<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಟಿವಿ ಕೇಬಲ್, ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್ಸಿ) ಅಳವಡಿಕೆಗೆ ಸಮಗ್ರ ನೀತಿಯನ್ನು ಜಾರಿಗೆ ತರಲು ಸರ್ಕಾರ ಉದ್ದೇಶಿಸಿದ್ದು, ಇದಕ್ಕಾಗಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿದರು.<br /> <br /> ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿವಿ ಕೇಬಲ್, ಒಎಫ್ಸಿಗಳನ್ನು ಅನಧಿಕೃತವಾಗಿ ಅಳವಡಿಸಿರುವುದನ್ನು ತೆರವುಗೊಳಿಸುವ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಕೇಬಲ್ಗಳ ಅಳವಡಿಕೆಯನ್ನು ಕಾನೂನು ವ್ಯಾಪ್ತಿಗೆ ತರಬೇಕು ಎಂಬುದು ನಮ್ಮ ನಿಲುವು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ಬೆಂಬಲ ನೀಡುವುದಾಗಿಯೂ ಟಿವಿ ಕೇಬಲ್ ಆಪರೇಟರ್ಗಳು ಹೇಳಿದ್ದಾರೆ’ ಎಂದರು.<br /> <br /> ‘ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಬಲ್ ಆಪರೇಟರ್ಗಳು, ಬಿಬಿಎಂಪಿ ಅಧಿಕಾರಿಗಳು, ನಮ್ಮ ಇಲಾಖೆ ಮತ್ತು ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಇದಕ್ಕೊಂದು ಸಮಗ್ರ ನೀತಿ ರೂಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.<br /> <br /> ‘ಕೇಬಲ್, ಒಎಫ್ಸಿ ಅಳವಡಿಕೆಗೆ ಪಾಲಿಸಬೇಕಾದ ನಿಯಮಗಳು, ಸಂಸ್ಥೆಗಳಿಗೆ ನಿಗದಿ ಪಡಿಸಬೇಕಾದ ಶುಲ್ಕ ಸೇರಿದಂತೆ ಇತರೆ ಸಮಗ್ರ ನೀತಿಯ ರೂಪು ರೇಷೆಗಳನ್ನು ಸಿದ್ಧಪಡಿಸಲು ಬಿಬಿಎಂಪಿ ವಿಶೇಷ ಆಯುಕ್ತರ (ಯೋಜನೆಗಳು) ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.<br /> <br /> ‘ರಾಜ್ಯ ಕೇಬಲ್ ಟಿವಿ ಒಕ್ಕೂಟ, ಕೇಬಲ್ ಆಪರೇಟರ್ ಸಂಘ, ಒಎಫ್ಸಿ ಕಂಪೆನಿಗಳ, ವಿದ್ಯುತ್ ಸರಬರಾಜು ಕಂಪೆನಿಗಳ ಮತ್ತು ಬೇರೆ ನಗರ ಪಾಲಿಕೆಗಳ ಪ್ರತಿನಿಧಿಗಳು ಈ ಸಮಿತಿಯ ಸದಸ್ಯರಾಗಿರುತ್ತಾರೆ’ ಎಂದು ಶಿವಕುಮಾರ್ ಅವರು ಮಾಹಿತಿ ನೀಡಿದರು.<br /> *<br /> ಸಮಿತಿಯ ಎಲ್ಲ ಸಭೆಗಳೂ ಬಿಬಿಎಂಪಿ ಕಚೇರಿಯಲ್ಲಿ ನಡೆಯಲಿವೆ. ಸಮಿತಿ 3 ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ<br /> <strong>-ಡಿ.ಕೆ. ಶಿವಕುಮಾರ್, </strong>ಇಂಧನ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಟಿವಿ ಕೇಬಲ್, ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್ಸಿ) ಅಳವಡಿಕೆಗೆ ಸಮಗ್ರ ನೀತಿಯನ್ನು ಜಾರಿಗೆ ತರಲು ಸರ್ಕಾರ ಉದ್ದೇಶಿಸಿದ್ದು, ಇದಕ್ಕಾಗಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿದರು.<br /> <br /> ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿವಿ ಕೇಬಲ್, ಒಎಫ್ಸಿಗಳನ್ನು ಅನಧಿಕೃತವಾಗಿ ಅಳವಡಿಸಿರುವುದನ್ನು ತೆರವುಗೊಳಿಸುವ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಕೇಬಲ್ಗಳ ಅಳವಡಿಕೆಯನ್ನು ಕಾನೂನು ವ್ಯಾಪ್ತಿಗೆ ತರಬೇಕು ಎಂಬುದು ನಮ್ಮ ನಿಲುವು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ಬೆಂಬಲ ನೀಡುವುದಾಗಿಯೂ ಟಿವಿ ಕೇಬಲ್ ಆಪರೇಟರ್ಗಳು ಹೇಳಿದ್ದಾರೆ’ ಎಂದರು.<br /> <br /> ‘ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಬಲ್ ಆಪರೇಟರ್ಗಳು, ಬಿಬಿಎಂಪಿ ಅಧಿಕಾರಿಗಳು, ನಮ್ಮ ಇಲಾಖೆ ಮತ್ತು ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಇದಕ್ಕೊಂದು ಸಮಗ್ರ ನೀತಿ ರೂಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.<br /> <br /> ‘ಕೇಬಲ್, ಒಎಫ್ಸಿ ಅಳವಡಿಕೆಗೆ ಪಾಲಿಸಬೇಕಾದ ನಿಯಮಗಳು, ಸಂಸ್ಥೆಗಳಿಗೆ ನಿಗದಿ ಪಡಿಸಬೇಕಾದ ಶುಲ್ಕ ಸೇರಿದಂತೆ ಇತರೆ ಸಮಗ್ರ ನೀತಿಯ ರೂಪು ರೇಷೆಗಳನ್ನು ಸಿದ್ಧಪಡಿಸಲು ಬಿಬಿಎಂಪಿ ವಿಶೇಷ ಆಯುಕ್ತರ (ಯೋಜನೆಗಳು) ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.<br /> <br /> ‘ರಾಜ್ಯ ಕೇಬಲ್ ಟಿವಿ ಒಕ್ಕೂಟ, ಕೇಬಲ್ ಆಪರೇಟರ್ ಸಂಘ, ಒಎಫ್ಸಿ ಕಂಪೆನಿಗಳ, ವಿದ್ಯುತ್ ಸರಬರಾಜು ಕಂಪೆನಿಗಳ ಮತ್ತು ಬೇರೆ ನಗರ ಪಾಲಿಕೆಗಳ ಪ್ರತಿನಿಧಿಗಳು ಈ ಸಮಿತಿಯ ಸದಸ್ಯರಾಗಿರುತ್ತಾರೆ’ ಎಂದು ಶಿವಕುಮಾರ್ ಅವರು ಮಾಹಿತಿ ನೀಡಿದರು.<br /> *<br /> ಸಮಿತಿಯ ಎಲ್ಲ ಸಭೆಗಳೂ ಬಿಬಿಎಂಪಿ ಕಚೇರಿಯಲ್ಲಿ ನಡೆಯಲಿವೆ. ಸಮಿತಿ 3 ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ<br /> <strong>-ಡಿ.ಕೆ. ಶಿವಕುಮಾರ್, </strong>ಇಂಧನ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>