<p><strong>ನವದೆಹಲಿ (ಪಿಟಿಐ): </strong>ಕಳೆದ 16 ತಿಂಗಳುಗಳಿಂದ ಬಂಧನದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಶರ್ಮ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಗುರುವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.<br /> <br /> ಶರ್ಮ ಮೇಲೆ ಹಲವು ಕ್ರಿಮಿನಲ್ ಆರೋಪಗಳನ್ನು ನರೇಂದ್ರ ಮೋದಿ ಸರ್ಕಾರ ಹೊರಿಸಿದೆ. ನ್ಯಾಯಮೂರ್ತಿ ಆಫ್ತಾಬ್ ಅಲಂ ನೇತೃತ್ವದ ಪೀಠವು ಶರ್ಮ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿತು. ಆದರೆ ಅವರಿಗೆ ಕುಟುಂಬದವರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತು.<br /> <br /> ಕಛ್ ಜಿಲ್ಲೆಯಲ್ಲಿ ಖಾಸಗಿ ಕಂಪೆನಿಗಳಿಗೆ ಭೂ ಮಂಜೂರಾತಿಯಲ್ಲಿ ಅಕ್ರಮ ಎಸಗಿರುವುದು ಸೇರಿದಂತೆ ಹಲವು ಆರೋಪಗಳನ್ನು ಶರ್ಮ ಮೇಲೆ ಸರ್ಕಾರ ಹೊರಿಸಿದೆ.<br /> <br /> ಐಪಿಎಸ್ ಅಧಿಕಾರಿಯಾದ ತಮ್ಮ ಕಿರಿಯ ಸಹೋದರ ಕುಲದೀಪ್ ಶರ್ಮ, ಮೋದಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆ ಎಳೆಯುತ್ತಿದ್ದಾರೆ. ಇದಕ್ಕೆ ಸೇಡು ತೀರಿಸಿಕೊಳ್ಳಲು ಸರ್ಕಾರ ತಮ್ಮ ವಿರುದ್ಧ ಮೊಕದ್ದಮೆ ಹೂಡಿದೆ ಎಂದು ಪ್ರದೀಪ್ ಶರ್ಮ ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕಳೆದ 16 ತಿಂಗಳುಗಳಿಂದ ಬಂಧನದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಶರ್ಮ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಗುರುವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.<br /> <br /> ಶರ್ಮ ಮೇಲೆ ಹಲವು ಕ್ರಿಮಿನಲ್ ಆರೋಪಗಳನ್ನು ನರೇಂದ್ರ ಮೋದಿ ಸರ್ಕಾರ ಹೊರಿಸಿದೆ. ನ್ಯಾಯಮೂರ್ತಿ ಆಫ್ತಾಬ್ ಅಲಂ ನೇತೃತ್ವದ ಪೀಠವು ಶರ್ಮ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿತು. ಆದರೆ ಅವರಿಗೆ ಕುಟುಂಬದವರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತು.<br /> <br /> ಕಛ್ ಜಿಲ್ಲೆಯಲ್ಲಿ ಖಾಸಗಿ ಕಂಪೆನಿಗಳಿಗೆ ಭೂ ಮಂಜೂರಾತಿಯಲ್ಲಿ ಅಕ್ರಮ ಎಸಗಿರುವುದು ಸೇರಿದಂತೆ ಹಲವು ಆರೋಪಗಳನ್ನು ಶರ್ಮ ಮೇಲೆ ಸರ್ಕಾರ ಹೊರಿಸಿದೆ.<br /> <br /> ಐಪಿಎಸ್ ಅಧಿಕಾರಿಯಾದ ತಮ್ಮ ಕಿರಿಯ ಸಹೋದರ ಕುಲದೀಪ್ ಶರ್ಮ, ಮೋದಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆ ಎಳೆಯುತ್ತಿದ್ದಾರೆ. ಇದಕ್ಕೆ ಸೇಡು ತೀರಿಸಿಕೊಳ್ಳಲು ಸರ್ಕಾರ ತಮ್ಮ ವಿರುದ್ಧ ಮೊಕದ್ದಮೆ ಹೂಡಿದೆ ಎಂದು ಪ್ರದೀಪ್ ಶರ್ಮ ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>