<p><strong>ನವದೆಹಲಿ (ಪಿಟಿಐ): </strong>ಬೆಂಗಳೂರಿನಲ್ಲಿ ರೂ90 ಸಾವಿರ ಕೋಟಿ ವೆಚ್ಚದಲ್ಲಿ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐಟಿಐಆರ್) ಸ್ಥಾಪಿಸಲು ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವ ಕುರಿತು ಪರಿಶೀಲನೆ ನಡೆಸಲು, ಕೇಂದ್ರ ಸರ್ಕಾರ ಉನ್ನತಾಧಿಕಾರ ಸಮಿತಿ ರಚಿಸಿದೆ. <br /> <br /> ಸಂಸದೀಯ ಕಾರ್ಯದರ್ಶಿ ಅಜಿತ್ ಕುಮಾರ್ ಅಧ್ಯಕ್ಷತೆಯ ಈ ಸಮಿತಿಯು, ಇದೇ 18ರಂದು ಸಭೆ ಸೇರಲಿದ್ದು, ರಾಜ್ಯದ ಪ್ರಸ್ತಾವಕ್ಕೆ ಪ್ರಾಥಮಿಕ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> ಎರಡು ಹಂತಗಳಲ್ಲಿ ರೂ90 ಸಾವಿರ ಕೋಟಿ ಹೂಡಿಕೆಯಲ್ಲಿ, 42.51 ಚದರ ಕಿ.ಮೀ ವಿಸ್ತಾರದಲ್ಲಿ `ಐಟಿಐಆರ್~ ಸ್ಥಾಪಿಸಲು ಕರ್ನಾಟಕ ಸರ್ಕಾರ ಪ್ರಸ್ತಾವ ಸಲ್ಲಿಸಿದೆ. ಉದ್ದೇಶಿತ ಸ್ಥಳದಲ್ಲಿ ಐ.ಟಿ ಪಾರ್ಕ್ಗಳ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ತೆರೆಯಲು ಈ ಮೊತ್ತ ವಿನಿಯೋಗಿಸಲಾಗುವುದು. ಈಗಿರುವ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವುದು, ಸಾರಿಗೆ, ವಿದ್ಯುತ್ ಮತ್ತು ನೀರು ಪೂರೈಕೆ ಜಾಲ ಅಭಿವೃದ್ಧಿಪಡಿಸುವುದೂ ಈ ಯೋಜನೆಯಲ್ಲಿ ಸೇರಿವೆ. <br /> <br /> ಮೊದಲ ಹಂತದ ಯೋಜನೆಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) 2,072 ಏಕರೆಯಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಾಥಮಿಕ ಪ್ರಕಟಣೆ ಹೊರಡಿಸಿದೆ. 44 ಕಂಪನಿಗಳು ಈ ಯೋಜನೆಯಲ್ಲಿ ಬಂಡವಾಳ ತೊಡಗಿಸಲು ಆಸಕ್ತಿ ತೋರಿಸಿದ್ದು, ಇದರಿಂದ ನೇರವಾಗಿ 11 ಲಕ್ಷ ಮತ್ತು ಪರೋಕ್ಷವಾಗಿ 27 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಐ.ಟಿ, ಐ.ಟಿ.ಇ.ಎಸ್ ಮತ್ತು ಎಲೆಕ್ಟ್ರಾನಿಕ್ ವಲಯದಲ್ಲಿ ಹೆಚ್ಚಿನ ಹೂಡಿಕೆ ಆಕರ್ಷಿಸಲು, `ಐಟಿಐಆರ್~ ಸ್ಥಾಪಿಸಲು ಇತ್ತೀಚೆಗೆ ವಾಣಿಜ್ಯ ವ್ಯವಹಾರಗಳ ಸಂಸದೀಯ ಸಮಿತಿ ರಾಜ್ಯಗಳಿಗೆ ಅನುಮತಿ ನೀಡಿತ್ತು. ಈಗಾಗಲೇ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡು `ಐಟಿಐಆರ್~ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬೆಂಗಳೂರಿನಲ್ಲಿ ರೂ90 ಸಾವಿರ ಕೋಟಿ ವೆಚ್ಚದಲ್ಲಿ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐಟಿಐಆರ್) ಸ್ಥಾಪಿಸಲು ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವ ಕುರಿತು ಪರಿಶೀಲನೆ ನಡೆಸಲು, ಕೇಂದ್ರ ಸರ್ಕಾರ ಉನ್ನತಾಧಿಕಾರ ಸಮಿತಿ ರಚಿಸಿದೆ. <br /> <br /> ಸಂಸದೀಯ ಕಾರ್ಯದರ್ಶಿ ಅಜಿತ್ ಕುಮಾರ್ ಅಧ್ಯಕ್ಷತೆಯ ಈ ಸಮಿತಿಯು, ಇದೇ 18ರಂದು ಸಭೆ ಸೇರಲಿದ್ದು, ರಾಜ್ಯದ ಪ್ರಸ್ತಾವಕ್ಕೆ ಪ್ರಾಥಮಿಕ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> ಎರಡು ಹಂತಗಳಲ್ಲಿ ರೂ90 ಸಾವಿರ ಕೋಟಿ ಹೂಡಿಕೆಯಲ್ಲಿ, 42.51 ಚದರ ಕಿ.ಮೀ ವಿಸ್ತಾರದಲ್ಲಿ `ಐಟಿಐಆರ್~ ಸ್ಥಾಪಿಸಲು ಕರ್ನಾಟಕ ಸರ್ಕಾರ ಪ್ರಸ್ತಾವ ಸಲ್ಲಿಸಿದೆ. ಉದ್ದೇಶಿತ ಸ್ಥಳದಲ್ಲಿ ಐ.ಟಿ ಪಾರ್ಕ್ಗಳ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ತೆರೆಯಲು ಈ ಮೊತ್ತ ವಿನಿಯೋಗಿಸಲಾಗುವುದು. ಈಗಿರುವ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವುದು, ಸಾರಿಗೆ, ವಿದ್ಯುತ್ ಮತ್ತು ನೀರು ಪೂರೈಕೆ ಜಾಲ ಅಭಿವೃದ್ಧಿಪಡಿಸುವುದೂ ಈ ಯೋಜನೆಯಲ್ಲಿ ಸೇರಿವೆ. <br /> <br /> ಮೊದಲ ಹಂತದ ಯೋಜನೆಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) 2,072 ಏಕರೆಯಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಾಥಮಿಕ ಪ್ರಕಟಣೆ ಹೊರಡಿಸಿದೆ. 44 ಕಂಪನಿಗಳು ಈ ಯೋಜನೆಯಲ್ಲಿ ಬಂಡವಾಳ ತೊಡಗಿಸಲು ಆಸಕ್ತಿ ತೋರಿಸಿದ್ದು, ಇದರಿಂದ ನೇರವಾಗಿ 11 ಲಕ್ಷ ಮತ್ತು ಪರೋಕ್ಷವಾಗಿ 27 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಐ.ಟಿ, ಐ.ಟಿ.ಇ.ಎಸ್ ಮತ್ತು ಎಲೆಕ್ಟ್ರಾನಿಕ್ ವಲಯದಲ್ಲಿ ಹೆಚ್ಚಿನ ಹೂಡಿಕೆ ಆಕರ್ಷಿಸಲು, `ಐಟಿಐಆರ್~ ಸ್ಥಾಪಿಸಲು ಇತ್ತೀಚೆಗೆ ವಾಣಿಜ್ಯ ವ್ಯವಹಾರಗಳ ಸಂಸದೀಯ ಸಮಿತಿ ರಾಜ್ಯಗಳಿಗೆ ಅನುಮತಿ ನೀಡಿತ್ತು. ಈಗಾಗಲೇ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡು `ಐಟಿಐಆರ್~ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>