<p><strong>ಬೆಳಗಾವಿ</strong>: ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಮಹೇಶ ಫೌಂಡೇಶನ್ ಕಾರ್ಯಕರ್ತರು ಎಚ್ಐವಿ ಏಡ್ಸ್ ರೋಗವನ್ನು ನಿಯಂತ್ರಿಸುವ ಕುರಿತು ನಗರದಲ್ಲಿ ಭಾನುವಾರ ಜನಜಾಗೃತಿ ಜಾಥಾ ನಡೆಸಿದರು. ಇಲ್ಲಿನ ಗೋವಾವೇಸ್ನ ಬಸವೇಶ್ವರ ವೃತ್ತದಿಂದ ಅನಗೋಳದವರೆಗೆ ಜಾಥಾ ನಡೆಸಿ ಅರಿವು ಮೂಡಿಸಿದರು.<br /> <br /> ಬಳಿಕ ಬಿಗ್ ಬಜಾರ್ನಲ್ಲಿ ನಡೆದ ಸಮಾರಂಭದಲ್ಲಿ ಬಿಗ್ಬಜಾರ್ನ ಮುಖ್ಯ ವ್ಯವಸ್ಥಾಪಕ ಕಿರಣ ಕುಮಾರ ಮಾತನಾಡಿ, ‘ಎಚ್ಐವಿ ಪೀಡಿತರನ್ನು ಸಮಾಜ ಕೀಳರಿಮೆಯಿಂದ ಕಾಣುವುದನ್ನು ನಿಲ್ಲಿಸಬೇಕು. ಅವರನ್ನು ಎಲ್ಲರಂತೆ ಸಮಾನವಾಗಿ ಕಾಣುವ ಮೂಲಕ ಆತ್ಮಸ್ಥೈರ್ಯ ತುಂಬಬೇಕು. ಈ ಮೂಲಕ ಎಚ್ಐವಿ ಪೀಡಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು’ ಎಂದರು.<br /> <br /> ‘ಮಹೇಶ ಫೌಂಡೇಶನ್ ಎಚ್ಐವಿ ಪೀಡಿತ ಮಕ್ಕಳಿಗೆ ಆಶ್ರಯ ನೀಡಿ, ಜನಸಾಮಾನ್ಯರಿಗೆ ಎಚ್ಐವಿಯನ್ನು ನಿಯಂತ್ರಿಸುವ ಕುರಿತು ಅರಿವು ಮೂಡಿಸುತ್ತಿದೆ. ಈ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದೆ. ಎಚ್ಐವಿ ಪೀಡಿತರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮಹೇಶ ಫೌಂಡೇಶನ್ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.<br /> <br /> ಮಹೇಶ ಫೌಂಡೇಶನ್ ಸ್ವಯಂ ಸೇವಕರು, ಬಿಗ್ ಬಜಾರ್ ಸಿಬ್ಬಂದಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> <strong>‘ಏಡ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ’</strong><br /> <strong>ಚಿಕ್ಕೋಡಿ:</strong> ‘ಅತಿ ಹೆಚ್ಚು ಏಡ್ಸ್ ಪೀಡಿತರ ಪಟ್ಟಿಯಲ್ಲಿ ಭಾರತ ಜಗತ್ತಿನಲ್ಲೇ ಎರಡನೇ ಸ್ಥಾನದಲ್ಲಿ ಇರುವುದು ಆತಂಕದ ಸಂಗತಿಯಾಗಿದೆ. ಏಡ್ಸ್ ನಿಯಂತ್ರಣ ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಎಚ್ಐವಿ ಮುಕ್ತ ಸಮಾಜ ನಿರ್ಮಾಣದಲ್ಲಿ ಸಮುದಾಯ ಪಾತ್ರವೂ ಮಹತ್ತರವಾಗಿದೆ’ ಎಂದು ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ ವಿಭಾಗದ ಸಹ ನಿರ್ದೇಶಕಿ ಡಾ.ಲೀಲಾ ಸಂಪಿಗೆ ಹೇಳಿದರು.<br /> <br /> ಭಾನುವಾರ ಪಟ್ಟಣದಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಬದುಕು ಕಟ್ಟಿಕೊಂಡು ಸದೃಢ ದೇಶ ರೂಪಿಸುವ ಯುವಕರೇ ಹೆಚ್ಚಾಗಿ ಏಡ್ಸ್ಗೆ ಬಲಿಯಾಗುತ್ತಿರುವುದು ಕಳವಳಕರ ಸಂಗತಿ. ‘ಎಚ್ಐವಿ/ಏಡ್ಸ್ ಸೋಂಕನ್ನು, ಕಳಂಕ ಮತ್ತು ತಾರತಮ್ಯವನ್ನು ಹಾಗೂ ಎಚ್ಐವಿ/ಏಡ್ಸ್ ಸಂಬಂಧಿತ ಸಾವನ್ನು ಸೊನ್ನೆಗೆ ತನ್ನಿ’ ಎಂಬ ಘೋಷ ವಾಕ್ಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.<br /> ಅಧ್ಯಕ್ಷತೆ ವಹಿಸಿದ್ದ ಪುರಸಭೆ ಸದಸ್ಯ ನರೇಂದ್ರ ನೇರ್ಲೆಕ ಏಡ್ಸ್ ಮುಕ್ತ ಸಮಾಜ ಕಟ್ಟಲು ಪ್ರತಿಯೊಬ್ಬರು ಪ್ರಯತ್ನಿಸಬೇಕಾಗಿದೆ’ ಎಂದರು.<br /> <br /> ಇದಕ್ಕೂ ಮುನ್ನ ಪಟ್ಟಣದ ಆರ್.ಡಿ. ಹೈಸ್ಕೂಲ್ ಪ್ರಾಂಗಣದಿಂದ ಹೊರಟ ಜಾಗೃತಿ ಜಾಥಾಗೆ ಜಿ.ಪಂ. ಸದಸ್ಯ ಗಣೇಶ ಹುಕ್ಕೇರಿ ಚಾಲನೆ ನೀಡಿದರು. ಡಿಎಚ್ಒ ಡಾ.ಅಪ್ಪಾಸಾಬ ನರಹಟ್ಟಿ, ಉಪವಿಭಾಗಾಧಿಕಾರಿ ಡಾ. ರುದ್ರೇಶ ಘಾಳಿ, ತಹಶೀಲ್ದಾರ್ ರಾಜಶೇಖರ ಡಂಬಳ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿ.ಬಿ. ಕುಲಕರ್ಣಿ, ಡಾ. ಎಂ.ಆರ್. ಗಿಂಡೆ, ಪುರಸಭೆ ಸದಸ್ಯ ನಾಗೇಶ ಕಿವಡ, ರಾಮಾ ಮಾನೆ, ಟಿಎಚ್ಒ ಡಾ. ಐ.ಎಸ್. ಹೆಬ್ಬಳ್ಳಿ, ಪ್ರಾಚಾರ್ಯ ಬಿ.ಎ. ಪೂಜಾರಿ, ಆನಂದ ಅರವಾರೆ, ಎಂ.ಬಿ. ಬೋರನ್ನವರ, ಡಾ. ಲಕ್ಷ್ಮೀಕಾಂತ ಕಡ್ಲೆಪ್ಪಗೋಳ, ಡಾ. ಚಾಂದನಿ ಉಪಸ್ಥಿತರಿದ್ದರು.<br /> <br /> ಡಾ. ಎಸ್.ಎಸ್. ಗಡೇದ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ವೈ. ನಾಯ್ಕರ ನಿರೂಪಿಸಿದರು. ಡಾ. ವಿವೇಕ ಹೊನ್ನಳ್ಳಿ ವಂದಿಸಿದರು.<br /> <br /> <strong>ಮೂಡಲಗಿಯಲ್ಲಿ ಜಾಥಾ<br /> ಮೂಡಲಗಿ: ‘</strong>ಏಡ್ಸ ಬಗ್ಗೆ ತಿಳಿದುಕೊಂಡು ಅಂಥ ಭಯಾನಕ ರೋಗಕ್ಕೆ ಆಹ್ವಾನ ನೀಡದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಪುರಸಭೆಯ ಅಧ್ಯಕ್ಷ ರಾಮಣ್ಣ ಹಂದಿಗುಂದ ಹೇಳಿದರು.<br /> <br /> ಇಲ್ಲಿಯ ಆರೋಗ್ಯ ಸಮುದಾಯ ಕೇಂದ್ರ, ಪುರಸಭೆ, ಆಶಾ ಕಾರ್ಯಕರ್ತರು, ಸಿ.ಎನ್. ಮುಗಳಖೋಡ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಭಾನುವಾರ ವಿಶ್ವ ಏಡ್ಸ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ , ಎಚ್.ಐ.ವಿ. ಸೋಂಕು ತಗುಲದಂತೆ ಜಾಗೃತಿ ವಹಿಸಬೇಕು ಎಂದರು.<br /> <br /> ಪುರಸಭೆ ಸದಸ್ಯರಾದ ಡಾ. ಎಸ್.ಎಸ್. ಪಾಟೀಲ, ಈರಪ್ಪ ಬನ್ನೂರ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಡಾ. ಎಸ್.ಎಸ್. ಖನಾದಾಳೆ, ಬಿ.ಬಿ. ಬೆಳಗಲಿ, ಚಿದಾನಂದ ಮುಗಳಖೋಡ, ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಮಹೇಶ ಫೌಂಡೇಶನ್ ಕಾರ್ಯಕರ್ತರು ಎಚ್ಐವಿ ಏಡ್ಸ್ ರೋಗವನ್ನು ನಿಯಂತ್ರಿಸುವ ಕುರಿತು ನಗರದಲ್ಲಿ ಭಾನುವಾರ ಜನಜಾಗೃತಿ ಜಾಥಾ ನಡೆಸಿದರು. ಇಲ್ಲಿನ ಗೋವಾವೇಸ್ನ ಬಸವೇಶ್ವರ ವೃತ್ತದಿಂದ ಅನಗೋಳದವರೆಗೆ ಜಾಥಾ ನಡೆಸಿ ಅರಿವು ಮೂಡಿಸಿದರು.<br /> <br /> ಬಳಿಕ ಬಿಗ್ ಬಜಾರ್ನಲ್ಲಿ ನಡೆದ ಸಮಾರಂಭದಲ್ಲಿ ಬಿಗ್ಬಜಾರ್ನ ಮುಖ್ಯ ವ್ಯವಸ್ಥಾಪಕ ಕಿರಣ ಕುಮಾರ ಮಾತನಾಡಿ, ‘ಎಚ್ಐವಿ ಪೀಡಿತರನ್ನು ಸಮಾಜ ಕೀಳರಿಮೆಯಿಂದ ಕಾಣುವುದನ್ನು ನಿಲ್ಲಿಸಬೇಕು. ಅವರನ್ನು ಎಲ್ಲರಂತೆ ಸಮಾನವಾಗಿ ಕಾಣುವ ಮೂಲಕ ಆತ್ಮಸ್ಥೈರ್ಯ ತುಂಬಬೇಕು. ಈ ಮೂಲಕ ಎಚ್ಐವಿ ಪೀಡಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು’ ಎಂದರು.<br /> <br /> ‘ಮಹೇಶ ಫೌಂಡೇಶನ್ ಎಚ್ಐವಿ ಪೀಡಿತ ಮಕ್ಕಳಿಗೆ ಆಶ್ರಯ ನೀಡಿ, ಜನಸಾಮಾನ್ಯರಿಗೆ ಎಚ್ಐವಿಯನ್ನು ನಿಯಂತ್ರಿಸುವ ಕುರಿತು ಅರಿವು ಮೂಡಿಸುತ್ತಿದೆ. ಈ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದೆ. ಎಚ್ಐವಿ ಪೀಡಿತರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮಹೇಶ ಫೌಂಡೇಶನ್ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.<br /> <br /> ಮಹೇಶ ಫೌಂಡೇಶನ್ ಸ್ವಯಂ ಸೇವಕರು, ಬಿಗ್ ಬಜಾರ್ ಸಿಬ್ಬಂದಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> <strong>‘ಏಡ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ’</strong><br /> <strong>ಚಿಕ್ಕೋಡಿ:</strong> ‘ಅತಿ ಹೆಚ್ಚು ಏಡ್ಸ್ ಪೀಡಿತರ ಪಟ್ಟಿಯಲ್ಲಿ ಭಾರತ ಜಗತ್ತಿನಲ್ಲೇ ಎರಡನೇ ಸ್ಥಾನದಲ್ಲಿ ಇರುವುದು ಆತಂಕದ ಸಂಗತಿಯಾಗಿದೆ. ಏಡ್ಸ್ ನಿಯಂತ್ರಣ ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಎಚ್ಐವಿ ಮುಕ್ತ ಸಮಾಜ ನಿರ್ಮಾಣದಲ್ಲಿ ಸಮುದಾಯ ಪಾತ್ರವೂ ಮಹತ್ತರವಾಗಿದೆ’ ಎಂದು ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ ವಿಭಾಗದ ಸಹ ನಿರ್ದೇಶಕಿ ಡಾ.ಲೀಲಾ ಸಂಪಿಗೆ ಹೇಳಿದರು.<br /> <br /> ಭಾನುವಾರ ಪಟ್ಟಣದಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಬದುಕು ಕಟ್ಟಿಕೊಂಡು ಸದೃಢ ದೇಶ ರೂಪಿಸುವ ಯುವಕರೇ ಹೆಚ್ಚಾಗಿ ಏಡ್ಸ್ಗೆ ಬಲಿಯಾಗುತ್ತಿರುವುದು ಕಳವಳಕರ ಸಂಗತಿ. ‘ಎಚ್ಐವಿ/ಏಡ್ಸ್ ಸೋಂಕನ್ನು, ಕಳಂಕ ಮತ್ತು ತಾರತಮ್ಯವನ್ನು ಹಾಗೂ ಎಚ್ಐವಿ/ಏಡ್ಸ್ ಸಂಬಂಧಿತ ಸಾವನ್ನು ಸೊನ್ನೆಗೆ ತನ್ನಿ’ ಎಂಬ ಘೋಷ ವಾಕ್ಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.<br /> ಅಧ್ಯಕ್ಷತೆ ವಹಿಸಿದ್ದ ಪುರಸಭೆ ಸದಸ್ಯ ನರೇಂದ್ರ ನೇರ್ಲೆಕ ಏಡ್ಸ್ ಮುಕ್ತ ಸಮಾಜ ಕಟ್ಟಲು ಪ್ರತಿಯೊಬ್ಬರು ಪ್ರಯತ್ನಿಸಬೇಕಾಗಿದೆ’ ಎಂದರು.<br /> <br /> ಇದಕ್ಕೂ ಮುನ್ನ ಪಟ್ಟಣದ ಆರ್.ಡಿ. ಹೈಸ್ಕೂಲ್ ಪ್ರಾಂಗಣದಿಂದ ಹೊರಟ ಜಾಗೃತಿ ಜಾಥಾಗೆ ಜಿ.ಪಂ. ಸದಸ್ಯ ಗಣೇಶ ಹುಕ್ಕೇರಿ ಚಾಲನೆ ನೀಡಿದರು. ಡಿಎಚ್ಒ ಡಾ.ಅಪ್ಪಾಸಾಬ ನರಹಟ್ಟಿ, ಉಪವಿಭಾಗಾಧಿಕಾರಿ ಡಾ. ರುದ್ರೇಶ ಘಾಳಿ, ತಹಶೀಲ್ದಾರ್ ರಾಜಶೇಖರ ಡಂಬಳ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿ.ಬಿ. ಕುಲಕರ್ಣಿ, ಡಾ. ಎಂ.ಆರ್. ಗಿಂಡೆ, ಪುರಸಭೆ ಸದಸ್ಯ ನಾಗೇಶ ಕಿವಡ, ರಾಮಾ ಮಾನೆ, ಟಿಎಚ್ಒ ಡಾ. ಐ.ಎಸ್. ಹೆಬ್ಬಳ್ಳಿ, ಪ್ರಾಚಾರ್ಯ ಬಿ.ಎ. ಪೂಜಾರಿ, ಆನಂದ ಅರವಾರೆ, ಎಂ.ಬಿ. ಬೋರನ್ನವರ, ಡಾ. ಲಕ್ಷ್ಮೀಕಾಂತ ಕಡ್ಲೆಪ್ಪಗೋಳ, ಡಾ. ಚಾಂದನಿ ಉಪಸ್ಥಿತರಿದ್ದರು.<br /> <br /> ಡಾ. ಎಸ್.ಎಸ್. ಗಡೇದ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ವೈ. ನಾಯ್ಕರ ನಿರೂಪಿಸಿದರು. ಡಾ. ವಿವೇಕ ಹೊನ್ನಳ್ಳಿ ವಂದಿಸಿದರು.<br /> <br /> <strong>ಮೂಡಲಗಿಯಲ್ಲಿ ಜಾಥಾ<br /> ಮೂಡಲಗಿ: ‘</strong>ಏಡ್ಸ ಬಗ್ಗೆ ತಿಳಿದುಕೊಂಡು ಅಂಥ ಭಯಾನಕ ರೋಗಕ್ಕೆ ಆಹ್ವಾನ ನೀಡದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಪುರಸಭೆಯ ಅಧ್ಯಕ್ಷ ರಾಮಣ್ಣ ಹಂದಿಗುಂದ ಹೇಳಿದರು.<br /> <br /> ಇಲ್ಲಿಯ ಆರೋಗ್ಯ ಸಮುದಾಯ ಕೇಂದ್ರ, ಪುರಸಭೆ, ಆಶಾ ಕಾರ್ಯಕರ್ತರು, ಸಿ.ಎನ್. ಮುಗಳಖೋಡ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಭಾನುವಾರ ವಿಶ್ವ ಏಡ್ಸ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ , ಎಚ್.ಐ.ವಿ. ಸೋಂಕು ತಗುಲದಂತೆ ಜಾಗೃತಿ ವಹಿಸಬೇಕು ಎಂದರು.<br /> <br /> ಪುರಸಭೆ ಸದಸ್ಯರಾದ ಡಾ. ಎಸ್.ಎಸ್. ಪಾಟೀಲ, ಈರಪ್ಪ ಬನ್ನೂರ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಡಾ. ಎಸ್.ಎಸ್. ಖನಾದಾಳೆ, ಬಿ.ಬಿ. ಬೆಳಗಲಿ, ಚಿದಾನಂದ ಮುಗಳಖೋಡ, ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>