<p><strong>ಸಂಬಲ್ಪುರ,ಒಡಿಶಾ(ಪಿಟಿಐ):</strong> ಕಾಂಗ್ರೆಸೇತರ ಸರ್ಕಾರಗಳ ಬಗ್ಗೆ ತಾರತಮ್ಯ ತೋರುವ ಮೂಲಕ ಕೇಂದ್ರದ ಯುಪಿಎ ಸರ್ಕಾರ ಸಂವಿಧಾನ ಬದ್ಧವಾಗಿರುವ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಆರೋಪಿಸಿದರು.<br /> <br /> ತಮ್ಮ `ಜನಚೇತನ ಯಾತ್ರೆ~ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ತನಿಖಾ ದಳಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸೇತರ ಸರ್ಕಾರಗಳ ವಿರುದ್ಧ ಅವುಗಳನ್ನು ಎತ್ತಿಕಟ್ಟಿದೆ ಎಂದು ದೂರಿದರು.<br /> <br /> `ಯುಪಿಎ ಸರ್ಕಾರಕ್ಕೆ ಅಧಿಕಾರದ ಗರ್ವ ಎಷ್ಟಿದೆ ಎಂದರೆ, ಪ್ರಧಾನಿ ಮೂಗಿನ ನೇರದಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ~ ಎಂದು ಆರೋಪಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಕಳೆದ ವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿಗಳು ತೀವ್ರ ಮುಜುಗರ ಎದುರಿಸುವ ಪ್ರಸಂಗ ಎದುರಾಯಿತು ಎಂದರು. <br /> <br /> ಯುಪಿಎ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ ಅವರು ತೀಸ್ತಾ ನದಿ ನೀರು ಹಂಚಿಕೆ ವಿಷಯದಲ್ಲಿ ತಮ್ಮನ್ನು ಸಂಪರ್ಕಿಸದೇ ಇರುವುದನ್ನು ಆಕ್ಷೇಪಿಸಿದರು ಎನ್ನುವುದನ್ನು ಗಮನಿಸಬೇಕಾದ ಅಂಶ ಎಂದರು.<br /> <br /> <strong>ಸರ್ಕಾರ ನಡೆಸುತ್ತಿರುವವರು ಯಾರು?:</strong> ಕೇಂದ್ರ ಸರ್ಕಾರದಲ್ಲಿ ಯಾರು ನಂಬರ್ ಒನ್ ಎನ್ನುವುದು ಪ್ರಶ್ನಾರ್ಹವಾಗಿದೆ. ವಾಸ್ತವವಾಗಿ ಪ್ರಧಾನ ಮಂತ್ರಿಗಳೇ ನಂಬರ್ ಒನ್ ಆಗಿದ್ದರೂ ಸಹ, ಸಂಪುಟದ ನಿರ್ಣಯಗಳನ್ನು 10 ಜನ್ಪಥ್ (ಸೋನಿಯಾ ಗಾಂಧಿ ನಿವಾಸ)ನಿಂದಲೇ ತೆಗೆದುಕೊಳ್ಳಲಾಗುತ್ತಿದೆ ಎಂದರು.<br /> <br /> <strong>ಮೈತ್ರಿ ಮುರಿದ ಬಿಜೆಡಿ</strong>: ಯಾವುದೇ ಸಮರ್ಥನೆ ಇಲ್ಲದೆಯೇ ಮಿತ್ರ ಪಕ್ಷವಾದ ಬಿಜೆಡಿ ಬಿಜೆಪಿಯೊಂದಿಗೆ ಸಂಪರ್ಕ ಕಡಿದುಕೊಂಡಿದ್ದು, ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ ಹೊಂದಾಣಿಕೆ ಇಲ್ಲವಾಗಿದೆ ಎಂದು ಅಡ್ವಾಣಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಕೆಲವು ವರ್ಷಗಳಿಂದ ಮಿತ್ರ ಪಕ್ಷವಾಗಿದ್ದ ಬಿಜೆಡಿ ಈಗ ಸಂಬಂಧ ಕಡಿದುಕೊಂಡಿರುವುದು ವಿಷಾದಕರ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಬಲ್ಪುರ,ಒಡಿಶಾ(ಪಿಟಿಐ):</strong> ಕಾಂಗ್ರೆಸೇತರ ಸರ್ಕಾರಗಳ ಬಗ್ಗೆ ತಾರತಮ್ಯ ತೋರುವ ಮೂಲಕ ಕೇಂದ್ರದ ಯುಪಿಎ ಸರ್ಕಾರ ಸಂವಿಧಾನ ಬದ್ಧವಾಗಿರುವ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಆರೋಪಿಸಿದರು.<br /> <br /> ತಮ್ಮ `ಜನಚೇತನ ಯಾತ್ರೆ~ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ತನಿಖಾ ದಳಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸೇತರ ಸರ್ಕಾರಗಳ ವಿರುದ್ಧ ಅವುಗಳನ್ನು ಎತ್ತಿಕಟ್ಟಿದೆ ಎಂದು ದೂರಿದರು.<br /> <br /> `ಯುಪಿಎ ಸರ್ಕಾರಕ್ಕೆ ಅಧಿಕಾರದ ಗರ್ವ ಎಷ್ಟಿದೆ ಎಂದರೆ, ಪ್ರಧಾನಿ ಮೂಗಿನ ನೇರದಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ~ ಎಂದು ಆರೋಪಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಕಳೆದ ವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿಗಳು ತೀವ್ರ ಮುಜುಗರ ಎದುರಿಸುವ ಪ್ರಸಂಗ ಎದುರಾಯಿತು ಎಂದರು. <br /> <br /> ಯುಪಿಎ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ ಅವರು ತೀಸ್ತಾ ನದಿ ನೀರು ಹಂಚಿಕೆ ವಿಷಯದಲ್ಲಿ ತಮ್ಮನ್ನು ಸಂಪರ್ಕಿಸದೇ ಇರುವುದನ್ನು ಆಕ್ಷೇಪಿಸಿದರು ಎನ್ನುವುದನ್ನು ಗಮನಿಸಬೇಕಾದ ಅಂಶ ಎಂದರು.<br /> <br /> <strong>ಸರ್ಕಾರ ನಡೆಸುತ್ತಿರುವವರು ಯಾರು?:</strong> ಕೇಂದ್ರ ಸರ್ಕಾರದಲ್ಲಿ ಯಾರು ನಂಬರ್ ಒನ್ ಎನ್ನುವುದು ಪ್ರಶ್ನಾರ್ಹವಾಗಿದೆ. ವಾಸ್ತವವಾಗಿ ಪ್ರಧಾನ ಮಂತ್ರಿಗಳೇ ನಂಬರ್ ಒನ್ ಆಗಿದ್ದರೂ ಸಹ, ಸಂಪುಟದ ನಿರ್ಣಯಗಳನ್ನು 10 ಜನ್ಪಥ್ (ಸೋನಿಯಾ ಗಾಂಧಿ ನಿವಾಸ)ನಿಂದಲೇ ತೆಗೆದುಕೊಳ್ಳಲಾಗುತ್ತಿದೆ ಎಂದರು.<br /> <br /> <strong>ಮೈತ್ರಿ ಮುರಿದ ಬಿಜೆಡಿ</strong>: ಯಾವುದೇ ಸಮರ್ಥನೆ ಇಲ್ಲದೆಯೇ ಮಿತ್ರ ಪಕ್ಷವಾದ ಬಿಜೆಡಿ ಬಿಜೆಪಿಯೊಂದಿಗೆ ಸಂಪರ್ಕ ಕಡಿದುಕೊಂಡಿದ್ದು, ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ ಹೊಂದಾಣಿಕೆ ಇಲ್ಲವಾಗಿದೆ ಎಂದು ಅಡ್ವಾಣಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಕೆಲವು ವರ್ಷಗಳಿಂದ ಮಿತ್ರ ಪಕ್ಷವಾಗಿದ್ದ ಬಿಜೆಡಿ ಈಗ ಸಂಬಂಧ ಕಡಿದುಕೊಂಡಿರುವುದು ವಿಷಾದಕರ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>