<p><strong>ಬೆಂಗಳೂರು:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ ಐದನೇ ಅವತರಣಿಕೆಯ ಟೂರ್ನಿಯಲ್ಲಿ ಐದನೇ ಬೌಲರ್ನ ಕೊರತೆ ಎದುರಿಸುತ್ತಿದೆ! ಅದು ಭಾನುವಾರ ನಡೆದ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.<br /> <br /> `ಐದನೇ ಬೌಲರ್ ಕೊರತೆ ಎಲ್ಲ ಸಮಸ್ಯೆಗಳಿಗೆ ಕಾರಣ~ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಬಳಿಕ ಆರ್ಸಿಬಿ ನಾಯಕ ಡೇನಿಯಲ್ ವೆಟೋರಿ ಹೇಳಿದರು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ಸ್ ಈ ಪಂದ್ಯದಲ್ಲಿ 59 ರನ್ಗಳ ಗೆಲುವು ಪಡೆದಿತ್ತು.<br /> <br /> ಗೆಲುವಿಗೆ 196 ರನ್ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ 19.5 ಓವರ್ಗಳಲ್ಲಿ 136 ರನ್ಗಳಿಗೆ ಆಲೌಟಾಗಿತ್ತು. `ಈ ಪಂದ್ಯದಲ್ಲಿ ಕೆಲವು ಪ್ರಮುಖ ಬೌಲರ್ಗಳೂ ಹೆಚ್ಚು ರನ್ ಬಿಟ್ಟುಕೊಟ್ಟರು. ಆದರೆ ಐದನೇ ಬೌಲರ್ನ ಕೊರತೆ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣ. ಇದು ಟೂರ್ನಿಯ ಆರಂಭದಿಂದಲೇ ಕಾಡುತ್ತಿದೆ~ ಎಂದು ವೆಟೋರಿ ನುಡಿದರು.<br /> <br /> `ಕೊನೆಯ ಐದು ಅಥವಾ ಆರು ಓವರ್ಗಳಲ್ಲಿ ಎದುರಾಳಿ ತಂಡಕ್ಕೆ 100 ರನ್ಗಳನ್ನು ಬಿಟ್ಟುಕೊಡುವುದರಲ್ಲಿ ಅರ್ಥವಿಲ್ಲ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ ಐದನೇ ಅವತರಣಿಕೆಯ ಟೂರ್ನಿಯಲ್ಲಿ ಐದನೇ ಬೌಲರ್ನ ಕೊರತೆ ಎದುರಿಸುತ್ತಿದೆ! ಅದು ಭಾನುವಾರ ನಡೆದ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.<br /> <br /> `ಐದನೇ ಬೌಲರ್ ಕೊರತೆ ಎಲ್ಲ ಸಮಸ್ಯೆಗಳಿಗೆ ಕಾರಣ~ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಬಳಿಕ ಆರ್ಸಿಬಿ ನಾಯಕ ಡೇನಿಯಲ್ ವೆಟೋರಿ ಹೇಳಿದರು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ಸ್ ಈ ಪಂದ್ಯದಲ್ಲಿ 59 ರನ್ಗಳ ಗೆಲುವು ಪಡೆದಿತ್ತು.<br /> <br /> ಗೆಲುವಿಗೆ 196 ರನ್ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ 19.5 ಓವರ್ಗಳಲ್ಲಿ 136 ರನ್ಗಳಿಗೆ ಆಲೌಟಾಗಿತ್ತು. `ಈ ಪಂದ್ಯದಲ್ಲಿ ಕೆಲವು ಪ್ರಮುಖ ಬೌಲರ್ಗಳೂ ಹೆಚ್ಚು ರನ್ ಬಿಟ್ಟುಕೊಟ್ಟರು. ಆದರೆ ಐದನೇ ಬೌಲರ್ನ ಕೊರತೆ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣ. ಇದು ಟೂರ್ನಿಯ ಆರಂಭದಿಂದಲೇ ಕಾಡುತ್ತಿದೆ~ ಎಂದು ವೆಟೋರಿ ನುಡಿದರು.<br /> <br /> `ಕೊನೆಯ ಐದು ಅಥವಾ ಆರು ಓವರ್ಗಳಲ್ಲಿ ಎದುರಾಳಿ ತಂಡಕ್ಕೆ 100 ರನ್ಗಳನ್ನು ಬಿಟ್ಟುಕೊಡುವುದರಲ್ಲಿ ಅರ್ಥವಿಲ್ಲ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>