<p>ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ (ಎಸ್ಎಚ್ಆರ್ಸಿ) ಕಚೇರಿಯು ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವುದಾಗಿ ದೂರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> `ಸಿಕ್ರಂ~ ಸಂಘಟನೆ ಸಲ್ಲಿಸಿರುವ ಈ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.<br /> <br /> ನಿಯಮದ ಪ್ರಕಾರ ಕಚೇರಿಯು ಕನಿಷ್ಠ 20 ಸಾವಿರ ಚದರ ಅಡಿ ಜಾಗ ಹೊಂದಿರಬೇಕು. ಆದರೆ ಈಗ ಇರುವುದು ಕೇವಲ 4,500 ಚದರ ಅಡಿ ಮಾತ್ರ. <br /> <br /> ವೃಂದ ಮತ್ತು ನೇಮಕಾತಿ ನಿಯಮದ ಅಡಿ ನೇಮಕಾತಿ ಪ್ರಕ್ರಿಯೆ ಇನ್ನೂ ಸರ್ಕಾರ ನಡೆಸಿಲ್ಲ. ಸದ್ಯ ರಾಜ್ಯದಾದ್ಯಂತ ಕೇವಲ 77 ಮಂದಿ ಸಿಬ್ಬಂದಿ ಮಾತ್ರ ಇದ್ದು, ಅವರೂ ನಿಯೋಜನೆ ಮೇರೆಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನುವುದು ಅರ್ಜಿದಾರರ ವಾದ.<br /> <br /> `ಆರು ಪೊಲೀಸ್ ಠಾಣೆಗಳಲ್ಲಿ ಆಯೋಗದ ಶಾಖೆ ತೆರೆಯುವ ಶಿಫಾರಸು ದೂಳು ತಿನ್ನುತ್ತಿದೆ. ಕಳೆದ ಬಜೆಟ್ನಲ್ಲಿ ಆಯೋಗದ ಮೂಲ ಸೌಕರ್ಯಕ್ಕೆ ಏಳು ಕೋಟಿ ರೂಪಾಯಿ ಹಣ ಮಂಜೂರು ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಕೇವಲ 2.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ~ ಎಂದು ಅರ್ಜಿದಾರರ ಪರ ವಕೀಲ ಎಂ.ಸಿಜಿ ವಾದಿಸಿದರು. ವಿಚಾರಣೆ ಮುಂದೂಡಲಾಯಿತು.<br /> <br /> <strong>ಎಚ್ಡಿಕೆ ವಿವಾದ: 28ಕ್ಕೆ ವಿಚಾರಣೆ</strong><br /> ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇದೇ 28ಕ್ಕೆ ಮುಂದೂಡಿದೆ. ಇವರ ವಿರುದ್ಧ ವಕೀಲ ವಿನೋದ್ಕುಮಾರ್ ದಾಖಲು ಮಾಡಿರುವ ದೂರಿನ ವಿವಾದ ಇದಾಗಿದೆ.<br /> <br /> ಇನ್ನೊಂದು ಅರ್ಜಿಯಲ್ಲಿ, ಲೋಕಾಯುಕ್ತ ಕೋರ್ಟ್ ಪ್ರತಿವಾದಿ ಪಟ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಹೆಸರನ್ನು ಕೈ ಬಿಟ್ಟಿರುವುದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನೂ ನ್ಯಾಯಮೂರ್ತಿ ವಿ.ಜಗನ್ನಾಥನ್ ಅಂದೇ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ (ಎಸ್ಎಚ್ಆರ್ಸಿ) ಕಚೇರಿಯು ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವುದಾಗಿ ದೂರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> `ಸಿಕ್ರಂ~ ಸಂಘಟನೆ ಸಲ್ಲಿಸಿರುವ ಈ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.<br /> <br /> ನಿಯಮದ ಪ್ರಕಾರ ಕಚೇರಿಯು ಕನಿಷ್ಠ 20 ಸಾವಿರ ಚದರ ಅಡಿ ಜಾಗ ಹೊಂದಿರಬೇಕು. ಆದರೆ ಈಗ ಇರುವುದು ಕೇವಲ 4,500 ಚದರ ಅಡಿ ಮಾತ್ರ. <br /> <br /> ವೃಂದ ಮತ್ತು ನೇಮಕಾತಿ ನಿಯಮದ ಅಡಿ ನೇಮಕಾತಿ ಪ್ರಕ್ರಿಯೆ ಇನ್ನೂ ಸರ್ಕಾರ ನಡೆಸಿಲ್ಲ. ಸದ್ಯ ರಾಜ್ಯದಾದ್ಯಂತ ಕೇವಲ 77 ಮಂದಿ ಸಿಬ್ಬಂದಿ ಮಾತ್ರ ಇದ್ದು, ಅವರೂ ನಿಯೋಜನೆ ಮೇರೆಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನುವುದು ಅರ್ಜಿದಾರರ ವಾದ.<br /> <br /> `ಆರು ಪೊಲೀಸ್ ಠಾಣೆಗಳಲ್ಲಿ ಆಯೋಗದ ಶಾಖೆ ತೆರೆಯುವ ಶಿಫಾರಸು ದೂಳು ತಿನ್ನುತ್ತಿದೆ. ಕಳೆದ ಬಜೆಟ್ನಲ್ಲಿ ಆಯೋಗದ ಮೂಲ ಸೌಕರ್ಯಕ್ಕೆ ಏಳು ಕೋಟಿ ರೂಪಾಯಿ ಹಣ ಮಂಜೂರು ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಕೇವಲ 2.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ~ ಎಂದು ಅರ್ಜಿದಾರರ ಪರ ವಕೀಲ ಎಂ.ಸಿಜಿ ವಾದಿಸಿದರು. ವಿಚಾರಣೆ ಮುಂದೂಡಲಾಯಿತು.<br /> <br /> <strong>ಎಚ್ಡಿಕೆ ವಿವಾದ: 28ಕ್ಕೆ ವಿಚಾರಣೆ</strong><br /> ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇದೇ 28ಕ್ಕೆ ಮುಂದೂಡಿದೆ. ಇವರ ವಿರುದ್ಧ ವಕೀಲ ವಿನೋದ್ಕುಮಾರ್ ದಾಖಲು ಮಾಡಿರುವ ದೂರಿನ ವಿವಾದ ಇದಾಗಿದೆ.<br /> <br /> ಇನ್ನೊಂದು ಅರ್ಜಿಯಲ್ಲಿ, ಲೋಕಾಯುಕ್ತ ಕೋರ್ಟ್ ಪ್ರತಿವಾದಿ ಪಟ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಹೆಸರನ್ನು ಕೈ ಬಿಟ್ಟಿರುವುದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನೂ ನ್ಯಾಯಮೂರ್ತಿ ವಿ.ಜಗನ್ನಾಥನ್ ಅಂದೇ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>