<p><strong>ಕೂಡ್ಲಿಗಿ:</strong> ತಾಲ್ಲೂಕಿನಾದ್ಯಂತ ರೈತರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿರುವುದನ್ನು ಪಟ್ಟಾ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಒತ್ತಾಯಿಸಿದೆ.<br /> <br /> ಈ ಕುರಿತು ಸೋಮವಾರ ತಹಶೀಲ್ದಾರ್ ಜವರೇಗೌಡರಿಗೆ ಮನವಿ ಸ್ಲ್ಲಲಿಸಲಾಯಿತು.<br /> <br /> ತಾಲ್ಲೂಕಿನಲ್ಲಿ ವಿವಿಧೆಡೆ ರೈತರು ಕಳೆದ 20-50 ವರ್ಷಗಳಿಂದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿದ್ದು, ಈಚೆಗೆ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ.<br /> <br /> ರೈತರು ಕೇವಲ 1 ಅಥವಾ 2 ಎಕರೆ ಜಮೀನನ್ನು ಸಾಗುವಳಿ ಮಾಡುತ್ತಿದ್ದು, ರೈತರನ್ನು ವಿನಾಕಾರಣ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಮನವಿಪತ್ರದಲ್ಲಿ ತಿಳಿಸಲಾಗಿದೆ. ತಾಲ್ಲೂಕಿನಾದ್ಯಂತ ಹಿಂದುಳಿದ ಬಡ ರೈತರಿದ್ದು, ಭೂಮಿಯೇ ಇಲ್ಲದವರಾಗಿದ್ದಾರೆ.<br /> <br /> ಅವರಿಗೆ ಈ ಸಾಗುವಳಿಯಿಂದಲೇ ಅನುಕೂಲವಾಗುತ್ತಿದ್ದು, ಇದೀಗ ರೈತರಿಗೆ ತೊಂದರೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ತಕ್ಷಣವೇ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ ನ್ಲ್ಲಿಲಿಸಿ, ಪಟ್ಟಾ ಮಾಡಿಕೊಡಬೇಕು, ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.<br /> <br /> ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ ರಂಗನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ರಾಜಶೇಖರಗೌಡ, ಉಪಾಧ್ಯಕ್ಷ ವಿ.ನಾಗರಾಜ, ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ನಾಯ್ಡು, ತಾಲ್ಲೂಕು ಅಧ್ಯಕ್ಷ ಎಂ.ಬಸವರಾಜ, ಕಾರ್ಯಾಧ್ಯಕ್ಷ ಎಸ್.ಬಾಷಾ, ಎಂ.ತಿಪ್ಪಣ್ಣ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನಾದ್ಯಂತ ರೈತರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿರುವುದನ್ನು ಪಟ್ಟಾ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಒತ್ತಾಯಿಸಿದೆ.<br /> <br /> ಈ ಕುರಿತು ಸೋಮವಾರ ತಹಶೀಲ್ದಾರ್ ಜವರೇಗೌಡರಿಗೆ ಮನವಿ ಸ್ಲ್ಲಲಿಸಲಾಯಿತು.<br /> <br /> ತಾಲ್ಲೂಕಿನಲ್ಲಿ ವಿವಿಧೆಡೆ ರೈತರು ಕಳೆದ 20-50 ವರ್ಷಗಳಿಂದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿದ್ದು, ಈಚೆಗೆ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ.<br /> <br /> ರೈತರು ಕೇವಲ 1 ಅಥವಾ 2 ಎಕರೆ ಜಮೀನನ್ನು ಸಾಗುವಳಿ ಮಾಡುತ್ತಿದ್ದು, ರೈತರನ್ನು ವಿನಾಕಾರಣ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಮನವಿಪತ್ರದಲ್ಲಿ ತಿಳಿಸಲಾಗಿದೆ. ತಾಲ್ಲೂಕಿನಾದ್ಯಂತ ಹಿಂದುಳಿದ ಬಡ ರೈತರಿದ್ದು, ಭೂಮಿಯೇ ಇಲ್ಲದವರಾಗಿದ್ದಾರೆ.<br /> <br /> ಅವರಿಗೆ ಈ ಸಾಗುವಳಿಯಿಂದಲೇ ಅನುಕೂಲವಾಗುತ್ತಿದ್ದು, ಇದೀಗ ರೈತರಿಗೆ ತೊಂದರೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ತಕ್ಷಣವೇ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ ನ್ಲ್ಲಿಲಿಸಿ, ಪಟ್ಟಾ ಮಾಡಿಕೊಡಬೇಕು, ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.<br /> <br /> ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ ರಂಗನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ರಾಜಶೇಖರಗೌಡ, ಉಪಾಧ್ಯಕ್ಷ ವಿ.ನಾಗರಾಜ, ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ನಾಯ್ಡು, ತಾಲ್ಲೂಕು ಅಧ್ಯಕ್ಷ ಎಂ.ಬಸವರಾಜ, ಕಾರ್ಯಾಧ್ಯಕ್ಷ ಎಸ್.ಬಾಷಾ, ಎಂ.ತಿಪ್ಪಣ್ಣ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>