<p><strong>ಬೆಂಗಳೂರು: </strong>ಮಾಹಿತಿ, ಜೈವಿಕ ಮತ್ತು ನ್ಯಾನೊ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯು ದೇಶದ ಭವಿಷ್ಯವನ್ನೇ ಬದಲಿಸಲಿದೆ ಎಂದು ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅಭಿಪ್ರಾಯಪಟ್ಟಿದ್ದಾರೆ.<br /> <br /> ಮಂಗಳವಾರ ಇಲ್ಲಿ ಬೆಂಗಳೂರು ಐಟಿ ಡಾಟ್ಬಿಜ್ -2011ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯು ಶ್ರೀಸಾಮಾನ್ಯನ ಬದುಕನ್ನೂ ಉತ್ತಮ ಪಡಿಸಿಸುವಂತಿರಬೇಕು. ಈ ಹಿನ್ನೆಲೆಯಲ್ಲಿ ಸಾಮಾಜಿಕ, ಆರ್ಥಿಕ, ಮಾನವೀಯ ನೆಲೆಗಟ್ಟಿನಲ್ಲಿ ಅಭಿವೃದ್ಧಿಯ ಕುರಿತು ಉದ್ಯಮ ಸಂಸ್ಥೆಗಳು ಯೋಚಿಸಬೇಕು ಎಂದರು. <br /> <br /> ಕಳೆದ ಒಂದು ದಶಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳಾಗಿವೆ. ಇದರಿಂದ ತಂತ್ರಜ್ಞಾನ ಜನಸಾಮಾನ್ಯರಿಗೂ ಕೈಗೆಟುಕುತ್ತಿದೆ. ಅಗ್ಗದ ಕಾರು, ಅಗ್ಗದ ಮೊಬೈಲ್, ಈಗ ವಿದ್ಯಾರ್ಥಿಗಳಿಗಾಗಿ ಅಗ್ಗದ ಟಚ್ ಪ್ಯಾಡ್ ಟ್ಯಾಬ್ಲೆಟ್ಗಳು ಮಾರುಕಟ್ಟೆಗೆ ಬರುತ್ತಿವೆ ಎಂದರು. <br /> <br /> ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನವನ್ನು ಕರ್ನಾಟಕ ಸರ್ಕಾರ ಒಂದೇ ಸೂರಿನಡಿ ತಂದಿದೆ. ಇದು ದೇಶದ ಆರ್ಥಿಕ ವೃದ್ಧಿಗೂ ಸಹಕಾರಿ. ಆದರೆ, ಇದರ ಜತೆಯಲ್ಲೇ, ಮೂಲಸೌಕರ್ಯ ವೃದ್ಧಿ ಮತ್ತು ಉತ್ತಮ ಶಿಕ್ಷಣದೆಡೆಗೂ ಗಮನ ಹರಿಸಬೇಕು ಎಂದರು. <br /> <br /> ಐಟಿ ಬಿಜ್ ಮೇಳ ಅಕ್ಟೋಬರ್ 18 ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಹಲವಾರು ಐ.ಟಿ ಕಂಪೆನಿಗಳು ಮೇಳದಲ್ಲಿ ಭಾಗವಹಿಸುತ್ತಿವೆ.<br /> <br /> <strong>ಹೊಸಅನಿಮೇಷನ್ ನೀತಿ</strong>: 2009-10ನೇ ಸಾಲಿನಲ್ಲಿ ರಾಜ್ಯದ ಐಟಿ ವರಮಾನ ದಾಖಲೆ ಮಟ್ಟ ತಲುಪಿದೆ. ಸದ್ಯದಲ್ಲೇ ಅನಿಮೇಷನ್ ಮತ್ತು ಗೇಮಿಂಗ್ಗೆ ಸಂಬಂಧಿಸಿದ ಹೊಸ ನೀತಿಯನ್ನು ಪ್ರಕಟಿಸಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಹೇಳಿದರು. <br /> <br /> ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್ ವಿದ್ಯಾಶಂಕರ್, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದ ನಿರ್ದೇಶಕ ಜೆ. ಪಾರ್ಥಸಾರಥಿ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.<br /> <br /> <strong>ಸಂಶೋಧನೆ ಘಟಕ <br /> </strong>ದೇಶದಲ್ಲಿ ಮಾಹಿತಿ ತಂತ್ರಜ್ಞಾನ ತ್ವರಿತವಾಗಿ ಬೆಳೆಯುತ್ತಿದ್ದು, ಕಳೆದ 2 ವರ್ಷಗಳಲ್ಲಿ ದೇಶದ ಐ.ಟಿ ಕ್ಷೇತ್ರದಲ್ಲಿ 5 ಲಕ್ಷ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಮೊಬೈಲ್ ಫೋನ್ ಆಧಾರಿತ ಸಂವಹನ ಕ್ರಾಂತಿಯಿಂದ ಶ್ರೀಸಾಮಾನ್ಯನ ಮನೆ ಬಾಗಿಲಿಗೆ ತಂತ್ರಜ್ಞಾನ ಬಂದಿದೆ. <br /> <br /> ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಹೇಗಿರಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಮಾದರಿ ಸಂಶೋಧನಾ ಘಟಕವೊಂದನ್ನುಆರಂಭಿಸಬೇಕು ಎಂದು ಇನ್ಫೋಸಿಸ್ ಸಹ ಅಧ್ಯಕ್ಷ ಮತ್ತು ಮಾಹಿತಿ ತಂತ್ರಜ್ಞಾನ ಮುನ್ನೋಟ ತಂಡದ ಅಧ್ಯಕ್ಷ ಎಸ್. ಗೋಪಾಲಕೃಷ್ಣನ್ ಸಲಹೆ ನೀಡಿದರು. <br /> <br /> ಈ ಘಟಕವು ತಂತ್ರಜ್ಞಾನ ಆಧಾರಿತ ಸೇವೆಗಳು, ಉತ್ಪನ್ನಗಳಿಗೆ ಪರಿಹಾರ ಒದಗಿಸಲಿದ್ದು, ಬೆಂಗಳೂರು ಈ ಘಟಕ ಸ್ಥಾಪನೆಗೆ ಸೂಕ್ತ ಸ್ಥಳವಾಗಿದೆ. ಭವಿಷ್ಯದಲ್ಲಿ ಈ ಘಟಕ ಇಡೀ ವಿಶ್ವಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಾಹಿತಿ, ಜೈವಿಕ ಮತ್ತು ನ್ಯಾನೊ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯು ದೇಶದ ಭವಿಷ್ಯವನ್ನೇ ಬದಲಿಸಲಿದೆ ಎಂದು ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅಭಿಪ್ರಾಯಪಟ್ಟಿದ್ದಾರೆ.<br /> <br /> ಮಂಗಳವಾರ ಇಲ್ಲಿ ಬೆಂಗಳೂರು ಐಟಿ ಡಾಟ್ಬಿಜ್ -2011ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯು ಶ್ರೀಸಾಮಾನ್ಯನ ಬದುಕನ್ನೂ ಉತ್ತಮ ಪಡಿಸಿಸುವಂತಿರಬೇಕು. ಈ ಹಿನ್ನೆಲೆಯಲ್ಲಿ ಸಾಮಾಜಿಕ, ಆರ್ಥಿಕ, ಮಾನವೀಯ ನೆಲೆಗಟ್ಟಿನಲ್ಲಿ ಅಭಿವೃದ್ಧಿಯ ಕುರಿತು ಉದ್ಯಮ ಸಂಸ್ಥೆಗಳು ಯೋಚಿಸಬೇಕು ಎಂದರು. <br /> <br /> ಕಳೆದ ಒಂದು ದಶಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳಾಗಿವೆ. ಇದರಿಂದ ತಂತ್ರಜ್ಞಾನ ಜನಸಾಮಾನ್ಯರಿಗೂ ಕೈಗೆಟುಕುತ್ತಿದೆ. ಅಗ್ಗದ ಕಾರು, ಅಗ್ಗದ ಮೊಬೈಲ್, ಈಗ ವಿದ್ಯಾರ್ಥಿಗಳಿಗಾಗಿ ಅಗ್ಗದ ಟಚ್ ಪ್ಯಾಡ್ ಟ್ಯಾಬ್ಲೆಟ್ಗಳು ಮಾರುಕಟ್ಟೆಗೆ ಬರುತ್ತಿವೆ ಎಂದರು. <br /> <br /> ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನವನ್ನು ಕರ್ನಾಟಕ ಸರ್ಕಾರ ಒಂದೇ ಸೂರಿನಡಿ ತಂದಿದೆ. ಇದು ದೇಶದ ಆರ್ಥಿಕ ವೃದ್ಧಿಗೂ ಸಹಕಾರಿ. ಆದರೆ, ಇದರ ಜತೆಯಲ್ಲೇ, ಮೂಲಸೌಕರ್ಯ ವೃದ್ಧಿ ಮತ್ತು ಉತ್ತಮ ಶಿಕ್ಷಣದೆಡೆಗೂ ಗಮನ ಹರಿಸಬೇಕು ಎಂದರು. <br /> <br /> ಐಟಿ ಬಿಜ್ ಮೇಳ ಅಕ್ಟೋಬರ್ 18 ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಹಲವಾರು ಐ.ಟಿ ಕಂಪೆನಿಗಳು ಮೇಳದಲ್ಲಿ ಭಾಗವಹಿಸುತ್ತಿವೆ.<br /> <br /> <strong>ಹೊಸಅನಿಮೇಷನ್ ನೀತಿ</strong>: 2009-10ನೇ ಸಾಲಿನಲ್ಲಿ ರಾಜ್ಯದ ಐಟಿ ವರಮಾನ ದಾಖಲೆ ಮಟ್ಟ ತಲುಪಿದೆ. ಸದ್ಯದಲ್ಲೇ ಅನಿಮೇಷನ್ ಮತ್ತು ಗೇಮಿಂಗ್ಗೆ ಸಂಬಂಧಿಸಿದ ಹೊಸ ನೀತಿಯನ್ನು ಪ್ರಕಟಿಸಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಹೇಳಿದರು. <br /> <br /> ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್ ವಿದ್ಯಾಶಂಕರ್, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದ ನಿರ್ದೇಶಕ ಜೆ. ಪಾರ್ಥಸಾರಥಿ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.<br /> <br /> <strong>ಸಂಶೋಧನೆ ಘಟಕ <br /> </strong>ದೇಶದಲ್ಲಿ ಮಾಹಿತಿ ತಂತ್ರಜ್ಞಾನ ತ್ವರಿತವಾಗಿ ಬೆಳೆಯುತ್ತಿದ್ದು, ಕಳೆದ 2 ವರ್ಷಗಳಲ್ಲಿ ದೇಶದ ಐ.ಟಿ ಕ್ಷೇತ್ರದಲ್ಲಿ 5 ಲಕ್ಷ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಮೊಬೈಲ್ ಫೋನ್ ಆಧಾರಿತ ಸಂವಹನ ಕ್ರಾಂತಿಯಿಂದ ಶ್ರೀಸಾಮಾನ್ಯನ ಮನೆ ಬಾಗಿಲಿಗೆ ತಂತ್ರಜ್ಞಾನ ಬಂದಿದೆ. <br /> <br /> ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಹೇಗಿರಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಮಾದರಿ ಸಂಶೋಧನಾ ಘಟಕವೊಂದನ್ನುಆರಂಭಿಸಬೇಕು ಎಂದು ಇನ್ಫೋಸಿಸ್ ಸಹ ಅಧ್ಯಕ್ಷ ಮತ್ತು ಮಾಹಿತಿ ತಂತ್ರಜ್ಞಾನ ಮುನ್ನೋಟ ತಂಡದ ಅಧ್ಯಕ್ಷ ಎಸ್. ಗೋಪಾಲಕೃಷ್ಣನ್ ಸಲಹೆ ನೀಡಿದರು. <br /> <br /> ಈ ಘಟಕವು ತಂತ್ರಜ್ಞಾನ ಆಧಾರಿತ ಸೇವೆಗಳು, ಉತ್ಪನ್ನಗಳಿಗೆ ಪರಿಹಾರ ಒದಗಿಸಲಿದ್ದು, ಬೆಂಗಳೂರು ಈ ಘಟಕ ಸ್ಥಾಪನೆಗೆ ಸೂಕ್ತ ಸ್ಥಳವಾಗಿದೆ. ಭವಿಷ್ಯದಲ್ಲಿ ಈ ಘಟಕ ಇಡೀ ವಿಶ್ವಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>