<p>ರಾಯಚೂರು: ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪುಣ್ಯಸ್ಮರಣೆ ಹಾಗೂ ಏಕತಾ ಪ್ರತಿಮೆಯ ಪ್ರತಿಷ್ಠಾನದ ಅಭಿಯಾನದ ಅಂಗವಾಗಿ ಭಾನುವಾರ ಏಕತಾ ಓಟ ನಡೆಯಿತು.<br /> <br /> ಬೆಳಿಗ್ಗೆ ನಗರದ ಪಟೇಲ್ ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಗಣ್ಯರಿಂದ ಮಾರ್ಲಾಪಣೆ ಮಾಡಿದರು. ನಂತರ ಸೋಮವಾರಪೇಟೆ ಹಿರೇಮಠ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಏಕತಾ ಓಟಕ್ಕೆ ಚಾಲನೆ ನೀಡಿದರು.<br /> <br /> ಏಕತಾ ಓಟ ವಲ್ಲಭಭಾಯಿ ವೃತ್ತದಿಂದ ಆರಂಭಗೊಂಡು ಚಂದ್ರಮೌಳೇಶ್ವರ ವೃತ್ತ, ಮಹಾವೀರ ವೃತ್ತದ, ಜೈನ್ ಮಂದಿರ ಮಾರ್ಗವಾಗಿ ತೀನ್ಕಂದೀಲ್, ಸದರ ಬಜಾರ ಮೂಲಕ ಶೆಟ್ಟಿಭಾವಿ ವೃತ್ತದಿಂದ ಸೋಮವಾರಪೇಟೆ ಹಿರೇಮಠದಲ್ಲಿ ಅಂತ್ಯಗೊಳಿಸಲಾಯಿತು.<br /> <br /> ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ತಿಮ್ಮಾರೆಡ್ಡಿ, ಆರ್ಡಿಎ ಮಾಜಿ ಅಧ್ಯಕ್ಷ ರಾಜಕುಮಾರ, ಅಮರೇಶ ಹೊಸಮನಿ, ತ್ರಿವಿಕ್ರಮ ಜೋಶಿ, ಬಂಡೇಶ ವಲ್ಕಂದಿನ್ನಿ,ನಗರಸಭೆ ಸದಸ್ಯರಾದ ನರಸಪ್ಪ ಯಕ್ಲಾಸಪುರ, ಆಂಜನೇಯ ಹಾಗೂ ಗಿರೀಶ ಕನಕವೀಡು, ನಾರಾಯಣರಾವ್ ಪುರತಿಪ್ಲಿ, ರಮಾನಂದ ಯಾದವ್, ಪ್ರಕಾಶ ವಕೀಲ ಹಾಗೂ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪುಣ್ಯಸ್ಮರಣೆ ಹಾಗೂ ಏಕತಾ ಪ್ರತಿಮೆಯ ಪ್ರತಿಷ್ಠಾನದ ಅಭಿಯಾನದ ಅಂಗವಾಗಿ ಭಾನುವಾರ ಏಕತಾ ಓಟ ನಡೆಯಿತು.<br /> <br /> ಬೆಳಿಗ್ಗೆ ನಗರದ ಪಟೇಲ್ ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಗಣ್ಯರಿಂದ ಮಾರ್ಲಾಪಣೆ ಮಾಡಿದರು. ನಂತರ ಸೋಮವಾರಪೇಟೆ ಹಿರೇಮಠ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಏಕತಾ ಓಟಕ್ಕೆ ಚಾಲನೆ ನೀಡಿದರು.<br /> <br /> ಏಕತಾ ಓಟ ವಲ್ಲಭಭಾಯಿ ವೃತ್ತದಿಂದ ಆರಂಭಗೊಂಡು ಚಂದ್ರಮೌಳೇಶ್ವರ ವೃತ್ತ, ಮಹಾವೀರ ವೃತ್ತದ, ಜೈನ್ ಮಂದಿರ ಮಾರ್ಗವಾಗಿ ತೀನ್ಕಂದೀಲ್, ಸದರ ಬಜಾರ ಮೂಲಕ ಶೆಟ್ಟಿಭಾವಿ ವೃತ್ತದಿಂದ ಸೋಮವಾರಪೇಟೆ ಹಿರೇಮಠದಲ್ಲಿ ಅಂತ್ಯಗೊಳಿಸಲಾಯಿತು.<br /> <br /> ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ತಿಮ್ಮಾರೆಡ್ಡಿ, ಆರ್ಡಿಎ ಮಾಜಿ ಅಧ್ಯಕ್ಷ ರಾಜಕುಮಾರ, ಅಮರೇಶ ಹೊಸಮನಿ, ತ್ರಿವಿಕ್ರಮ ಜೋಶಿ, ಬಂಡೇಶ ವಲ್ಕಂದಿನ್ನಿ,ನಗರಸಭೆ ಸದಸ್ಯರಾದ ನರಸಪ್ಪ ಯಕ್ಲಾಸಪುರ, ಆಂಜನೇಯ ಹಾಗೂ ಗಿರೀಶ ಕನಕವೀಡು, ನಾರಾಯಣರಾವ್ ಪುರತಿಪ್ಲಿ, ರಮಾನಂದ ಯಾದವ್, ಪ್ರಕಾಶ ವಕೀಲ ಹಾಗೂ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>