<p>ಹಾಸನ: ಗೊರೂರು ಜಲಾಶಯದಿಂದ ಹಾಸನಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಗುರುವಾರ ರಾತ್ರಿ ಒಡೆದುಹೋದ ಪರಿಣಾಮ ನಗರದ ಅನೇಕ ಭಾಗಗಳಲ್ಲಿ ಶುಕ್ರವಾರ ನೀರು ಸರಬರಾಜಾಗಿಲ್ಲ.<br /> <br /> ಇತ್ತೀಚೆಗಷ್ಟೇ ಡಾಂಬರೀಕರಣ ಕಂಡಿದ್ದ ಬಿಟ್ಟಗೌಡನಹಳ್ಳಿ ಸರ್ಕಲ್ನಲ್ಲಿ ರಸ್ತೆ ಮಧ್ಯದಲ್ಲೇ ಗುರುವಾರ ರಾತ್ರಿ 8.30ರ ಸುಮಾರಿಗೆ ಪೈಪ್ ಒಡೆದು ನೀರು ಕಾರಂಜಿಯಂತೆ ಚಿಮ್ಮಿ, ಹೆದ್ದಾರಿ ಯಲ್ಲಿ ಸಂಚಾರವೂ ಸ್ವಲ್ಪಹೊತ್ತು ಅಸ್ತವ್ಯಸ್ತವಾಗಿತ್ತು.<br /> <br /> ಇತ್ತೀಚೆಗಷ್ಟೇ ಇಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿ ಸಂದರ್ಭದಲ್ಲಿ ಕಂಪನ ಉಂಟುಮಾಡುವ ರೋಲರ್ ಬಳಸಲಾಗಿತ್ತು. ಇದು ಆಳದವರೆಗೂ ಉಂಟುಮಾಡಿದ್ದ ಕಂಪನದಿಂದಾಗಿ ಪೈಪ್ ಒಡೆದಿರಬಹುದು ಎಂದು ಎಂಜಿನಿಯರುಗಳು ತಿಳಿಸಿದ್ದಾರೆ.<br /> <br /> ರಾತ್ರಿ ಘಟನೆ ನಡೆದು ಸ್ವಲ್ಪ ಹೊತ್ತಿನಲ್ಲೇ ಗೊರೂರು ಜಲಾಶಯದ ಜಾಕ್ವೆಲ್ನ ಮೋಟರ್ ಸ್ಥಗಿತಗೊಳಿಸಿ ನೀರು ಸರಬರಾಜನ್ನು ನಿಲ್ಲಿಸಲಾಯಿತು. ಶುಕ್ರವಾರ ಬೆಳಿಗ್ಗೆ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ.<br /> <br /> ಇಂದು ನೀರು ಸರಬರಾಜಿಲ್ಲ: ಪೈಪ್ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಶನಿವಾರವೂ ನಗರದ ಕೆಲವು ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದಿಲ್ಲ ಎಂದು ಹಾಸನ ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಗೊರೂರು ಜಲಾಶಯದಿಂದ ಹಾಸನಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಗುರುವಾರ ರಾತ್ರಿ ಒಡೆದುಹೋದ ಪರಿಣಾಮ ನಗರದ ಅನೇಕ ಭಾಗಗಳಲ್ಲಿ ಶುಕ್ರವಾರ ನೀರು ಸರಬರಾಜಾಗಿಲ್ಲ.<br /> <br /> ಇತ್ತೀಚೆಗಷ್ಟೇ ಡಾಂಬರೀಕರಣ ಕಂಡಿದ್ದ ಬಿಟ್ಟಗೌಡನಹಳ್ಳಿ ಸರ್ಕಲ್ನಲ್ಲಿ ರಸ್ತೆ ಮಧ್ಯದಲ್ಲೇ ಗುರುವಾರ ರಾತ್ರಿ 8.30ರ ಸುಮಾರಿಗೆ ಪೈಪ್ ಒಡೆದು ನೀರು ಕಾರಂಜಿಯಂತೆ ಚಿಮ್ಮಿ, ಹೆದ್ದಾರಿ ಯಲ್ಲಿ ಸಂಚಾರವೂ ಸ್ವಲ್ಪಹೊತ್ತು ಅಸ್ತವ್ಯಸ್ತವಾಗಿತ್ತು.<br /> <br /> ಇತ್ತೀಚೆಗಷ್ಟೇ ಇಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿ ಸಂದರ್ಭದಲ್ಲಿ ಕಂಪನ ಉಂಟುಮಾಡುವ ರೋಲರ್ ಬಳಸಲಾಗಿತ್ತು. ಇದು ಆಳದವರೆಗೂ ಉಂಟುಮಾಡಿದ್ದ ಕಂಪನದಿಂದಾಗಿ ಪೈಪ್ ಒಡೆದಿರಬಹುದು ಎಂದು ಎಂಜಿನಿಯರುಗಳು ತಿಳಿಸಿದ್ದಾರೆ.<br /> <br /> ರಾತ್ರಿ ಘಟನೆ ನಡೆದು ಸ್ವಲ್ಪ ಹೊತ್ತಿನಲ್ಲೇ ಗೊರೂರು ಜಲಾಶಯದ ಜಾಕ್ವೆಲ್ನ ಮೋಟರ್ ಸ್ಥಗಿತಗೊಳಿಸಿ ನೀರು ಸರಬರಾಜನ್ನು ನಿಲ್ಲಿಸಲಾಯಿತು. ಶುಕ್ರವಾರ ಬೆಳಿಗ್ಗೆ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ.<br /> <br /> ಇಂದು ನೀರು ಸರಬರಾಜಿಲ್ಲ: ಪೈಪ್ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಶನಿವಾರವೂ ನಗರದ ಕೆಲವು ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದಿಲ್ಲ ಎಂದು ಹಾಸನ ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>