<p>ಬೆಂಗಳೂರು: ರಾಜ್ಯದ ಪ್ರಭಾವಿ ರಾಜಕಾರಣಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವರ್ಗಾಯಿಸಬೇಕು ಎಂಬ ಕೋರಿಕೆಯನ್ನು ಸರ್ಕಾರ ವಿರೋಧಿಸಿದೆ. `ಲೋಕಾಯುಕ್ತ ಸಂಸ್ಥೆಯ ಕುರಿತು ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ' ಎಂದು ಸರ್ಕಾರ ಪ್ರತಿಪಾದಿಸಿದೆ.<br /> <br /> ಎಲ್. ರಾಜಣ್ಣ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ನಡೆಸಿತು. `ಕೆಲವು ಪ್ರಮುಖ ರಾಜಕಾರಣಿಗಳನ್ನು ಆರೋಪಿಗಳು ಎಂದು ಹೆಸರಿಸಿದ್ದ ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿದ್ದಾರೆ. ಆದರೆ ಇದನ್ನು ದೂರುದಾರರೇ ಪ್ರಶ್ನಿಸಿಲ್ಲ, ಬಿ ವರದಿಯನ್ನು ಮೂರನೆಯ ವ್ಯಕ್ತಿ ಪ್ರಶ್ನಿಸುತ್ತಿರುವುದು ಹೇಗೆ?' ಎಂದು ಸರ್ಕಾರದ ಪರ ವಕೀಲರು ಅನುಮಾನ ವ್ಯಕ್ತಪಡಿಸಿದರು.<br /> <br /> `17 ತಿಂಗಳ ಕಾಲ ಲೋಕಾಯುಕ್ತರನ್ನು ಸರ್ಕಾರ ನೇಮಕ ಮಾಡಿರಲಿಲ್ಲ. ಈ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಕೆಯಾಗಿದೆ. ರಾಜಕಾರಣಿಗಳನ್ನು ಒಳಗೊಂಡ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವರ್ಗಾಯಿಸಬೇಕು' ಎಂದು ಅರ್ಜಿದಾರರು ಕೋರಿದರು. ವಿಚಾರಣೆ ಮುಂದೂಡಲಾಗಿದೆ.<br /> <br /> ಪಿಐಎಲ್ ದುರುಪಯೋಗ:<br /> `ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೆಲವು ವಕೀಲರಿಂದ ದುರುಪಯೋಗ ಆಗುತ್ತಿವೆ. ಇದನ್ನು ತಡೆಯಲು ನಮಗೆ ಅಡ್ವೊಕೇಟ್ ಜನರಲ್ ಸಹಕಾರ ಬೇಕು' ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ಮೌಖಿಕವಾಗಿ ಹೇಳಿದೆ.<br /> <br /> ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ (ಪಿಐಎಲ್) ವಿಚಾರಣೆ ವೇಳೆ ವಿಭಾಗೀಯ ಪೀಠ, `ಸರ್ಕಾರ ಕೈಗೊಳ್ಳುವ ಎಲ್ಲ ಆಡಳಿತಾತ್ಮಕ ನಿರ್ಧಾರಗಳನ್ನು ವಕೀಲರು ಪಿಐಎಲ್ ಹೆಸರಿನಲ್ಲಿ ಪ್ರಶ್ನಿಸುತ್ತ ಸಾಗಿದರೆ, ನಾವು ಎಲ್ಲಿಗೆ ಹೋಗಿ ತಲುಪುತ್ತೇವೆ?' ಎಂದು ಕಳವಳ ವ್ಯಕ್ತಪಡಿಸಿತು.<br /> `ನಾಡಿನ ಯಾವುದೋ ಒಂದು ಭಾಗದಲ್ಲಿ ಜಲ್ಲಿ ಕ್ರಷರ್ ಘಟಕ ಸ್ಥಾಪಿಸುತ್ತಾರೆ. ಅದನ್ನು ಪ್ರಶ್ನೆ ಮಾಡಿ ಬೆಂಗಳೂರಿನ ವಕೀಲರೊಬ್ಬರು ಪಿಐಎಲ್ ಸಲ್ಲಿಸುತ್ತಾರೆ. ಇವರಿಗೆ ಆ ವಿಚಾರದಲ್ಲಿರುವ ಹಿತಾಸಕ್ತಿ ಏನು?' ಎಂದು ಪೀಠ ಪ್ರಶ್ನಿಸಿತು.<br /> <br /> ಬಾರ್ಗಳಲ್ಲಿ ಮಹಿಳೆಯರು: ವಿಚಾರಣೆ ಮುಂದಕ್ಕೆ<br /> ಮಹಿಳೆಯರನ್ನು ನೇಮಕ ಮಾಡಿಕೊಳ್ಳುವ ಬಾರ್ ಮತ್ತು ರೆಸ್ಟೊರೆಂಟ್ಗಳು ಪಾಲಿಸಬೇಕಾದ ನಿಯಮಗಳನ್ನು ಅಂತಿಮಗೊಳಿಸಲು ಸರ್ಕಾರ ಹೆಚ್ಚುವರಿ ಕಾಲಾವಕಾಶ ಕೋರಿದೆ. ಈ ಮೊದಲು ಸಲ್ಲಿಸಿದ್ದ ಹೇಳಿಕೆ ಅನ್ವಯ, ಸರ್ಕಾರ ನಿಯಮಗಳನ್ನು ರೂಪಿಸಿ ಹೈಕೋರ್ಟ್ಗೆ ಮಂಗಳವಾರ ಸಲ್ಲಿಸಬೇಕಿತ್ತು.<br /> <br /> ಮಹಿಳೆಯರು ಕೆಲಸ ಮಾಡುವ ಬಾರ್ಗಳ ಮೇಲೆ ದಾಳಿ ನಡೆಸುವ ಪೊಲೀಸರು, ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿಗೆ ಸರ್ಕಾರದ ಪರವಾಗಿ ಹೇಳಿಕೆ ಸಲ್ಲಿಸಿದ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, `ನಿಯಮಗಳು ಇನ್ನೂ ಕರಡು ರೂಪದಲ್ಲಿವೆ. ಅವುಗಳನ್ನು ಅಂತಿಮಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕು' ಎಂದು ಕೋರಿದರು. ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಪ್ರಭಾವಿ ರಾಜಕಾರಣಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವರ್ಗಾಯಿಸಬೇಕು ಎಂಬ ಕೋರಿಕೆಯನ್ನು ಸರ್ಕಾರ ವಿರೋಧಿಸಿದೆ. `ಲೋಕಾಯುಕ್ತ ಸಂಸ್ಥೆಯ ಕುರಿತು ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ' ಎಂದು ಸರ್ಕಾರ ಪ್ರತಿಪಾದಿಸಿದೆ.<br /> <br /> ಎಲ್. ರಾಜಣ್ಣ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ನಡೆಸಿತು. `ಕೆಲವು ಪ್ರಮುಖ ರಾಜಕಾರಣಿಗಳನ್ನು ಆರೋಪಿಗಳು ಎಂದು ಹೆಸರಿಸಿದ್ದ ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿದ್ದಾರೆ. ಆದರೆ ಇದನ್ನು ದೂರುದಾರರೇ ಪ್ರಶ್ನಿಸಿಲ್ಲ, ಬಿ ವರದಿಯನ್ನು ಮೂರನೆಯ ವ್ಯಕ್ತಿ ಪ್ರಶ್ನಿಸುತ್ತಿರುವುದು ಹೇಗೆ?' ಎಂದು ಸರ್ಕಾರದ ಪರ ವಕೀಲರು ಅನುಮಾನ ವ್ಯಕ್ತಪಡಿಸಿದರು.<br /> <br /> `17 ತಿಂಗಳ ಕಾಲ ಲೋಕಾಯುಕ್ತರನ್ನು ಸರ್ಕಾರ ನೇಮಕ ಮಾಡಿರಲಿಲ್ಲ. ಈ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಕೆಯಾಗಿದೆ. ರಾಜಕಾರಣಿಗಳನ್ನು ಒಳಗೊಂಡ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವರ್ಗಾಯಿಸಬೇಕು' ಎಂದು ಅರ್ಜಿದಾರರು ಕೋರಿದರು. ವಿಚಾರಣೆ ಮುಂದೂಡಲಾಗಿದೆ.<br /> <br /> ಪಿಐಎಲ್ ದುರುಪಯೋಗ:<br /> `ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೆಲವು ವಕೀಲರಿಂದ ದುರುಪಯೋಗ ಆಗುತ್ತಿವೆ. ಇದನ್ನು ತಡೆಯಲು ನಮಗೆ ಅಡ್ವೊಕೇಟ್ ಜನರಲ್ ಸಹಕಾರ ಬೇಕು' ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ಮೌಖಿಕವಾಗಿ ಹೇಳಿದೆ.<br /> <br /> ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ (ಪಿಐಎಲ್) ವಿಚಾರಣೆ ವೇಳೆ ವಿಭಾಗೀಯ ಪೀಠ, `ಸರ್ಕಾರ ಕೈಗೊಳ್ಳುವ ಎಲ್ಲ ಆಡಳಿತಾತ್ಮಕ ನಿರ್ಧಾರಗಳನ್ನು ವಕೀಲರು ಪಿಐಎಲ್ ಹೆಸರಿನಲ್ಲಿ ಪ್ರಶ್ನಿಸುತ್ತ ಸಾಗಿದರೆ, ನಾವು ಎಲ್ಲಿಗೆ ಹೋಗಿ ತಲುಪುತ್ತೇವೆ?' ಎಂದು ಕಳವಳ ವ್ಯಕ್ತಪಡಿಸಿತು.<br /> `ನಾಡಿನ ಯಾವುದೋ ಒಂದು ಭಾಗದಲ್ಲಿ ಜಲ್ಲಿ ಕ್ರಷರ್ ಘಟಕ ಸ್ಥಾಪಿಸುತ್ತಾರೆ. ಅದನ್ನು ಪ್ರಶ್ನೆ ಮಾಡಿ ಬೆಂಗಳೂರಿನ ವಕೀಲರೊಬ್ಬರು ಪಿಐಎಲ್ ಸಲ್ಲಿಸುತ್ತಾರೆ. ಇವರಿಗೆ ಆ ವಿಚಾರದಲ್ಲಿರುವ ಹಿತಾಸಕ್ತಿ ಏನು?' ಎಂದು ಪೀಠ ಪ್ರಶ್ನಿಸಿತು.<br /> <br /> ಬಾರ್ಗಳಲ್ಲಿ ಮಹಿಳೆಯರು: ವಿಚಾರಣೆ ಮುಂದಕ್ಕೆ<br /> ಮಹಿಳೆಯರನ್ನು ನೇಮಕ ಮಾಡಿಕೊಳ್ಳುವ ಬಾರ್ ಮತ್ತು ರೆಸ್ಟೊರೆಂಟ್ಗಳು ಪಾಲಿಸಬೇಕಾದ ನಿಯಮಗಳನ್ನು ಅಂತಿಮಗೊಳಿಸಲು ಸರ್ಕಾರ ಹೆಚ್ಚುವರಿ ಕಾಲಾವಕಾಶ ಕೋರಿದೆ. ಈ ಮೊದಲು ಸಲ್ಲಿಸಿದ್ದ ಹೇಳಿಕೆ ಅನ್ವಯ, ಸರ್ಕಾರ ನಿಯಮಗಳನ್ನು ರೂಪಿಸಿ ಹೈಕೋರ್ಟ್ಗೆ ಮಂಗಳವಾರ ಸಲ್ಲಿಸಬೇಕಿತ್ತು.<br /> <br /> ಮಹಿಳೆಯರು ಕೆಲಸ ಮಾಡುವ ಬಾರ್ಗಳ ಮೇಲೆ ದಾಳಿ ನಡೆಸುವ ಪೊಲೀಸರು, ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿಗೆ ಸರ್ಕಾರದ ಪರವಾಗಿ ಹೇಳಿಕೆ ಸಲ್ಲಿಸಿದ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, `ನಿಯಮಗಳು ಇನ್ನೂ ಕರಡು ರೂಪದಲ್ಲಿವೆ. ಅವುಗಳನ್ನು ಅಂತಿಮಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕು' ಎಂದು ಕೋರಿದರು. ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>