<p><strong>ಜಮ್ಮು/ವಾಘಾ ಗಡಿ (ಪಿಟಿಐ):</strong> ಭಾರತದ ಗಡಿ ಭದ್ರತಾ ಪಡೆಯ ಯೋಧರಿಗೆ ವಾಘಾ ಗಡಿಯಲ್ಲಿ ಭಾನುವಾರ ಸಿಹಿ ಹಂಚಿದ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ.<br /> <br /> ಪಾಕಿಸ್ತಾನವು ಭಾನುವಾರ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದೆ. ಇದರ ಅಂಗವಾಗಿ ಪಾಕಿಸ್ತಾನದ ರೇಂಜರ್ಗಳು ಭಾರತದ ಯೋಧರಿಗೆ ಸಿಹಿ ಹಂಚಿದರು. ಭಾರತದ ಯೋಧರು ಸೋಮವಾರ ಪಾಕಿಸ್ತಾನಿ ಸೈನಿಕರಿಗೆ ಸಿಹಿ ವಿತರಿಸಲಿದ್ದಾರೆ.<br /> <br /> <strong>ಉಲ್ಲಂಘನೆ:</strong> ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನದ ಸೇನೆ, ಎರಡು ಕಡೆ ಗುಂಡಿನ ದಾಳಿ ನಡೆಸಿದೆ. ಪೂಂಛ್ ವಲಯದಲ್ಲಿ ಶೆಲ್ ದಾಳಿ ನಡೆಸಿದೆ. ನಾಲ್ಕು ತಿಂಗಳ ನಂತರ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಇದು.<br /> <br /> ಪಾಕಿಸ್ತಾನದ ಪ್ರಚೋದನೆಗೆ ಪ್ರತ್ಯುತ್ತರ ನೀಡುತ್ತಿರುವ ಭಾರತೀಯ ಸೇನೆ, ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ. ‘ಪಾಕಿಸ್ತಾನದ ಸೇನೆ ಯಾವುದೇ ಪ್ರಚೋದನೆ ಇಲ್ಲದೆ ಕದನ ವಿರಾಮ ಉಲ್ಲಂಘಿಸಿತು’ ಎಂದು ರಕ್ಷಣಾ ಪಡೆಗಳ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದರು.<br /> <br /> ಪಾಕ್ ಸೇನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ದಾಳಿ ಆರಂಭಿಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತದ ಯೋಧರಿಗೆ ಹಾನಿ ಆಗಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು/ವಾಘಾ ಗಡಿ (ಪಿಟಿಐ):</strong> ಭಾರತದ ಗಡಿ ಭದ್ರತಾ ಪಡೆಯ ಯೋಧರಿಗೆ ವಾಘಾ ಗಡಿಯಲ್ಲಿ ಭಾನುವಾರ ಸಿಹಿ ಹಂಚಿದ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ.<br /> <br /> ಪಾಕಿಸ್ತಾನವು ಭಾನುವಾರ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದೆ. ಇದರ ಅಂಗವಾಗಿ ಪಾಕಿಸ್ತಾನದ ರೇಂಜರ್ಗಳು ಭಾರತದ ಯೋಧರಿಗೆ ಸಿಹಿ ಹಂಚಿದರು. ಭಾರತದ ಯೋಧರು ಸೋಮವಾರ ಪಾಕಿಸ್ತಾನಿ ಸೈನಿಕರಿಗೆ ಸಿಹಿ ವಿತರಿಸಲಿದ್ದಾರೆ.<br /> <br /> <strong>ಉಲ್ಲಂಘನೆ:</strong> ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನದ ಸೇನೆ, ಎರಡು ಕಡೆ ಗುಂಡಿನ ದಾಳಿ ನಡೆಸಿದೆ. ಪೂಂಛ್ ವಲಯದಲ್ಲಿ ಶೆಲ್ ದಾಳಿ ನಡೆಸಿದೆ. ನಾಲ್ಕು ತಿಂಗಳ ನಂತರ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಇದು.<br /> <br /> ಪಾಕಿಸ್ತಾನದ ಪ್ರಚೋದನೆಗೆ ಪ್ರತ್ಯುತ್ತರ ನೀಡುತ್ತಿರುವ ಭಾರತೀಯ ಸೇನೆ, ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ. ‘ಪಾಕಿಸ್ತಾನದ ಸೇನೆ ಯಾವುದೇ ಪ್ರಚೋದನೆ ಇಲ್ಲದೆ ಕದನ ವಿರಾಮ ಉಲ್ಲಂಘಿಸಿತು’ ಎಂದು ರಕ್ಷಣಾ ಪಡೆಗಳ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದರು.<br /> <br /> ಪಾಕ್ ಸೇನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ದಾಳಿ ಆರಂಭಿಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತದ ಯೋಧರಿಗೆ ಹಾನಿ ಆಗಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>