<p><strong>ಬೆಂಗಳೂರು: </strong>ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಅವರು ಎಸ್ಪಿಪಿ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದರು.<br /> <br /> ಏಳು ವರ್ಷಗಳಿಂದ ಅವರು ಈ ಪ್ರಕರಣದಲ್ಲಿ ಎಸ್ಪಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಮುಂದುವರಿಯಬಾರದು ಎಂಬ ಕಾರಣದಿಂದ ಕಾಣದ ಕೈಗಳು ತಮ್ಮ ವಿರುದ್ಧ ಮಾಡಲಾದ ಸುಳ್ಳು ಆಪಾದನೆಗಳಿಂದ ಮನನೊಂದು ರಾಜೀನಾಮೆ ನೀಡಿರುವುದಾಗಿ ಆಚಾರ್ಯ ತಿಳಿಸಿದ್ದಾರೆ.<br /> <br /> ಈ ಕುರಿತು `ಪ್ರಜಾವಾಣಿ~ ಜೊತೆ ಮಾತನಾಡಿದ ಅವರು, `ನಾನು ಎಸ್ಪಿಪಿಯಾಗಿ ಮುಂದುವರಿಯಬಾರದು ಎಂಬ ಕಾರಣದಿಂದ ನನ್ನ ವಿರುದ್ಧ `ಬಿಎಂಎಸ್ ಶೈಕ್ಷಣಿಕ ಟ್ರಸ್ಟ್~ನಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ಕೇಸು ದಾಖಲಾಯಿತು. <br /> <br /> ಈ ದೂರನ್ನು ಹೈಕೋರ್ಟ್ ರದ್ದು ಮಾಡಿ ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿತು. ಆದರೆ, ನನ್ನ ವಿರುದ್ಧ ಇಂತಹ ಆಪಾದನೆ ಮಾಡಿದ್ದು, ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಕೋರ್ಟ್ ಆದೇಶಿಸಿದ್ದು ನನ್ನ ಮನಸ್ಸಿಗೆ ತುಂಬಾ ನೋವು ಉಂಟು ಮಾಡಿದೆ.<br /> <br /> `ಅಡ್ವೊಕೇಟ್ ಜನರಲ್ (ಎ.ಜಿ) ಆಗಿ ಕೆಲಸ ನಿರ್ವಹಿಸುತ್ತಿದ್ದಾಗ, ಇನ್ನೊಂದು ಕೇಸು ದಾಖಲು ಮಾಡಲಾಯಿತು. ಏಕಕಾಲಕ್ಕೆ ಎ.ಜಿ ಹುದ್ದೆ ಹಾಗೂ ಎಸ್ಪಿಪಿ ಹುದ್ದೆ ಅಲಂಕರಿಸಿರುವುದು ಕಾನೂನುಬಾಹಿರ ಎಂಬ ಆರೋಪ ಹೊರಿಸಲಾಯಿತು. ಇದರಿಂದ ನಾನು ಎ.ಜಿ ಹುದ್ದೆಗೆ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಯಿತು. ಉದ್ದೇಶಪೂರ್ವಕವಾಗಿ ಮಾಡಿದ ಈ ಆಪಾದನೆಯಿಂದಲೂ ನಾನು ಮಾನಸಿಕವಾಗಿ ನೋವು ಅನುಭವಿಸಿದ್ದೇನೆ.<br /> <br /> `ಅಷ್ಟೇ ಅಲ್ಲದೇ, ಜಯಲಲಿತಾ ಅವರ ಪ್ರಕರಣವು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಅಂದುಕೊಂಡಿದ್ದೆ. ಏಳು ವರ್ಷ ಕಳೆದರೂ ಇದುವರೆಗೂ ಅದು ಅಂತಿಮ ಹಂತ ತಲುಪಿಲ್ಲ. ಇದರಿಂದಲೂ ನನಗೆ ಬೇಸರವಾಗಿದೆ. ಇವೆಲ್ಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಅವರು ಎಸ್ಪಿಪಿ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದರು.<br /> <br /> ಏಳು ವರ್ಷಗಳಿಂದ ಅವರು ಈ ಪ್ರಕರಣದಲ್ಲಿ ಎಸ್ಪಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಮುಂದುವರಿಯಬಾರದು ಎಂಬ ಕಾರಣದಿಂದ ಕಾಣದ ಕೈಗಳು ತಮ್ಮ ವಿರುದ್ಧ ಮಾಡಲಾದ ಸುಳ್ಳು ಆಪಾದನೆಗಳಿಂದ ಮನನೊಂದು ರಾಜೀನಾಮೆ ನೀಡಿರುವುದಾಗಿ ಆಚಾರ್ಯ ತಿಳಿಸಿದ್ದಾರೆ.<br /> <br /> ಈ ಕುರಿತು `ಪ್ರಜಾವಾಣಿ~ ಜೊತೆ ಮಾತನಾಡಿದ ಅವರು, `ನಾನು ಎಸ್ಪಿಪಿಯಾಗಿ ಮುಂದುವರಿಯಬಾರದು ಎಂಬ ಕಾರಣದಿಂದ ನನ್ನ ವಿರುದ್ಧ `ಬಿಎಂಎಸ್ ಶೈಕ್ಷಣಿಕ ಟ್ರಸ್ಟ್~ನಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ಕೇಸು ದಾಖಲಾಯಿತು. <br /> <br /> ಈ ದೂರನ್ನು ಹೈಕೋರ್ಟ್ ರದ್ದು ಮಾಡಿ ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿತು. ಆದರೆ, ನನ್ನ ವಿರುದ್ಧ ಇಂತಹ ಆಪಾದನೆ ಮಾಡಿದ್ದು, ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಕೋರ್ಟ್ ಆದೇಶಿಸಿದ್ದು ನನ್ನ ಮನಸ್ಸಿಗೆ ತುಂಬಾ ನೋವು ಉಂಟು ಮಾಡಿದೆ.<br /> <br /> `ಅಡ್ವೊಕೇಟ್ ಜನರಲ್ (ಎ.ಜಿ) ಆಗಿ ಕೆಲಸ ನಿರ್ವಹಿಸುತ್ತಿದ್ದಾಗ, ಇನ್ನೊಂದು ಕೇಸು ದಾಖಲು ಮಾಡಲಾಯಿತು. ಏಕಕಾಲಕ್ಕೆ ಎ.ಜಿ ಹುದ್ದೆ ಹಾಗೂ ಎಸ್ಪಿಪಿ ಹುದ್ದೆ ಅಲಂಕರಿಸಿರುವುದು ಕಾನೂನುಬಾಹಿರ ಎಂಬ ಆರೋಪ ಹೊರಿಸಲಾಯಿತು. ಇದರಿಂದ ನಾನು ಎ.ಜಿ ಹುದ್ದೆಗೆ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಯಿತು. ಉದ್ದೇಶಪೂರ್ವಕವಾಗಿ ಮಾಡಿದ ಈ ಆಪಾದನೆಯಿಂದಲೂ ನಾನು ಮಾನಸಿಕವಾಗಿ ನೋವು ಅನುಭವಿಸಿದ್ದೇನೆ.<br /> <br /> `ಅಷ್ಟೇ ಅಲ್ಲದೇ, ಜಯಲಲಿತಾ ಅವರ ಪ್ರಕರಣವು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಅಂದುಕೊಂಡಿದ್ದೆ. ಏಳು ವರ್ಷ ಕಳೆದರೂ ಇದುವರೆಗೂ ಅದು ಅಂತಿಮ ಹಂತ ತಲುಪಿಲ್ಲ. ಇದರಿಂದಲೂ ನನಗೆ ಬೇಸರವಾಗಿದೆ. ಇವೆಲ್ಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>