<p><strong>ಗದಗ: </strong>ಬಡತನ, ನಿರುದ್ಯೋಗ, ಅನಕ್ಷರತೆಯನ್ನು ಹೋಗಲಾಡಿಸುವ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಗದೀಶ ಕೊಪ್ಪ ಹೇಳಿದರು. ಸ್ಥಳೀಯ ನಗರಸಭೆ ಸಭಾಭವನದಲ್ಲಿ ಭಾನುವಾರ ನಡೆದ ಭಾರತ ಸಂವಿಧಾನ ಮತ್ತು ಭಗವದ್ಗೀತೆ ದುಂಡು ಮೇಜಿನ ಸಭೆಯಲ್ಲಿ ಅವರು ಲಡಾಯಿ ಪ್ರಕಾಶನದ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. <br /> <br /> ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇಂದು ದೇಶದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಬೌದ್ಧಿಕ ದಾರಿದ್ರ್ಯತನವನ್ನು ತುಂಬುತ್ತಿವೆ. ಇದಕ್ಕೆ ಪೂರಕವಾಗಿ ಕೆಲ ರಾಜಕೀಯ ಪಕ್ಷಗಳು ಸಹ ಕಾರ್ಯನಿರ್ವಹಿಸುತ್ತಿವೆ. ಮುಗ್ಧ ವಿದ್ಯಾರ್ಥಿ ಸಮೂಹಕ್ಕೆ ಭಗವದ್ಗೀತೆ ಬೋಧನೆ ಹೆಸರಲ್ಲಿ ಧರ್ಮಾಂಧತೆ ಮೂಡಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. <br /> <br /> ಗ್ರಾಮೀಣ ಪ್ರದೇಶದಲ್ಲಿನ ಜನರು ಧಾರ್ಮಿಕ ಸಾಮರಸ್ಯ, ಭಾವೈಕ್ಯತೆ ಪದ್ಧತಿಯನ್ನು ಅಳವಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೂ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿರುವುದೇಕೆ? ಎಂದು ಪ್ರಶ್ನಿಸಿದರು. <br /> <br /> ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲಾ ತಕ್ಕ ಪಾಠ ಕಲಿಸಬೇಕಿದೆ. ಜನರು ಜಾಗೃತರಾದಾಗ ಮಾತ್ರ ಇವರ ಆಟ ನಿಲ್ಲಿಸಲು ಸಾಧ್ಯ ಎಂದರು. <br /> <br /> ಸಾಹಿತಿ ಬಸವರಾಜ ಸೂಳಿಭಾವಿ ಮಾತನಾಡಿದರು. ವೆಂಕಟೇಶಯ್ಯ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಕೆಂಚರೆಡ್ಡಿ, ಎಂ.ಎಸ್. ಹಡಪದ, ಬಸವರಾಜ ಹೂಗಾರ, ಡಾ. ಅರ್ಜುನ ಗೊಳಸಂಗಿ, ಡಾ. ಎಚ್.ಬಿ. ಪೂಜಾರ, ಪ್ರೊ. ಬಸವರಾಜ ಪೂಜಾರ, ಎಸ್.ವೈ. ಹೊನ್ನುಂಗುರ, ಡಾ. ಆರ್.ಎಲ್. ಹಂಸನೂರ ಮತ್ತಿತರರು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಬಡತನ, ನಿರುದ್ಯೋಗ, ಅನಕ್ಷರತೆಯನ್ನು ಹೋಗಲಾಡಿಸುವ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಗದೀಶ ಕೊಪ್ಪ ಹೇಳಿದರು. ಸ್ಥಳೀಯ ನಗರಸಭೆ ಸಭಾಭವನದಲ್ಲಿ ಭಾನುವಾರ ನಡೆದ ಭಾರತ ಸಂವಿಧಾನ ಮತ್ತು ಭಗವದ್ಗೀತೆ ದುಂಡು ಮೇಜಿನ ಸಭೆಯಲ್ಲಿ ಅವರು ಲಡಾಯಿ ಪ್ರಕಾಶನದ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. <br /> <br /> ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇಂದು ದೇಶದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಬೌದ್ಧಿಕ ದಾರಿದ್ರ್ಯತನವನ್ನು ತುಂಬುತ್ತಿವೆ. ಇದಕ್ಕೆ ಪೂರಕವಾಗಿ ಕೆಲ ರಾಜಕೀಯ ಪಕ್ಷಗಳು ಸಹ ಕಾರ್ಯನಿರ್ವಹಿಸುತ್ತಿವೆ. ಮುಗ್ಧ ವಿದ್ಯಾರ್ಥಿ ಸಮೂಹಕ್ಕೆ ಭಗವದ್ಗೀತೆ ಬೋಧನೆ ಹೆಸರಲ್ಲಿ ಧರ್ಮಾಂಧತೆ ಮೂಡಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. <br /> <br /> ಗ್ರಾಮೀಣ ಪ್ರದೇಶದಲ್ಲಿನ ಜನರು ಧಾರ್ಮಿಕ ಸಾಮರಸ್ಯ, ಭಾವೈಕ್ಯತೆ ಪದ್ಧತಿಯನ್ನು ಅಳವಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೂ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿರುವುದೇಕೆ? ಎಂದು ಪ್ರಶ್ನಿಸಿದರು. <br /> <br /> ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲಾ ತಕ್ಕ ಪಾಠ ಕಲಿಸಬೇಕಿದೆ. ಜನರು ಜಾಗೃತರಾದಾಗ ಮಾತ್ರ ಇವರ ಆಟ ನಿಲ್ಲಿಸಲು ಸಾಧ್ಯ ಎಂದರು. <br /> <br /> ಸಾಹಿತಿ ಬಸವರಾಜ ಸೂಳಿಭಾವಿ ಮಾತನಾಡಿದರು. ವೆಂಕಟೇಶಯ್ಯ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಕೆಂಚರೆಡ್ಡಿ, ಎಂ.ಎಸ್. ಹಡಪದ, ಬಸವರಾಜ ಹೂಗಾರ, ಡಾ. ಅರ್ಜುನ ಗೊಳಸಂಗಿ, ಡಾ. ಎಚ್.ಬಿ. ಪೂಜಾರ, ಪ್ರೊ. ಬಸವರಾಜ ಪೂಜಾರ, ಎಸ್.ವೈ. ಹೊನ್ನುಂಗುರ, ಡಾ. ಆರ್.ಎಲ್. ಹಂಸನೂರ ಮತ್ತಿತರರು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>