<p><strong>ಮಂಗಳೂರು: </strong>`ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ(ಐಟಿ-ಬಿಟಿ) ಕ್ಷೇತ್ರಗಳ ವಿಕೇಂದ್ರೀಕರಣಕ್ಕಾಗಿ ರಾಜ್ಯದ ದ್ವಿತೀಯ ಹಾಗೂ ತೃತೀಯ ಶ್ರೇಣಿ ನಗರಗಳಲ್ಲಿ `ಐ.ಟಿ-ಬಿ.ಟಿ ಪಾರ್ಕ್' ಸ್ಥಾಪಿಸುವ ಚಿಂತನೆ ಇದೆ' ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.`ಪ್ರಸ್ತುತ ಐ.ಟಿ-ಬಿ.ಟಿ ಕ್ಷೇತ್ರಗಳ ಪ್ರಗತಿ ಬೆಂಗಳೂರಿಗೆ ಸೀಮಿತವಾಗಿದೆ. ಮಂಗಳೂರು, ಹುಬ್ಬಳ್ಳಿ-ಧಾರವಾಡ, ಗುಲ್ಬರ್ಗ ಹಾಗೂ ಮೈಸೂರಿನಂತಹ ಮಹಾನಗರಗಳ್ಲ್ಲಲೂ ಈ ಉದ್ಯಮ ಕ್ಷೇತ್ರಗಳ ಅಭಿವೃದ್ಧಿ ಆಗಬೇಕಿದೆ. ಉದ್ದಿಮೆ ಸ್ಥಾಪನೆಗೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಅಗತ್ಯವಿದೆ.</p>.<p>ರಾಜ್ಯದ ಗ್ರಾಮೀಣ ಭಾಗದಲ್ಲೂ `ಬಿಪಿಒ' ಉದ್ದಿಮೆಯನ್ನು ಬಲಪಡಿಸುವ ಮೂಲಕ ನಗರದತ್ತ ಉದ್ಯೋಗಾಕಾಂಕ್ಷಿಗಳ ವಲಸೆ ತಡೆಯಬೇಕಿದೆ. ಈ ಬಗ್ಗೆ ಇದೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ' ಎಂದರು.<br /> <br /> `ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 11 ಕಿ.ಮೀ. ದೂರದಲ್ಲಿ 10.5 ಸಾವಿರ ಎಕರೆ ಸ್ಥಳದಲ್ಲಿ ಐ.ಟಿ-ಬಿ.ಟಿ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಯೋಜನೆಗೆ 70 ಸಾವಿರ ಕೋಟಿ ರೂಪಾಯಿ ನೆರವು ನೀಡಲಿದೆ' ಎಂದು ಅವರು ತಿಳಿಸಿದರು.<br /> <br /> `ಮಾಹಿತಿ ತಂತ್ರಜ್ಞಾನದ ನೆರವಿನಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳನ್ನು ಕಾಗದ ಬಳಕೆ ಇಲ್ಲದ ಇಲಾಖೆಗಳನ್ನಾಗಿ ಪರಿವರ್ತಿಸುವ ಚಿಂತನೆಯೂ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>`ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ(ಐಟಿ-ಬಿಟಿ) ಕ್ಷೇತ್ರಗಳ ವಿಕೇಂದ್ರೀಕರಣಕ್ಕಾಗಿ ರಾಜ್ಯದ ದ್ವಿತೀಯ ಹಾಗೂ ತೃತೀಯ ಶ್ರೇಣಿ ನಗರಗಳಲ್ಲಿ `ಐ.ಟಿ-ಬಿ.ಟಿ ಪಾರ್ಕ್' ಸ್ಥಾಪಿಸುವ ಚಿಂತನೆ ಇದೆ' ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.`ಪ್ರಸ್ತುತ ಐ.ಟಿ-ಬಿ.ಟಿ ಕ್ಷೇತ್ರಗಳ ಪ್ರಗತಿ ಬೆಂಗಳೂರಿಗೆ ಸೀಮಿತವಾಗಿದೆ. ಮಂಗಳೂರು, ಹುಬ್ಬಳ್ಳಿ-ಧಾರವಾಡ, ಗುಲ್ಬರ್ಗ ಹಾಗೂ ಮೈಸೂರಿನಂತಹ ಮಹಾನಗರಗಳ್ಲ್ಲಲೂ ಈ ಉದ್ಯಮ ಕ್ಷೇತ್ರಗಳ ಅಭಿವೃದ್ಧಿ ಆಗಬೇಕಿದೆ. ಉದ್ದಿಮೆ ಸ್ಥಾಪನೆಗೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಅಗತ್ಯವಿದೆ.</p>.<p>ರಾಜ್ಯದ ಗ್ರಾಮೀಣ ಭಾಗದಲ್ಲೂ `ಬಿಪಿಒ' ಉದ್ದಿಮೆಯನ್ನು ಬಲಪಡಿಸುವ ಮೂಲಕ ನಗರದತ್ತ ಉದ್ಯೋಗಾಕಾಂಕ್ಷಿಗಳ ವಲಸೆ ತಡೆಯಬೇಕಿದೆ. ಈ ಬಗ್ಗೆ ಇದೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ' ಎಂದರು.<br /> <br /> `ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 11 ಕಿ.ಮೀ. ದೂರದಲ್ಲಿ 10.5 ಸಾವಿರ ಎಕರೆ ಸ್ಥಳದಲ್ಲಿ ಐ.ಟಿ-ಬಿ.ಟಿ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಯೋಜನೆಗೆ 70 ಸಾವಿರ ಕೋಟಿ ರೂಪಾಯಿ ನೆರವು ನೀಡಲಿದೆ' ಎಂದು ಅವರು ತಿಳಿಸಿದರು.<br /> <br /> `ಮಾಹಿತಿ ತಂತ್ರಜ್ಞಾನದ ನೆರವಿನಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳನ್ನು ಕಾಗದ ಬಳಕೆ ಇಲ್ಲದ ಇಲಾಖೆಗಳನ್ನಾಗಿ ಪರಿವರ್ತಿಸುವ ಚಿಂತನೆಯೂ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>