<p>ನವದೆಹಲಿ (ಪಿಟಿಐ): ಕೇಂದ್ರ ಯುಪಿಎ ಸರ್ಕಾರ ಭಾರತ ಒಕ್ಕೂಟ ವ್ಯವಸ್ಥೆಗೆ ಕಂಟಕವಾಗಿದೆ ಎಂದು ಬಿಜೆಪಿ ಹಿರಿಯ ಧುರೀಣ ಎಲ್.ಕೆ. ಅಡ್ವಾಣಿ ಅವರು ಆರೋಪಿಸಿದ್ದಾರೆ. ರಾಜ್ಯಗಳ ಕೂಗು ಆಲಿಸಲು ಅಂತರರಾಜ್ಯ ಮಂಡಳಿಗೆ ಪುನಶ್ಚೇತನ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.<br /> <br /> ಎನ್ಡಿಎ ಅಧಿಕಾರವಧಿಯಲ್ಲಿ ಕ್ರಿಯಾಶೀಲವಾಗಿದ್ದ ಅಂತರರಾಜ್ಯ ಮಂಡಳಿ ನಂತರದಲ್ಲಿ ನಿಷ್ಕ್ರಿಯವಾಗಿದೆ. 2006ರ ನಂತರ ಒಮ್ಮೆಯೂ ಮಂಡಳಿಯ ಸಭೆ ನಡೆದಿಲ್ಲ ಎಂದು ಅವರು ತಮ್ಮ ಬ್ಲಾಗ್ನಲ್ಲಿ ಬರೆದಿದ್ದಾರೆ.<br /> <br /> ಇದಕ್ಕೆ ಪೂರಕವಾಗಿ ಲಖನೌದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಕೂಡ ಈ ಕುರಿತು ನಿರ್ಣಯ ಅಂಗೀಕರಿಸಿದೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮುಂದಿಟ್ಟ ಪ್ರಸ್ತಾವವನ್ನು ಕಾರ್ಯಕಾರಿಣಿ ಅವಿರೋಧವಾಗಿ ಅಂಗೀಕರಿಸಿತು.<br /> <br /> ಪ್ರಾದೇಶಿಕ ಮತ್ತು ಅಂತರ ರಾಜ್ಯ ಸಮಸ್ಯೆ ಕುರಿತು ಚರ್ಚಿಸಲು ಅಂತರರಾಜ್ಯ ಮಂಡಳಿ ಅಗತ್ಯ ಎಂಬ ಸಂವಿಧಾನದ 263 ಕಲಂ ಆಶಯದಂತೆ 1990ರಲ್ಲಿ ಮಂಡಳಿಯನ್ನು ರಚಿಸಲಾಗಿತ್ತು. ಆದರೆ, ಅದು ಕ್ರಿಯಾಶೀಲವಾದದ್ದು 1998ರ ಎನ್ಡಿಎ ಅಧಿಕಾರವಧಿಯಲ್ಲಿ ಎಂದು ಅಡ್ವಾಣಿ ಹೇಳಿದ್ದಾರೆ.<br /> <br /> ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರತಿವರ್ಷ ತಪ್ಪದೆ ಮಂಡಳಿಯ ಸಭೆ ನಡೆಸಲಾಗಿತ್ತು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ ಮಂಡಳಿ, ಸರ್ಕಾರಿಯಾ ಆಯೋಗದ 247 ಶಿಫಾರಸುಗಳಿಗೆ ಅನುಮೋದನೆ ನೀಡಿತ್ತು ಎಂಬ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. <br /> <br /> ಅಂತರ ರಾಜ್ಯ ಸಮಸ್ಯೆ ಮತ್ತು ಪ್ರಾದೇಶಿಕ ಕೂಗುಗಳನ್ನು ಆಲಿಸಲು ತುರ್ತಾಗಿ ಅಂತರರಾಜ್ಯ ಮಂಡಳಿಗೆ ಪುನಶ್ಚೇತನ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> <strong>ಮಲತಾಯಿ ಧೋರಣೆ: </strong> ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.<br /> <br /> ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್ಗೆ ನಿಗದಿಯಾಗಿದ್ದ ಸೀಮೆಎಣ್ಣೆಯ ಪಾಲನ್ನು ಕಡಿತಗೊಳಿಸಲಾಗಿದೆ. ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕೇಂದ್ರ ಯುಪಿಎ ಸರ್ಕಾರ ಭಾರತ ಒಕ್ಕೂಟ ವ್ಯವಸ್ಥೆಗೆ ಕಂಟಕವಾಗಿದೆ ಎಂದು ಬಿಜೆಪಿ ಹಿರಿಯ ಧುರೀಣ ಎಲ್.ಕೆ. ಅಡ್ವಾಣಿ ಅವರು ಆರೋಪಿಸಿದ್ದಾರೆ. ರಾಜ್ಯಗಳ ಕೂಗು ಆಲಿಸಲು ಅಂತರರಾಜ್ಯ ಮಂಡಳಿಗೆ ಪುನಶ್ಚೇತನ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.<br /> <br /> ಎನ್ಡಿಎ ಅಧಿಕಾರವಧಿಯಲ್ಲಿ ಕ್ರಿಯಾಶೀಲವಾಗಿದ್ದ ಅಂತರರಾಜ್ಯ ಮಂಡಳಿ ನಂತರದಲ್ಲಿ ನಿಷ್ಕ್ರಿಯವಾಗಿದೆ. 2006ರ ನಂತರ ಒಮ್ಮೆಯೂ ಮಂಡಳಿಯ ಸಭೆ ನಡೆದಿಲ್ಲ ಎಂದು ಅವರು ತಮ್ಮ ಬ್ಲಾಗ್ನಲ್ಲಿ ಬರೆದಿದ್ದಾರೆ.<br /> <br /> ಇದಕ್ಕೆ ಪೂರಕವಾಗಿ ಲಖನೌದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಕೂಡ ಈ ಕುರಿತು ನಿರ್ಣಯ ಅಂಗೀಕರಿಸಿದೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮುಂದಿಟ್ಟ ಪ್ರಸ್ತಾವವನ್ನು ಕಾರ್ಯಕಾರಿಣಿ ಅವಿರೋಧವಾಗಿ ಅಂಗೀಕರಿಸಿತು.<br /> <br /> ಪ್ರಾದೇಶಿಕ ಮತ್ತು ಅಂತರ ರಾಜ್ಯ ಸಮಸ್ಯೆ ಕುರಿತು ಚರ್ಚಿಸಲು ಅಂತರರಾಜ್ಯ ಮಂಡಳಿ ಅಗತ್ಯ ಎಂಬ ಸಂವಿಧಾನದ 263 ಕಲಂ ಆಶಯದಂತೆ 1990ರಲ್ಲಿ ಮಂಡಳಿಯನ್ನು ರಚಿಸಲಾಗಿತ್ತು. ಆದರೆ, ಅದು ಕ್ರಿಯಾಶೀಲವಾದದ್ದು 1998ರ ಎನ್ಡಿಎ ಅಧಿಕಾರವಧಿಯಲ್ಲಿ ಎಂದು ಅಡ್ವಾಣಿ ಹೇಳಿದ್ದಾರೆ.<br /> <br /> ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರತಿವರ್ಷ ತಪ್ಪದೆ ಮಂಡಳಿಯ ಸಭೆ ನಡೆಸಲಾಗಿತ್ತು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ ಮಂಡಳಿ, ಸರ್ಕಾರಿಯಾ ಆಯೋಗದ 247 ಶಿಫಾರಸುಗಳಿಗೆ ಅನುಮೋದನೆ ನೀಡಿತ್ತು ಎಂಬ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. <br /> <br /> ಅಂತರ ರಾಜ್ಯ ಸಮಸ್ಯೆ ಮತ್ತು ಪ್ರಾದೇಶಿಕ ಕೂಗುಗಳನ್ನು ಆಲಿಸಲು ತುರ್ತಾಗಿ ಅಂತರರಾಜ್ಯ ಮಂಡಳಿಗೆ ಪುನಶ್ಚೇತನ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> <strong>ಮಲತಾಯಿ ಧೋರಣೆ: </strong> ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.<br /> <br /> ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್ಗೆ ನಿಗದಿಯಾಗಿದ್ದ ಸೀಮೆಎಣ್ಣೆಯ ಪಾಲನ್ನು ಕಡಿತಗೊಳಿಸಲಾಗಿದೆ. ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>