<p>ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಚೇತನ ಯೋಜನೆ ಮುಂದಿನ ತಿಂಗಳ 1ರಿಂದ ಜಿಲ್ಲೆಯಲ್ಲಿ ಜಾರಿಗೆ ಬರಲಿದೆ. ಕೃಷಿ ಇಲಾಖೆ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.<br /> <br /> ಇಲ್ಲಿನ ಕೃಷಿ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಎಲ್.ಎನ್.ಬೆಳವಣಿಕೆ ಈ ವಿಷಯ ತಿಳಿಸಿದರು.<br /> <br /> ಯೋಜನೆ ಕುರಿತು ಪ್ರಸ್ತಾಪಿಸಿದ ಅವರು, ಈ ಯೋಜನೆಯಡಿ ಜಿಲ್ಲೆಯ 71 ಸಾವಿರ ಹೆಕ್ಟೇರ್ನಷ್ಟು ಸಾಗುವಳಿ ಜಮೀನಿನ ಅಭಿವೃದ್ಧಿ ಹಾಗೂ ವಿವಿಧ ಬೆಳೆ ಬೆಳೆಯಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.<br /> <br /> ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿ.ಪಂ.. ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಸೂಚಿಸಿದರು. ಜಿ.ಪಂ. ಉಪಾಧ್ಯಕ್ಷೆ ಡಾ.ಸೀತಾ ಜಿ.ಹಲಗೇರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಮುಖ್ಯ ಯೋಜನಾ ಅಧಿಕಾರಿ ಟಿ.ಪಿ.ದಂಡಿಗದಾಸರ ಹಾಗೂ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಚೇತನ ಯೋಜನೆ ಮುಂದಿನ ತಿಂಗಳ 1ರಿಂದ ಜಿಲ್ಲೆಯಲ್ಲಿ ಜಾರಿಗೆ ಬರಲಿದೆ. ಕೃಷಿ ಇಲಾಖೆ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.<br /> <br /> ಇಲ್ಲಿನ ಕೃಷಿ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಎಲ್.ಎನ್.ಬೆಳವಣಿಕೆ ಈ ವಿಷಯ ತಿಳಿಸಿದರು.<br /> <br /> ಯೋಜನೆ ಕುರಿತು ಪ್ರಸ್ತಾಪಿಸಿದ ಅವರು, ಈ ಯೋಜನೆಯಡಿ ಜಿಲ್ಲೆಯ 71 ಸಾವಿರ ಹೆಕ್ಟೇರ್ನಷ್ಟು ಸಾಗುವಳಿ ಜಮೀನಿನ ಅಭಿವೃದ್ಧಿ ಹಾಗೂ ವಿವಿಧ ಬೆಳೆ ಬೆಳೆಯಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.<br /> <br /> ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿ.ಪಂ.. ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಸೂಚಿಸಿದರು. ಜಿ.ಪಂ. ಉಪಾಧ್ಯಕ್ಷೆ ಡಾ.ಸೀತಾ ಜಿ.ಹಲಗೇರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಮುಖ್ಯ ಯೋಜನಾ ಅಧಿಕಾರಿ ಟಿ.ಪಿ.ದಂಡಿಗದಾಸರ ಹಾಗೂ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>