<p><strong>ನವದೆಹಲಿ (ಪಿಟಿಐ): </strong>ಗ್ರಾಮೀಣ ಜನರ ಜೀವನಾಧಾರ ಯೋಜನೆಯಾದ `ಆಜೀವಿಕಾ ಪ್ರತಿಷ್ಠಾನ'ದ ಚಟುವಟಿಕೆಯನ್ನು ದೇಶಾದ್ಯಂತ ಅದರಲ್ಲೂ ಕೇಂದ್ರ ಹಾಗೂ ಪೂರ್ವ ಭಾಗಗಳಲ್ಲಿ ತ್ವರಿತವಾಗಿ ವಿಸ್ತರಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಿಹೇಳಿದರು.<br /> <br /> ಇಲ್ಲಿಯ ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ಪ್ರತಿಷ್ಠಾನದ (ಎನ್ಆರ್ಎಲ್ಎಂ) ದ್ವಿತೀಯ ವಾರ್ಷಿಕೋತ್ಸವದಲ್ಲಿ ಮಾತನಾಡಿ ಸೋನಿಯಾ ಅವರು ಈ ವಿಷಯ ತಿಳಿಸಿದರು.<br /> <br /> `ಶೀಘ್ರ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ' ಎಂಬ ಟೀಕೆಯನ್ನು ಇದೇ ಸಂದರ್ಭಗಳಲ್ಲಿ ಅಲ್ಲಗಳೆದರು.<br /> <br /> ದುರ್ಬಲ ವರ್ಗದವರು ಅದರಲ್ಲೂ ಮಹಿಳೆಯರ ಸಬಲೀಕರಣವೇ ಯುಪಿಎ ಸರ್ಕಾರದ ಮುಖ್ಯ ಗುರಿ ಎಂದು ಸೋನಿಯಾ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.<br /> <br /> ಈಶಾನ್ಯ ರಾಜ್ಯಗಳ ಹಾಗೂ ಉತ್ತರಾಖಂಡ, ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ರಾಜ್ಯಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡುವ ಯೋಜನೆಯನ್ನೂ ಸೋನಿಯಾ ಈ ಸಂದರ್ಭದಲ್ಲಿ ಘೋಷಿಸಿದರು<br /> <br /> ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ 7 ಕೋಟಿ ಬಡತನ ರೇಖೆ ಕೆಳಗಿನ (ಬಿಪಿಎಲ್) ಕುಟುಂಬಗಳನ್ನು ಬಡತನದಿಂದ ಮುಕ್ತಗೊಳಿಸುವ ಗುರಿ ಹೊಂದಲಾಗಿದ್ದು ಇದು ನಿಜಕ್ಕೂ ಪ್ರಯಾಸದ ಕೆಲಸ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಗ್ರಾಮೀಣ ಜನರ ಜೀವನಾಧಾರ ಯೋಜನೆಯಾದ `ಆಜೀವಿಕಾ ಪ್ರತಿಷ್ಠಾನ'ದ ಚಟುವಟಿಕೆಯನ್ನು ದೇಶಾದ್ಯಂತ ಅದರಲ್ಲೂ ಕೇಂದ್ರ ಹಾಗೂ ಪೂರ್ವ ಭಾಗಗಳಲ್ಲಿ ತ್ವರಿತವಾಗಿ ವಿಸ್ತರಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಿಹೇಳಿದರು.<br /> <br /> ಇಲ್ಲಿಯ ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ಪ್ರತಿಷ್ಠಾನದ (ಎನ್ಆರ್ಎಲ್ಎಂ) ದ್ವಿತೀಯ ವಾರ್ಷಿಕೋತ್ಸವದಲ್ಲಿ ಮಾತನಾಡಿ ಸೋನಿಯಾ ಅವರು ಈ ವಿಷಯ ತಿಳಿಸಿದರು.<br /> <br /> `ಶೀಘ್ರ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ' ಎಂಬ ಟೀಕೆಯನ್ನು ಇದೇ ಸಂದರ್ಭಗಳಲ್ಲಿ ಅಲ್ಲಗಳೆದರು.<br /> <br /> ದುರ್ಬಲ ವರ್ಗದವರು ಅದರಲ್ಲೂ ಮಹಿಳೆಯರ ಸಬಲೀಕರಣವೇ ಯುಪಿಎ ಸರ್ಕಾರದ ಮುಖ್ಯ ಗುರಿ ಎಂದು ಸೋನಿಯಾ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.<br /> <br /> ಈಶಾನ್ಯ ರಾಜ್ಯಗಳ ಹಾಗೂ ಉತ್ತರಾಖಂಡ, ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ರಾಜ್ಯಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡುವ ಯೋಜನೆಯನ್ನೂ ಸೋನಿಯಾ ಈ ಸಂದರ್ಭದಲ್ಲಿ ಘೋಷಿಸಿದರು<br /> <br /> ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ 7 ಕೋಟಿ ಬಡತನ ರೇಖೆ ಕೆಳಗಿನ (ಬಿಪಿಎಲ್) ಕುಟುಂಬಗಳನ್ನು ಬಡತನದಿಂದ ಮುಕ್ತಗೊಳಿಸುವ ಗುರಿ ಹೊಂದಲಾಗಿದ್ದು ಇದು ನಿಜಕ್ಕೂ ಪ್ರಯಾಸದ ಕೆಲಸ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>