<p><strong>ಬೆಂಗಳೂರು: </strong> ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2014–15ನೇ ಸಾಲಿನ ವಿಜ್ಞಾನ, ಕೃಷಿ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಿದೆ.<br /> <br /> ‘ಪ್ರಶಸ್ತಿಯು ತಲಾ ₨ 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಜೂನ್ನಲ್ಲಿ ನಡೆಯುವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು’ ಎಂದು ಅಕಾಡೆಮಿಯ ಕಾರ್ಯದರ್ಶಿ ಡಾ.ಎಚ್. ಹೊನ್ನೇಗೌಡ ಅವರು ತಿಳಿಸಿದರು.<br /> <br /> ‘ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಅಕಾಡೆಮಿಯು ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. 54 ಪುಸ್ತಕಗಳು ಬಂದಿದ್ದವು. ಅದರಲ್ಲಿ ಅಂತಿಮವಾಗಿ ಐದು ಪುಸ್ತಕಗಳನ್ನು ಆಯ್ಕೆ ಮಾಡಲಾಯಿತು’ ಎಂದು ಹೇಳಿದರು.<br /> <br /> <strong>ಆಯ್ಕೆಯಾದ ಲೇಖಕರು, ಕೃತಿಗಳು<br /> ನಾಗೇಶ್ ಹೆಗಡೆ</strong><br /> (ನರಮಂಡಲ ಬ್ರಹ್ಮಾಂಡ)<br /> <br /> <strong>ಡಾ.ಎನ್.ಎಸ್. ಲೀಲಾ (ಜೀವಜಗತ್ತಿನ ಕೌತುಕಗಳು – ಉಸಿರಾಟ)</strong><br /> ಡಾ. ಎನ್.ಬಿ. ಶ್ರೀಧರ<br /> (‘ಹೈನು ಹೊನ್ನು’. ಸಹ ಲೇಖಕರು: ಡಾ. ಗಣೇಶ ಎಂ. ಹೆಗಡೆ ಮತ್ತು ಡಾ. ನಾಗರಾಜ ಕೆ.ಎಂ.)<br /> <br /> <strong>ಡಾ. ಕೆ.ಸಿ. ಶಶಿಧರ್</strong><br /> (ನೀರೆತ್ತೊಣ ಬನ್ನಿ)<br /> <br /> <strong>ಜಿ.ಎಸ್. ಆರ್ಯಮಿತ್ರ </strong><br /> (ಕ್ಷಯರೋಗ ಕಾರಣ–ಪರಿಹಾರ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2014–15ನೇ ಸಾಲಿನ ವಿಜ್ಞಾನ, ಕೃಷಿ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಿದೆ.<br /> <br /> ‘ಪ್ರಶಸ್ತಿಯು ತಲಾ ₨ 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಜೂನ್ನಲ್ಲಿ ನಡೆಯುವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು’ ಎಂದು ಅಕಾಡೆಮಿಯ ಕಾರ್ಯದರ್ಶಿ ಡಾ.ಎಚ್. ಹೊನ್ನೇಗೌಡ ಅವರು ತಿಳಿಸಿದರು.<br /> <br /> ‘ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಅಕಾಡೆಮಿಯು ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. 54 ಪುಸ್ತಕಗಳು ಬಂದಿದ್ದವು. ಅದರಲ್ಲಿ ಅಂತಿಮವಾಗಿ ಐದು ಪುಸ್ತಕಗಳನ್ನು ಆಯ್ಕೆ ಮಾಡಲಾಯಿತು’ ಎಂದು ಹೇಳಿದರು.<br /> <br /> <strong>ಆಯ್ಕೆಯಾದ ಲೇಖಕರು, ಕೃತಿಗಳು<br /> ನಾಗೇಶ್ ಹೆಗಡೆ</strong><br /> (ನರಮಂಡಲ ಬ್ರಹ್ಮಾಂಡ)<br /> <br /> <strong>ಡಾ.ಎನ್.ಎಸ್. ಲೀಲಾ (ಜೀವಜಗತ್ತಿನ ಕೌತುಕಗಳು – ಉಸಿರಾಟ)</strong><br /> ಡಾ. ಎನ್.ಬಿ. ಶ್ರೀಧರ<br /> (‘ಹೈನು ಹೊನ್ನು’. ಸಹ ಲೇಖಕರು: ಡಾ. ಗಣೇಶ ಎಂ. ಹೆಗಡೆ ಮತ್ತು ಡಾ. ನಾಗರಾಜ ಕೆ.ಎಂ.)<br /> <br /> <strong>ಡಾ. ಕೆ.ಸಿ. ಶಶಿಧರ್</strong><br /> (ನೀರೆತ್ತೊಣ ಬನ್ನಿ)<br /> <br /> <strong>ಜಿ.ಎಸ್. ಆರ್ಯಮಿತ್ರ </strong><br /> (ಕ್ಷಯರೋಗ ಕಾರಣ–ಪರಿಹಾರ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>