<p><strong>ಬೀದರ್: </strong>ಜಿಲ್ಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 9ರವರೆಗೆ ನಡೆಯುವ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ 26,168 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.<br /> <br /> ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಸೇರಿ ವಿವಿಧ 447 ಪ್ರೌಢಶಾಲೆಗಳಿಗೆ ಸೇರಿದ ವಿದ್ಯಾರ್ಥಿಗಳು 90 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವರು. ಪರೀಕ್ಷೆ ನಿಗದಿತ ದಿನದಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.45ರ ವೆರೆಗೆ ನಡೆಯಲಿದೆ.<br /> <br /> ಬೀದರ್ ತಾಲ್ಲೂಕಿನಲ್ಲಿ 29, ಭಾಲ್ಕಿ ತಾಲ್ಲೂಕಿನಲ್ಲಿ 17, ಹುಮನಾಬಾದ್ ತಾಲ್ಲೂಕಿನಲ್ಲಿ 16, ಬಸವ ಕಲ್ಯಾಣ ಹಾಗೂ ಔರಾದ್ ತಾಲ್ಲೂಕಿನಲ್ಲಿ ತಲಾ 14 ಪರೀಕ್ಷಾ ಕೇಂದ್ರಗಳಿವೆ ಎಂದು ಪರೀಕ್ಷೆಯ ನೋಡೆಲ್ ಅಧಿಕಾರಿ ನಾಮದೇವ್ ಸಿಂಗಾರೆ ತಿಳಿಸಿದ್ದಾರೆ.<br /> <br /> ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 26,168 ವಿದ್ಯಾರ್ಥಿಗಳ ಪೈಕಿ 23,273 ಅಭ್ಯರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 11,044 ಬಾಲಕಿಯರು ಇದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 2,652 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 243 ಖಾಸಗಿ ಅಭ್ಯರ್ಥಿಗಳು ಸೇರಿದ್ದಾರೆ.<br /> <br /> ಪ್ರಸಕ್ತ ಸಾಲಿನ ಪರೀಕ್ಷೆ ಬರೆಯುವ ಒಟ್ಟು ಪರೀಕ್ಷಾರ್ಥಿಗಳ ಪೈಕಿ ಬೀದರ್ ತಾಲ್ಲೂಕಿನ 8,404, ಹುಮನಾಬಾದ್ ತಾಲ್ಲೂಕಿನ 5,174, ಬಸವಕಲ್ಯಾಣ ತಾಲ್ಲೂಕಿನ 5,044, ಭಾಲ್ಕಿ ತಾಲ್ಲೂಕಿನ 4,177 ಹಾಗೂ ಔರಾದ್ ತಾಲ್ಲೂಕಿನ 3,369 ಪರೀಕ್ಷಾರ್ಥಿಗಳು ಇದ್ದಾರೆ ಎಂದು ಹೇಳಿದ್ದಾರೆ.<br /> <br /> ನಕಲು ತಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾಮಟ್ಟದಲ್ಲಿ ಐದು ಸಂಚಾರ ಜಾಗೃತದಳ ತಂಡ ರಚಿಸಲಿದೆ. ಪ್ರತಿ ತಂಡದಲ್ಲಿ ಮೂವರು ಅಧಿಕಾರಿಗಳಿರುತ್ತಾರೆ. ಪ್ರತಿಯೊಂದು ಕೇಂದ್ರದಲ್ಲೂ ‘ಸ್ಥಾನಿಕ ಜಾಗೃತ ದಳ’ ಹಾಗೂ ಮಹಿಳಾ ಮೇಲ್ವಿಚಾರಕರನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದ್ದಾರೆ.<br /> <br /> ತಾಲ್ಲೂಕು ಮಟ್ಟದ ಮಾರ್ಗ ಅಧಿಕಾರಿಗಳು ಆಯಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಿದ ಬಳಿಕ ಅವರೂ ಜಾಗೃತದಳ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.<br /> <br /> ಖಾಸಗಿ ಅಭ್ಯರ್ಥಿಗಳಿಗಾಗಿ ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.<br /> <br /> ಫಲಿತಾಂಶ ಸುಧಾರಣೆಗೆ ದತ್ತು ಯೋಜನೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಿಸಲು ಪ್ರೌಢಶಾಲೆಗಳಲ್ಲಿ ‘ದತ್ತು ಯೋಜನೆ’ ಕಾರ್ಯಕ್ರಮ ನಡೆಸಲಾಗುತ್ತಿದೆ.<br /> <br /> ದತ್ತು ಯೋಜನೆಯಡಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಆರು ವಿದ್ಯಾರ್ಥಿಗಳ ಗುಂಪು ರಚಿಸಿ, ಶಾಲೆಯ ಪ್ರತಿ ಶಿಕ್ಷಕರಿಗೆ ಒಂದು ಗುಂಪಿನ ಹೊಣೆ ವಹಿಸಿದ್ದು, ವಿದ್ಯಾರ್ಥಗಳ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಯಲಿದೆ. ಪರೀಕ್ಷೆ ತಯಾರಿ ಕುರಿತು ವಿದ್ಯಾರ್ಥಿಗೆ ಮಾರ್ಗದರ್ಶನವನ್ನು ಈ ಶಿಕ್ಷಕರು ನೀಡುವರು ಎಂದರು.<br /> <br /> ಇಷ್ಟೇ ಅಲ್ಲದೇ ಪ್ರೌಢಶಾಲೆಗಳ ಮುಖ್ಯಶಿಕ್ಷಕರು, ವಿಜ್ಞಾನ, ಇಂಗ್ಲಿಷ್ ವಿಷಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 9ರವರೆಗೆ ನಡೆಯುವ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ 26,168 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.<br /> <br /> ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಸೇರಿ ವಿವಿಧ 447 ಪ್ರೌಢಶಾಲೆಗಳಿಗೆ ಸೇರಿದ ವಿದ್ಯಾರ್ಥಿಗಳು 90 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವರು. ಪರೀಕ್ಷೆ ನಿಗದಿತ ದಿನದಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.45ರ ವೆರೆಗೆ ನಡೆಯಲಿದೆ.<br /> <br /> ಬೀದರ್ ತಾಲ್ಲೂಕಿನಲ್ಲಿ 29, ಭಾಲ್ಕಿ ತಾಲ್ಲೂಕಿನಲ್ಲಿ 17, ಹುಮನಾಬಾದ್ ತಾಲ್ಲೂಕಿನಲ್ಲಿ 16, ಬಸವ ಕಲ್ಯಾಣ ಹಾಗೂ ಔರಾದ್ ತಾಲ್ಲೂಕಿನಲ್ಲಿ ತಲಾ 14 ಪರೀಕ್ಷಾ ಕೇಂದ್ರಗಳಿವೆ ಎಂದು ಪರೀಕ್ಷೆಯ ನೋಡೆಲ್ ಅಧಿಕಾರಿ ನಾಮದೇವ್ ಸಿಂಗಾರೆ ತಿಳಿಸಿದ್ದಾರೆ.<br /> <br /> ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 26,168 ವಿದ್ಯಾರ್ಥಿಗಳ ಪೈಕಿ 23,273 ಅಭ್ಯರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 11,044 ಬಾಲಕಿಯರು ಇದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 2,652 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 243 ಖಾಸಗಿ ಅಭ್ಯರ್ಥಿಗಳು ಸೇರಿದ್ದಾರೆ.<br /> <br /> ಪ್ರಸಕ್ತ ಸಾಲಿನ ಪರೀಕ್ಷೆ ಬರೆಯುವ ಒಟ್ಟು ಪರೀಕ್ಷಾರ್ಥಿಗಳ ಪೈಕಿ ಬೀದರ್ ತಾಲ್ಲೂಕಿನ 8,404, ಹುಮನಾಬಾದ್ ತಾಲ್ಲೂಕಿನ 5,174, ಬಸವಕಲ್ಯಾಣ ತಾಲ್ಲೂಕಿನ 5,044, ಭಾಲ್ಕಿ ತಾಲ್ಲೂಕಿನ 4,177 ಹಾಗೂ ಔರಾದ್ ತಾಲ್ಲೂಕಿನ 3,369 ಪರೀಕ್ಷಾರ್ಥಿಗಳು ಇದ್ದಾರೆ ಎಂದು ಹೇಳಿದ್ದಾರೆ.<br /> <br /> ನಕಲು ತಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾಮಟ್ಟದಲ್ಲಿ ಐದು ಸಂಚಾರ ಜಾಗೃತದಳ ತಂಡ ರಚಿಸಲಿದೆ. ಪ್ರತಿ ತಂಡದಲ್ಲಿ ಮೂವರು ಅಧಿಕಾರಿಗಳಿರುತ್ತಾರೆ. ಪ್ರತಿಯೊಂದು ಕೇಂದ್ರದಲ್ಲೂ ‘ಸ್ಥಾನಿಕ ಜಾಗೃತ ದಳ’ ಹಾಗೂ ಮಹಿಳಾ ಮೇಲ್ವಿಚಾರಕರನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದ್ದಾರೆ.<br /> <br /> ತಾಲ್ಲೂಕು ಮಟ್ಟದ ಮಾರ್ಗ ಅಧಿಕಾರಿಗಳು ಆಯಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಿದ ಬಳಿಕ ಅವರೂ ಜಾಗೃತದಳ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.<br /> <br /> ಖಾಸಗಿ ಅಭ್ಯರ್ಥಿಗಳಿಗಾಗಿ ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.<br /> <br /> ಫಲಿತಾಂಶ ಸುಧಾರಣೆಗೆ ದತ್ತು ಯೋಜನೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಿಸಲು ಪ್ರೌಢಶಾಲೆಗಳಲ್ಲಿ ‘ದತ್ತು ಯೋಜನೆ’ ಕಾರ್ಯಕ್ರಮ ನಡೆಸಲಾಗುತ್ತಿದೆ.<br /> <br /> ದತ್ತು ಯೋಜನೆಯಡಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಆರು ವಿದ್ಯಾರ್ಥಿಗಳ ಗುಂಪು ರಚಿಸಿ, ಶಾಲೆಯ ಪ್ರತಿ ಶಿಕ್ಷಕರಿಗೆ ಒಂದು ಗುಂಪಿನ ಹೊಣೆ ವಹಿಸಿದ್ದು, ವಿದ್ಯಾರ್ಥಗಳ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಯಲಿದೆ. ಪರೀಕ್ಷೆ ತಯಾರಿ ಕುರಿತು ವಿದ್ಯಾರ್ಥಿಗೆ ಮಾರ್ಗದರ್ಶನವನ್ನು ಈ ಶಿಕ್ಷಕರು ನೀಡುವರು ಎಂದರು.<br /> <br /> ಇಷ್ಟೇ ಅಲ್ಲದೇ ಪ್ರೌಢಶಾಲೆಗಳ ಮುಖ್ಯಶಿಕ್ಷಕರು, ವಿಜ್ಞಾನ, ಇಂಗ್ಲಿಷ್ ವಿಷಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>