<p>ಕೋಲ್ಕತ್ತ (ಪಿಟಿಐ): ಭಾರತದ ಸ್ಪರ್ಧಿಗಳು ಇರಾನ್ನಲ್ಲಿ ಮಂಗಳವಾರ ಆರಂಭವಾಗಲಿರುವ ಏಷ್ಯನ್ ಆರ್ಚರಿ ಚಾಂಪಿಯನ್ಷಿಪ್ನಲ್ಲಿ ಪದಕ ಜಯಿಸಿ ಲಂಡನ್ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಲು ಕಸರತ್ತು ನಡೆಸಲಿದ್ದಾರೆ.<br /> <br /> `ತಂಡ ಹಾಗೂ ರಿಕರ್ವ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ವಿಶ್ವಾಸವಿದೆ~ ಎಂದು ನವದೆಹಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಸ್ವರ್ಣ ಗೆದ್ದಿದ್ದ ದೀಪಿಕಾ ಕುಮಾರಿ ಭರವಸೆ ವ್ಯಕ್ತಪಡಿಸಿದ್ದಾರೆ. 17 ವರ್ಷದ ದೀಪಿಕಾ ಈಗಾಗಲೇ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇನ್ನುಳಿದ ಕೆಲ ಸ್ಪರ್ಧಿಗಳು ಇಲ್ಲಿ ಪದಕ ಗೆದ್ದು ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಳ್ಳುವತ್ತ ಚಿತ್ತ ಹರಿಸಲಿದ್ದಾರೆ. <br /> <br /> ಭಾರತದ ಇನ್ನೊಬ್ಬ ಸ್ಪರ್ಧಿ ಜಯಂತ್ ತಾಲೂಕ್ದಾರ್ ಸಹ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ವಿಶ್ವದ ಅಗ್ರ ತಂಡಗಳಾದ ದಕ್ಷಿಣ ಕೊರಿಯಾ, ಚೀನಾ, ಕಜಕಸ್ತಾನ್, ಆತಿಥೇಯ ಇರಾನ್ ಹಾಗೂ ಉಜ್ಬೇಕಿಸ್ತಾನ ಸೇರಿದಂತೆ ಇತರ ದೇಶಗಳ ಸ್ಪರ್ಧಿಗಳು ಪ್ರಬಲ ಪೈಪೋಟಿ ನೀಡಲಿದ್ದಾರೆ. ಆದ್ದರಿಂದ ಈ ಚಾಂಪಿಯನ್ಷಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದು ಇರಾನ್ಗೆ ತೆರಳುವ ಮುನ್ನ ಕೋಲ್ಕತ್ತದಲ್ಲಿ ಅವರು ಹೇಳಿದರು.<br /> <br /> `ಒಲಿಂಪಿಕ್ಸ್ ಆರಂಭಕ್ಕೆ ಕೆಲ ತಿಂಗಳು ಮಾತ್ರ ಬಾಕಿ ಇರುವುದರಿಂದ ಉತ್ತಮವಾಗಿ ಸಜ್ಜುಗೊಳ್ಳುತ್ತಿದ್ದೇವೆ. ಸಾಕಷ್ಟು ಸಿದ್ದತೆ ಮಾಡಿಕೊಂಡಿದ್ದೇವೆ ಎಂದು ಜಯಂತ್ ಹೇಳಿದರು. ಪುರುಷರ ರಿಕರ್ವ್ ತಂಡ ವಿಭಾಗದಲ್ಲಿ ಜಯಂತ್ ಪಾಲ್ಗೊಳ್ಳಲಿದ್ದಾರೆ. ಇದೇ ವರ್ಷದ ಮೇ ನಲ್ಲಿ ನಡೆದ ಆರ್ಚರಿ ವಿಶ್ವಕಪ್ನಲ್ಲಿ ಈ ತಂಡ ಬೆಳ್ಳಿ ಜಯಿಸಿತ್ತು. ಕ್ರೊಯೇಷಿಯಾದಲ್ಲಿ ಬೆಳ್ಳಿ ಪದಕ ಜಯಿಸಿದ್ದು, ವಿಶ್ವಾಸ ಹೆಚ್ಚಿಸಿದೆ.</p>.<p>ಈ ಚಾಂಪಿಯನ್ಷಿಪ್ಗೆ ಮನಶಾಸ್ತ್ರಜ್ಞ ವೈಭವ್ ಅವರ ಬಳಿ ತರಬೇತಿ ಪಡೆದು ಮಾನಸಿಕವಾಗಿ ಸಜ್ಜುಗೊಂಡಿದ್ದೇನೆ ಎಂದು ಭಾರತ ತಂಡದಲ್ಲಿರುವ ರಾಹುಲ್ ಬ್ಯಾನರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ (ಪಿಟಿಐ): ಭಾರತದ ಸ್ಪರ್ಧಿಗಳು ಇರಾನ್ನಲ್ಲಿ ಮಂಗಳವಾರ ಆರಂಭವಾಗಲಿರುವ ಏಷ್ಯನ್ ಆರ್ಚರಿ ಚಾಂಪಿಯನ್ಷಿಪ್ನಲ್ಲಿ ಪದಕ ಜಯಿಸಿ ಲಂಡನ್ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಲು ಕಸರತ್ತು ನಡೆಸಲಿದ್ದಾರೆ.<br /> <br /> `ತಂಡ ಹಾಗೂ ರಿಕರ್ವ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ವಿಶ್ವಾಸವಿದೆ~ ಎಂದು ನವದೆಹಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಸ್ವರ್ಣ ಗೆದ್ದಿದ್ದ ದೀಪಿಕಾ ಕುಮಾರಿ ಭರವಸೆ ವ್ಯಕ್ತಪಡಿಸಿದ್ದಾರೆ. 17 ವರ್ಷದ ದೀಪಿಕಾ ಈಗಾಗಲೇ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇನ್ನುಳಿದ ಕೆಲ ಸ್ಪರ್ಧಿಗಳು ಇಲ್ಲಿ ಪದಕ ಗೆದ್ದು ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಳ್ಳುವತ್ತ ಚಿತ್ತ ಹರಿಸಲಿದ್ದಾರೆ. <br /> <br /> ಭಾರತದ ಇನ್ನೊಬ್ಬ ಸ್ಪರ್ಧಿ ಜಯಂತ್ ತಾಲೂಕ್ದಾರ್ ಸಹ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ವಿಶ್ವದ ಅಗ್ರ ತಂಡಗಳಾದ ದಕ್ಷಿಣ ಕೊರಿಯಾ, ಚೀನಾ, ಕಜಕಸ್ತಾನ್, ಆತಿಥೇಯ ಇರಾನ್ ಹಾಗೂ ಉಜ್ಬೇಕಿಸ್ತಾನ ಸೇರಿದಂತೆ ಇತರ ದೇಶಗಳ ಸ್ಪರ್ಧಿಗಳು ಪ್ರಬಲ ಪೈಪೋಟಿ ನೀಡಲಿದ್ದಾರೆ. ಆದ್ದರಿಂದ ಈ ಚಾಂಪಿಯನ್ಷಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದು ಇರಾನ್ಗೆ ತೆರಳುವ ಮುನ್ನ ಕೋಲ್ಕತ್ತದಲ್ಲಿ ಅವರು ಹೇಳಿದರು.<br /> <br /> `ಒಲಿಂಪಿಕ್ಸ್ ಆರಂಭಕ್ಕೆ ಕೆಲ ತಿಂಗಳು ಮಾತ್ರ ಬಾಕಿ ಇರುವುದರಿಂದ ಉತ್ತಮವಾಗಿ ಸಜ್ಜುಗೊಳ್ಳುತ್ತಿದ್ದೇವೆ. ಸಾಕಷ್ಟು ಸಿದ್ದತೆ ಮಾಡಿಕೊಂಡಿದ್ದೇವೆ ಎಂದು ಜಯಂತ್ ಹೇಳಿದರು. ಪುರುಷರ ರಿಕರ್ವ್ ತಂಡ ವಿಭಾಗದಲ್ಲಿ ಜಯಂತ್ ಪಾಲ್ಗೊಳ್ಳಲಿದ್ದಾರೆ. ಇದೇ ವರ್ಷದ ಮೇ ನಲ್ಲಿ ನಡೆದ ಆರ್ಚರಿ ವಿಶ್ವಕಪ್ನಲ್ಲಿ ಈ ತಂಡ ಬೆಳ್ಳಿ ಜಯಿಸಿತ್ತು. ಕ್ರೊಯೇಷಿಯಾದಲ್ಲಿ ಬೆಳ್ಳಿ ಪದಕ ಜಯಿಸಿದ್ದು, ವಿಶ್ವಾಸ ಹೆಚ್ಚಿಸಿದೆ.</p>.<p>ಈ ಚಾಂಪಿಯನ್ಷಿಪ್ಗೆ ಮನಶಾಸ್ತ್ರಜ್ಞ ವೈಭವ್ ಅವರ ಬಳಿ ತರಬೇತಿ ಪಡೆದು ಮಾನಸಿಕವಾಗಿ ಸಜ್ಜುಗೊಂಡಿದ್ದೇನೆ ಎಂದು ಭಾರತ ತಂಡದಲ್ಲಿರುವ ರಾಹುಲ್ ಬ್ಯಾನರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>