<p><strong>ಬೆಂಗಳೂರು</strong>: `ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಐದು ವರ್ಷ ಅಧಿಕಾರದಲ್ಲಿ ಇರುತ್ತೇನೆ. ಈ ವಿಷಯದಲ್ಲಿ ಯಾರಿಗೂ ಅನುಮಾನ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.<br /> <br /> ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಕೆಜೆಪಿಯ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವಧಿ ಪೂರ್ಣಗೊಳಿಸುವುದು ಅನುಮಾನ ಎಂದಿದ್ದರು. ಜೆಡಿಎಸ್ನ ವೈ.ಎಸ್.ವಿ.ದತ್ತ ಕೂಡ ವಚನಗಳ ಮೂಲಕ ಸಿದ್ದರಾಮಯ್ಯ ಅವರನ್ನು ಚುಚ್ಚಿದ್ದರು.<br /> <br /> ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಮಾತನಾಡಿದ ಸಿದ್ದರಾಮಯ್ಯ, `ನಾನು ಹಿಂದೆ ಜನತಾದಳದಲ್ಲಿ ಇದ್ದಿದ್ದು ನಿಜ. ಆದರೆ, ಈಗ ನಾನು ನೂರಕ್ಕೆ ನೂರು ಕಾಂಗ್ರೆಸ್ಸಿಗ. ನನ್ನ ಪ್ರಕಾರ ಕಾಂಗ್ರೆಸ್ನಲ್ಲಿ ಇದ್ದವರೇ ಎಲ್ಲ ಪಕ್ಷಗಳಲ್ಲೂ ಇದ್ದಾರೆ. ದೇವೇಗೌಡರು ಕೂಡ ಹಿಂದೆ ಕಾಂಗ್ರೆಸ್ನಲ್ಲಿದ್ದರು' ಎಂದು ಹೇಳಿದರು.<br /> <br /> ಇದಕ್ಕೆ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ `ದೇವೇಗೌಡರು ಇದ್ದ ಕಾಂಗ್ರೆಸ್ ಬೇರೆ' ಎಂದರು. ಆಗ ಸಿದ್ದರಾಮಯ್ಯ ಅವರು `ನಾನು ಕೂಡ ಈಗಿರುವ ಜನತಾದಳದಲ್ಲಿ ಇರಲಿಲ್ಲ' ಎಂದು ತಿರುಗೇಟು ನೀಡಿದರು.<br /> <br /> `2007ರಲ್ಲಿ ಕಾಂಗ್ರೆಸ್ ಸೇರಿದೆ. ಮೂರು ಬಾರಿ ಆ ಪಕ್ಷದ ಚಿಹ್ನೆ ಮೇಲೆ ಗೆದ್ದು ಶಾಸನ ಸಭೆಗೆ ಬಂದಿದ್ದೇನೆ. ಇಷ್ಟಾದರೂ ಸರ್ಕಾರದಲ್ಲಿ ಇರುವವರೆಲ್ಲ ಜನತಾ ಪರಿವಾರದವರು ಎಂದು ಎತ್ತಿಕಟ್ಟುವ ಪ್ರಯತ್ನ ನಡೆದಿದೆ. ಈ ವಿಷಯದಲ್ಲಿ ಪ್ರತಿಪಕ್ಷಗಳ ಸದಸ್ಯರು ಸಫಲ ಆಗುವುದಿಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ. ನಮ್ಮ ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ' ಎಂದು ಅವರು ಹೇಳಿದರು.<br /> <br /> `ಐದು ವರ್ಷ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ. ಮಾದರಿ ರಾಜ್ಯ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬೇರೆ ರಾಜ್ಯದವರು ಕೂಡ ನಮ್ಮನ್ನು ನೋಡಿ ಅನುಕರಣೆ ಮಾಡುವ ಹಾಗೆ ಕೆಲಸ ಮಾಡುತ್ತೇನೆ' ಎಂದು ಅಭಯ ನೀಡಿದರು.<br /> <br /> ಸ್ಪರ್ಧಿಸಲ್ಲ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ತಮ್ಮ ಹೇಳಿಕೆಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದ ಅವರು ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದರು.<br /> <br /> ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಂದ ಮೇಲೆ ರಾಜ್ಯಸಭೆಗೆ ಹೋಗಬಹುದು ಎಂದು ಬಿಜೆಪಿಯ ಸಿ.ಟಿ.ರವಿ ಕಿಚಾಯಿಸಿದರು. ಅದಕ್ಕೂ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಅವರು, `ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್, ರಾಜ್ಯಪಾಲ.... ಯಾವುದಕ್ಕೂ ಹೋಗುವುದಿಲ್ಲ. ನನ್ನ ಮಾತಿಗೆ ನಾನು ಬದ್ಧ' ಎಂದರು. ಪಕ್ಷದ ಹೈಕಮಾಂಡ್ ಹೇಳಿದರೆ ಏನು ಮಾಡುತ್ತೀರಾ ಎಂದು ಸದಸ್ಯರೊಬ್ಬರು ಕೇಳಿದಾಗ `ನನಗೆ ಬೇಡ ಅಂದರೆ ಅವರ್ಯಾಕೆ ಒತ್ತಾಯ ಮಾಡುತ್ತಾರೆ' ಎಂದು ಮರುಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಐದು ವರ್ಷ ಅಧಿಕಾರದಲ್ಲಿ ಇರುತ್ತೇನೆ. ಈ ವಿಷಯದಲ್ಲಿ ಯಾರಿಗೂ ಅನುಮಾನ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.<br /> <br /> ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಕೆಜೆಪಿಯ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವಧಿ ಪೂರ್ಣಗೊಳಿಸುವುದು ಅನುಮಾನ ಎಂದಿದ್ದರು. ಜೆಡಿಎಸ್ನ ವೈ.ಎಸ್.ವಿ.ದತ್ತ ಕೂಡ ವಚನಗಳ ಮೂಲಕ ಸಿದ್ದರಾಮಯ್ಯ ಅವರನ್ನು ಚುಚ್ಚಿದ್ದರು.<br /> <br /> ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಮಾತನಾಡಿದ ಸಿದ್ದರಾಮಯ್ಯ, `ನಾನು ಹಿಂದೆ ಜನತಾದಳದಲ್ಲಿ ಇದ್ದಿದ್ದು ನಿಜ. ಆದರೆ, ಈಗ ನಾನು ನೂರಕ್ಕೆ ನೂರು ಕಾಂಗ್ರೆಸ್ಸಿಗ. ನನ್ನ ಪ್ರಕಾರ ಕಾಂಗ್ರೆಸ್ನಲ್ಲಿ ಇದ್ದವರೇ ಎಲ್ಲ ಪಕ್ಷಗಳಲ್ಲೂ ಇದ್ದಾರೆ. ದೇವೇಗೌಡರು ಕೂಡ ಹಿಂದೆ ಕಾಂಗ್ರೆಸ್ನಲ್ಲಿದ್ದರು' ಎಂದು ಹೇಳಿದರು.<br /> <br /> ಇದಕ್ಕೆ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ `ದೇವೇಗೌಡರು ಇದ್ದ ಕಾಂಗ್ರೆಸ್ ಬೇರೆ' ಎಂದರು. ಆಗ ಸಿದ್ದರಾಮಯ್ಯ ಅವರು `ನಾನು ಕೂಡ ಈಗಿರುವ ಜನತಾದಳದಲ್ಲಿ ಇರಲಿಲ್ಲ' ಎಂದು ತಿರುಗೇಟು ನೀಡಿದರು.<br /> <br /> `2007ರಲ್ಲಿ ಕಾಂಗ್ರೆಸ್ ಸೇರಿದೆ. ಮೂರು ಬಾರಿ ಆ ಪಕ್ಷದ ಚಿಹ್ನೆ ಮೇಲೆ ಗೆದ್ದು ಶಾಸನ ಸಭೆಗೆ ಬಂದಿದ್ದೇನೆ. ಇಷ್ಟಾದರೂ ಸರ್ಕಾರದಲ್ಲಿ ಇರುವವರೆಲ್ಲ ಜನತಾ ಪರಿವಾರದವರು ಎಂದು ಎತ್ತಿಕಟ್ಟುವ ಪ್ರಯತ್ನ ನಡೆದಿದೆ. ಈ ವಿಷಯದಲ್ಲಿ ಪ್ರತಿಪಕ್ಷಗಳ ಸದಸ್ಯರು ಸಫಲ ಆಗುವುದಿಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ. ನಮ್ಮ ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ' ಎಂದು ಅವರು ಹೇಳಿದರು.<br /> <br /> `ಐದು ವರ್ಷ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ. ಮಾದರಿ ರಾಜ್ಯ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬೇರೆ ರಾಜ್ಯದವರು ಕೂಡ ನಮ್ಮನ್ನು ನೋಡಿ ಅನುಕರಣೆ ಮಾಡುವ ಹಾಗೆ ಕೆಲಸ ಮಾಡುತ್ತೇನೆ' ಎಂದು ಅಭಯ ನೀಡಿದರು.<br /> <br /> ಸ್ಪರ್ಧಿಸಲ್ಲ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ತಮ್ಮ ಹೇಳಿಕೆಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದ ಅವರು ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದರು.<br /> <br /> ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಂದ ಮೇಲೆ ರಾಜ್ಯಸಭೆಗೆ ಹೋಗಬಹುದು ಎಂದು ಬಿಜೆಪಿಯ ಸಿ.ಟಿ.ರವಿ ಕಿಚಾಯಿಸಿದರು. ಅದಕ್ಕೂ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಅವರು, `ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್, ರಾಜ್ಯಪಾಲ.... ಯಾವುದಕ್ಕೂ ಹೋಗುವುದಿಲ್ಲ. ನನ್ನ ಮಾತಿಗೆ ನಾನು ಬದ್ಧ' ಎಂದರು. ಪಕ್ಷದ ಹೈಕಮಾಂಡ್ ಹೇಳಿದರೆ ಏನು ಮಾಡುತ್ತೀರಾ ಎಂದು ಸದಸ್ಯರೊಬ್ಬರು ಕೇಳಿದಾಗ `ನನಗೆ ಬೇಡ ಅಂದರೆ ಅವರ್ಯಾಕೆ ಒತ್ತಾಯ ಮಾಡುತ್ತಾರೆ' ಎಂದು ಮರುಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>