<p><strong>ಮಹದೇವಪುರ:</strong> ಯುವ ಪೀಳಿಗೆ ತಾಂತ್ರಿಕ ಶಿಕ್ಷಣದತ್ತ ಹೆಚ್ಚಿನ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತವು ಐಟಿ ಕ್ಷೇತ್ರದಲ್ಲಿ ಮುಂದುವರೆದ ದೇಶಗಳ ಪೈಕಿ ಒಂದಾಗುವಂತಾಗಿದೆ ಎಂದು ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಸ್.ಎಂ.ವೆಂಕಟಪತಿ ಅಭಿಪ್ರಾಯಪಟ್ಟರು.<br /> <br /> ಕ್ಷೇತ್ರದ ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಮಹಿಳಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಇನ್ಫೋಸಿಸ್ ಕ್ಯಾಂಪಸ್ ಕನೆಕ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಅವರು ಮಾತನಾಡಿದರು.<br /> <br /> `ಹಲವು ವರ್ಷಗಳ ಹಿಂದೆ ಐಟಿ ಕ್ಷೇತ್ರದಲ್ಲಿ ಭಾರತವು ಸಾಕಷ್ಟು ಹಿಂದೆ ಇತ್ತು. ಯುವ ಪೀಳಿಗೆಯ ಸತತ ಪರಿಶ್ರಮ ಹಾಗೂ ಆಸಕ್ತಿಯಿಂದಾಗಿ ಐಟಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ~ ಎಂದು ಅವರು ಹೇಳಿದರು.<br /> ಮುಖ್ಯ ಅತಿಥಿಯಾಗಿದ್ದ ಇನ್ಫೋಸಿಸ್ನ ರಿತೇಶ ಕುಂಬ್ಳೆ, ಐಟಿ ಉದ್ಯಮ ಮತ್ತು ಸಾಧನೆ ಕುರಿತು ಮಾತನಾಡಿದರು. <br /> <br /> ಎಂ.ಜಿ.ಚಾರಿಟೇಬಲ್ ಟ್ರಸ್ಟ್ನ ನಿದೇರ್ಶಕರಾದ ಬಿ.ಐ.ರಮಾದೇವಿ, ಎಸ್.ವಿ.ಪ್ರಮೋದ, ಎಸ್.ವಿ.ರಾಜೀವ, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ. ಸತೀಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> ಯುವ ಪೀಳಿಗೆ ತಾಂತ್ರಿಕ ಶಿಕ್ಷಣದತ್ತ ಹೆಚ್ಚಿನ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತವು ಐಟಿ ಕ್ಷೇತ್ರದಲ್ಲಿ ಮುಂದುವರೆದ ದೇಶಗಳ ಪೈಕಿ ಒಂದಾಗುವಂತಾಗಿದೆ ಎಂದು ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಸ್.ಎಂ.ವೆಂಕಟಪತಿ ಅಭಿಪ್ರಾಯಪಟ್ಟರು.<br /> <br /> ಕ್ಷೇತ್ರದ ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಮಹಿಳಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಇನ್ಫೋಸಿಸ್ ಕ್ಯಾಂಪಸ್ ಕನೆಕ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಅವರು ಮಾತನಾಡಿದರು.<br /> <br /> `ಹಲವು ವರ್ಷಗಳ ಹಿಂದೆ ಐಟಿ ಕ್ಷೇತ್ರದಲ್ಲಿ ಭಾರತವು ಸಾಕಷ್ಟು ಹಿಂದೆ ಇತ್ತು. ಯುವ ಪೀಳಿಗೆಯ ಸತತ ಪರಿಶ್ರಮ ಹಾಗೂ ಆಸಕ್ತಿಯಿಂದಾಗಿ ಐಟಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ~ ಎಂದು ಅವರು ಹೇಳಿದರು.<br /> ಮುಖ್ಯ ಅತಿಥಿಯಾಗಿದ್ದ ಇನ್ಫೋಸಿಸ್ನ ರಿತೇಶ ಕುಂಬ್ಳೆ, ಐಟಿ ಉದ್ಯಮ ಮತ್ತು ಸಾಧನೆ ಕುರಿತು ಮಾತನಾಡಿದರು. <br /> <br /> ಎಂ.ಜಿ.ಚಾರಿಟೇಬಲ್ ಟ್ರಸ್ಟ್ನ ನಿದೇರ್ಶಕರಾದ ಬಿ.ಐ.ರಮಾದೇವಿ, ಎಸ್.ವಿ.ಪ್ರಮೋದ, ಎಸ್.ವಿ.ರಾಜೀವ, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ. ಸತೀಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>