಇಲ್ಲಿನ ಸಚಿವರು, ಅಧಿಕಾರಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ.<br /> ಎಲ್ಲರೂ ಕೂಲಿ ಕಾರ್ಮಿಕರ ಮಕ್ಕಳು: ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಧಾರವಾಡ, ಬೆಳಗಾವಿ, ವಿಜಾಪುರ ಮತ್ತಿತರ ಜಿಲ್ಲೆಗಳಿಂದ ಸಾವಿರಾರು ಮಂದಿ ಗೋವಾಕ್ಕೆ ವಲಸೆ ಹೋಗಿ ಕೂಲಿ ಕಾರ್ಮಿಕರಾಗಿ ಬದುಕು ಸಾಗಿಸುತ್ತಿದ್ದಾರೆ.<br /> <br /> ತಮಗೆ ಸಿಗುವ ಅಲ್ಪ ಸ್ವಲ್ಪ ಹಣವನ್ನು ಉಳಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ. ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ಮಕ್ಕಳು ಪರೀಕ್ಷೆ ಬರೆಯಲು ಸಾವಿರಾರು ರೂ. ಖರ್ಚು ಮಾಡಿಕೊಂಡು ಉಳಗಾದ ಸಮೀಪ ಉಳಿದುಕೊಳ್ಳಬೇಕಾಗಿದೆ. ಈ ವೆಚ್ಚವನ್ನು ಭರಿಸಲು ಪಾಲಕರು ಪರದಾಡುವಂತಾಗಿದೆ. ‘ಗೋವಾದಲ್ಲೇ ಪರೀಕ್ಷಾ ಕೇಂದ್ರ ತೆರೆಯಬೇಕು. ಇಲ್ಲವೇ ಪರೀಕ್ಷೆ ಬರೆಯಲು ತಗಲುವ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸಲಿ’ ಎನ್ನುತ್ತಾರೆ ಸ್ಥಳೀಯ ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್. ದತ್ತ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>