<p><strong>ಬೆಂಗಳೂರು: </strong>`ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಈ ಬಾರಿ ಐದು ಮಂದಿ ಗಣ್ಯರಿಗೆ 2011ನೇ ಸಾಲಿನ ವಿಶ್ವಕರ್ಮ ಪ್ರಶಸ್ತಿ ನೀಡಿ ಗೌರವಿಸಲಿದೆ~ ಎಂದು ಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ವಾಸ್ತುಶಿಲ್ಪಿ ಸ್ಥಪತಿ ಕೆ.ದಕ್ಷಿಣಾಮೂರ್ತಿ, ಶಿಲ್ಪಿ ಕಮಲಾಚಾರ್, ಭಾರತೀಯ ವಿದ್ಯಾಭವನದ ಮುಖ್ಯಸ್ಥ ಡಾ.ಮತ್ತೂರು ಕೃಷ್ಣಮೂರ್ತಿ, ಬಿಲ್ಲವ ಸಮಾಜದ ಮುಖಂಡ ಜೆ.ಸಿ.ಸುವರ್ಣ ಹಾಗೂ ಕವಯತ್ರಿ ಡಾ.ಲತಾ ರಾಜಶೇಖರ್ ಅವರಿಗೆ ಸೆ.17ರಂದು ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದರು.<br /> <br /> ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.<br /> <br /> ಪ್ರಶಸ್ತಿ ಪುರಸ್ಕೃತರಿಗೆ ತಲಾ 75 ಸಾವಿರ ರೂಪಾಯಿ ಮೌಲ್ಯದ ಚಿನ್ನದ ವಿಶ್ವಕರ್ಮನ ಮೂರ್ತಿಯನ್ನು ನೀಡಲಾಗುವುದು ಎಂದು ತಿಳಿಸಿದರು.<br /> <br /> ವ್ಯವಹಾರದ ಗಿಮಿಕ್ ಅಲ್ಲ: ರಾಜ್ಯದ ವಿವಿಧ ಭಾಗಗಳಲ್ಲಿ ವಿಶ್ವಕರ್ಮ ಸಭಾದಿಂದ ಸಮಾವೇಶವನ್ನು ಸಂಘಟಿಸುತ್ತಿರುವುದು ನನ್ನ ಆಭರಣ ಮಳಿಗೆಗಳ ಪ್ರಚಾರಕ್ಕಾಗಿ ಅಲ್ಲ. ಯಾರಿಗೇ ಆಗಲಿ ಈ ಬಗ್ಗೆ ಸಂದೇಹ ಇದ್ದರೆ, ಅಂಥವರಿಗೆ ಸಮಾವೇಶ ಸಂಘಟನೆಯ ಹೊಣೆ ಹೊರಿಸಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಈ ಬಾರಿ ಐದು ಮಂದಿ ಗಣ್ಯರಿಗೆ 2011ನೇ ಸಾಲಿನ ವಿಶ್ವಕರ್ಮ ಪ್ರಶಸ್ತಿ ನೀಡಿ ಗೌರವಿಸಲಿದೆ~ ಎಂದು ಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ವಾಸ್ತುಶಿಲ್ಪಿ ಸ್ಥಪತಿ ಕೆ.ದಕ್ಷಿಣಾಮೂರ್ತಿ, ಶಿಲ್ಪಿ ಕಮಲಾಚಾರ್, ಭಾರತೀಯ ವಿದ್ಯಾಭವನದ ಮುಖ್ಯಸ್ಥ ಡಾ.ಮತ್ತೂರು ಕೃಷ್ಣಮೂರ್ತಿ, ಬಿಲ್ಲವ ಸಮಾಜದ ಮುಖಂಡ ಜೆ.ಸಿ.ಸುವರ್ಣ ಹಾಗೂ ಕವಯತ್ರಿ ಡಾ.ಲತಾ ರಾಜಶೇಖರ್ ಅವರಿಗೆ ಸೆ.17ರಂದು ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದರು.<br /> <br /> ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.<br /> <br /> ಪ್ರಶಸ್ತಿ ಪುರಸ್ಕೃತರಿಗೆ ತಲಾ 75 ಸಾವಿರ ರೂಪಾಯಿ ಮೌಲ್ಯದ ಚಿನ್ನದ ವಿಶ್ವಕರ್ಮನ ಮೂರ್ತಿಯನ್ನು ನೀಡಲಾಗುವುದು ಎಂದು ತಿಳಿಸಿದರು.<br /> <br /> ವ್ಯವಹಾರದ ಗಿಮಿಕ್ ಅಲ್ಲ: ರಾಜ್ಯದ ವಿವಿಧ ಭಾಗಗಳಲ್ಲಿ ವಿಶ್ವಕರ್ಮ ಸಭಾದಿಂದ ಸಮಾವೇಶವನ್ನು ಸಂಘಟಿಸುತ್ತಿರುವುದು ನನ್ನ ಆಭರಣ ಮಳಿಗೆಗಳ ಪ್ರಚಾರಕ್ಕಾಗಿ ಅಲ್ಲ. ಯಾರಿಗೇ ಆಗಲಿ ಈ ಬಗ್ಗೆ ಸಂದೇಹ ಇದ್ದರೆ, ಅಂಥವರಿಗೆ ಸಮಾವೇಶ ಸಂಘಟನೆಯ ಹೊಣೆ ಹೊರಿಸಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>