<p><strong>ಬೆಂಗಳೂರು:</strong> ಏಕಲವ್ಯ ಪ್ರಶಸ್ತಿ ವಿವಾದಕ್ಕೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜ್ ಆರೋಪಿಸಿದ್ದಾರೆ.<br /> <br /> `ಇಲಾಖೆ ಅಧಿಕಾರಿಗಳು ಏಕಾಏಕಿ ಮೂರು ಮಂದಿ ಹೆಸರನ್ನು ಕೈಬಿಟ್ಟು ಈಗ ವಿಚಾರಣೆ ನಡೆಸುತ್ತಿದ್ದಾರೆ. ಅದು ಪ್ರಶಸ್ತಿಯ ಆಯ್ಕೆ ಸಮಿತಿ ಗಮನಕ್ಕೆ ಬಂದಿಲ್ಲ. ಈ ಸಮಿತಿಯಲ್ಲಿ ಕೆಒಎನ ಇಬ್ಬರು ಸದಸ್ಯರು ಇದ್ದಾರೆ. ಆದರೆ ಇಲಾಖೆಯ ಅಧಿಕಾರಿಗಳೇ ದರ್ಬಾರ್ ನಡೆಸುತ್ತಿದ್ದಾರೆ. ಈ ಬಗ್ಗೆ ಮತ್ತೆ ಆಯ್ಕೆ ಸಮಿತಿ ಸಭೆ ನಡೆಸಿ ಚರ್ಚಿಸಬೇಕು. ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ತಪ್ಪಿಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು~ ಎಂದು ಅವರು ಆಗ್ರಹಿಸಿದ್ದಾರೆ. <br /> <br /> ಆದರೆ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್, `ಸರ್ಕಾರದ ನಿಯಮದ ಪ್ರಕಾರ ಪರಿಶೀಲನಾ ಸಮಿತಿ ಸಭೆಗೆ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸುವಂತಿಲ್ಲ. ನಾವು ಈ ಮೊದಲು ನಡೆಸಿದ ಸಭೆಗಳಿಗೆ ಕೆಒಎನ ಇಬ್ಬರು ಸದಸ್ಯರು ಬಂದಿರಲಿಲ್ಲ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಏಕಲವ್ಯ ಪ್ರಶಸ್ತಿ ವಿವಾದಕ್ಕೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜ್ ಆರೋಪಿಸಿದ್ದಾರೆ.<br /> <br /> `ಇಲಾಖೆ ಅಧಿಕಾರಿಗಳು ಏಕಾಏಕಿ ಮೂರು ಮಂದಿ ಹೆಸರನ್ನು ಕೈಬಿಟ್ಟು ಈಗ ವಿಚಾರಣೆ ನಡೆಸುತ್ತಿದ್ದಾರೆ. ಅದು ಪ್ರಶಸ್ತಿಯ ಆಯ್ಕೆ ಸಮಿತಿ ಗಮನಕ್ಕೆ ಬಂದಿಲ್ಲ. ಈ ಸಮಿತಿಯಲ್ಲಿ ಕೆಒಎನ ಇಬ್ಬರು ಸದಸ್ಯರು ಇದ್ದಾರೆ. ಆದರೆ ಇಲಾಖೆಯ ಅಧಿಕಾರಿಗಳೇ ದರ್ಬಾರ್ ನಡೆಸುತ್ತಿದ್ದಾರೆ. ಈ ಬಗ್ಗೆ ಮತ್ತೆ ಆಯ್ಕೆ ಸಮಿತಿ ಸಭೆ ನಡೆಸಿ ಚರ್ಚಿಸಬೇಕು. ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ತಪ್ಪಿಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು~ ಎಂದು ಅವರು ಆಗ್ರಹಿಸಿದ್ದಾರೆ. <br /> <br /> ಆದರೆ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್, `ಸರ್ಕಾರದ ನಿಯಮದ ಪ್ರಕಾರ ಪರಿಶೀಲನಾ ಸಮಿತಿ ಸಭೆಗೆ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸುವಂತಿಲ್ಲ. ನಾವು ಈ ಮೊದಲು ನಡೆಸಿದ ಸಭೆಗಳಿಗೆ ಕೆಒಎನ ಇಬ್ಬರು ಸದಸ್ಯರು ಬಂದಿರಲಿಲ್ಲ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>