<p>ರಾಮನಗರ: ಬಿಡದಿ ಬಳಿಯ ಚಾಮುಂಡೇಶ್ವರಿ ಬಿಲ್ಡ್ಟೆಕ್ ಕಂಪೆನಿ (ಈಗಲ್ಟನ್) ಒತ್ತುವರಿ ಮಾಡಿದ್ದ ಸರ್ಕಾರಿ ಭೂಮಿಯಲ್ಲಿ 71.16 ಎಕರೆ ಜಮೀನಿಗೆ ಮಾರುಕಟ್ಟೆ ಮೌಲ್ಯವಾಗಿ 82.70 ಕೋಟಿ ರೂಪಾಯಿಗಳನ್ನು ರಾಮನಗರ ಜಿಲ್ಲಾಡಳಿತ ನಿಗದಿಪಡಿಸಿದೆ. <br /> <br /> ಕೆಲವೆಡೆ ಎಕರೆಗೆ ರೂ 1.20 ಕೋಟಿ, ಇನ್ನೂ ಕೆಲವೆಡೆ ಎಕರೆಗೆ 83 ಲಕ್ಷ ರೂಪಾಯಿ ಎಂದು ಮೌಲ್ಯವನ್ನು ಜಿಲ್ಲಾಡಳಿತ ಅಂತಿಮಗೊಳಿಸಿದೆ. ಸಚಿವ ಸಂಪುಟ ನಿರ್ಧಾರ ಹಾಗೂ ಫೆಬ್ರುವರಿ 25ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ ಈ ಜಮೀನಿಗೆ ಮಾರುಕಟ್ಟೆ ಮೌಲ್ಯ ನಿಗದಿಪಡಿಸಿ ಬುಧವಾರ ಈಗಲ್ಟನ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡಿದ್ದಾರೆ.<br /> <br /> ಈಗಲ್ಟನ್ ಸಂಸ್ಥೆಯು ಬಿಡದಿ ಹೋಬಳಿಯ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ ಮತ್ತು ಬಾನಂದೂರು ಗ್ರಾಮಗಳ ವಿವಿಧ ಸರ್ವೇ ನಂಬರ್ಗಳಲ್ಲಿ ವರ್ಗೀಕರಣಗೊಂಡಿರುವ ಗೋಮಾಳ, `ಎ~ ಖರಾಬು ಮತ್ತು `ಬಿ~ ಖರಾಜು ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿದೆ. ಇದು ಒತ್ತುವರಿ ಮಾಡಿರುವ ಪ್ರದೇಶದಲ್ಲಿ 71.16 ಎಕರೆ ಸರ್ಕಾರಿ ಜಮೀನಿಗೆ ಸರ್ಕಾರಿ ಆದೇಶದಂತೆ ದರ ನಿಗದಿಪಡಿಸಿ ಮಂಜೂರು ಮಾಡಲು ಆದೇಶಿಸಿರುವುದಾಗಿ ಜಿಲ್ಲಾಧಿಕಾರಿ ಪುಟ್ಟಸ್ವಾಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ನಿಯಮ 9(1)ರ ಅಡಿಯಲ್ಲಿ ಹಾಗೂ ಕರ್ನಾಟಕ ಭೂ ಕಂದಾಯ ನಿಯಮಾವಳಿ 1966ರ ನಿಯಮ 97(4)ರ ಅಡಿಯಲ್ಲಿ ಗೋಮಾಳ ಲೆಕ್ಕ ಶೀರ್ಷಿಕೆಯಿಂದ ತಗ್ಗಿಸಿಕೊಂಡು ಮಂಜೂರು ಮಾಡಲು ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. <br /> <br /> ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2)ರಂತೆ ಭೂ ಪರಿವರ್ತನೆ ಶುಲ್ಕವಾಗಿ ಎಕರೆಗೆ ತಲಾ ರೂ 1,30,680 ರೂಪಾಯಿಯನ್ನು ಇವರು ಪಾವತಿಸಬೇಕಿದೆ. ಇದನ್ನೂ ಒಟ್ಟು ಮೊತ್ತದಲ್ಲಿ ಸೇರಿಸಲಾಗಿದೆ ಎಂದರು. ಪ್ರಸಕ್ತ ಸಾಲಿನ ಮಾರುಕಟ್ಟೆ ದರವನ್ನು ಈ ಜಮೀನಿಗೆ ನಿಗದಿಪಡಿಸಲಾಗಿದೆ. <br /> <br /> ನೋಟಿಸ್ ನೀಡಿದ ಏಳು ದಿನದೊಳಗೆ ಸದರಿ ಮೊತ್ತವನ್ನು ಸಂಬಂಧಿಸಿದವರು ಸರ್ಕಾರಕ್ಕೆ ಜಮಾ ಮಾಡಬೇಕು. ತಪ್ಪಿದಲ್ಲಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.<br /> <br /> ಪ್ರಕರಣದ ವಿವರ: ಬಿಡದಿ ಹೋಬಳಿಯಲ್ಲಿ ಈಗಲ್ಟನ್ ಸಂಸ್ಥೆಯು ಒಟ್ಟಾರೆ 509 ಎಕರೆ ಭೂಮಿಯನ್ನು ಹೊಂದಿದೆ. ಅದರಲ್ಲಿ 132.26 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದೆ. ಈ ವಿವಾದದ ಸಲುವಾಗಿ ಹೈಕೋರ್ಟ್ ಸರ್ಕಾರದ ಪರ ತೀರ್ಪು ನೀಡಿತ್ತು. ಒತ್ತುವರಿದಾರರಿಂದ ಭೂಮಿ ವಶಪಡಿಸಿಕೊಂಡು, ದಂಡ ವಿಧಿಸುವಂತೆ ಸೂಚಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಈಗಲ್ಟನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.<br /> <br /> 132.26 ಎಕರೆಯಲ್ಲಿ ಒಟ್ಟಾರೆ 71.16 ಎಕರೆ ಜಮೀನಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ತಿಳಿಸಿತ್ತು. ಆ ನಂತರ ಸುಪ್ರೀಂ ಕೋರ್ಟ್ ಈ ಭೂ ವಿವಾದವನ್ನು ಬಗೆಹರಿಸಿಕೊಳ್ಳಲು ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಸಂಪುಟ ಸಭೆ ಎರಡು ಬಾರಿ ಪರಿಶೀಲನೆ ನಡೆಸಿ, ಒತ್ತುವರಿ ಭೂಮಿಯನ್ನು ಅದೇ ಸಂಸ್ಥೆಗೆ ಮಾರುಕಟ್ಟೆ ಮೌಲ್ಯದ ಅನ್ವಯ ಮಂಜೂರು ಮಾಡಲು ನಿರ್ಧರಿಸಿತ್ತು. ಅದರಂತೆ ಸರ್ಕಾರಿ ಆದೇಶವೂ ಹೊರಬಿತ್ತು. <br /> <br /> ಇವುಗಳ ಆಧಾರದ ಮೇಲೆ ಇದೀಗ ದರ ನಿಗದಿಪಡಿಸಿರುವುದಾಗಿಡಿ.ಸಿ ತಿಳಿಸಿದರು.<br /> ಈ ಸಂಸ್ಥೆ ಒತ್ತುವರಿ ಮಾಡಿಕೊಂಡಿರುವ ಉಳಿದ 61.10 ಎಕರೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪಿನಂತೆ ನಡೆದುಕೊಳ್ಳಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಬಿಡದಿ ಬಳಿಯ ಚಾಮುಂಡೇಶ್ವರಿ ಬಿಲ್ಡ್ಟೆಕ್ ಕಂಪೆನಿ (ಈಗಲ್ಟನ್) ಒತ್ತುವರಿ ಮಾಡಿದ್ದ ಸರ್ಕಾರಿ ಭೂಮಿಯಲ್ಲಿ 71.16 ಎಕರೆ ಜಮೀನಿಗೆ ಮಾರುಕಟ್ಟೆ ಮೌಲ್ಯವಾಗಿ 82.70 ಕೋಟಿ ರೂಪಾಯಿಗಳನ್ನು ರಾಮನಗರ ಜಿಲ್ಲಾಡಳಿತ ನಿಗದಿಪಡಿಸಿದೆ. <br /> <br /> ಕೆಲವೆಡೆ ಎಕರೆಗೆ ರೂ 1.20 ಕೋಟಿ, ಇನ್ನೂ ಕೆಲವೆಡೆ ಎಕರೆಗೆ 83 ಲಕ್ಷ ರೂಪಾಯಿ ಎಂದು ಮೌಲ್ಯವನ್ನು ಜಿಲ್ಲಾಡಳಿತ ಅಂತಿಮಗೊಳಿಸಿದೆ. ಸಚಿವ ಸಂಪುಟ ನಿರ್ಧಾರ ಹಾಗೂ ಫೆಬ್ರುವರಿ 25ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ ಈ ಜಮೀನಿಗೆ ಮಾರುಕಟ್ಟೆ ಮೌಲ್ಯ ನಿಗದಿಪಡಿಸಿ ಬುಧವಾರ ಈಗಲ್ಟನ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡಿದ್ದಾರೆ.<br /> <br /> ಈಗಲ್ಟನ್ ಸಂಸ್ಥೆಯು ಬಿಡದಿ ಹೋಬಳಿಯ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ ಮತ್ತು ಬಾನಂದೂರು ಗ್ರಾಮಗಳ ವಿವಿಧ ಸರ್ವೇ ನಂಬರ್ಗಳಲ್ಲಿ ವರ್ಗೀಕರಣಗೊಂಡಿರುವ ಗೋಮಾಳ, `ಎ~ ಖರಾಬು ಮತ್ತು `ಬಿ~ ಖರಾಜು ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿದೆ. ಇದು ಒತ್ತುವರಿ ಮಾಡಿರುವ ಪ್ರದೇಶದಲ್ಲಿ 71.16 ಎಕರೆ ಸರ್ಕಾರಿ ಜಮೀನಿಗೆ ಸರ್ಕಾರಿ ಆದೇಶದಂತೆ ದರ ನಿಗದಿಪಡಿಸಿ ಮಂಜೂರು ಮಾಡಲು ಆದೇಶಿಸಿರುವುದಾಗಿ ಜಿಲ್ಲಾಧಿಕಾರಿ ಪುಟ್ಟಸ್ವಾಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ನಿಯಮ 9(1)ರ ಅಡಿಯಲ್ಲಿ ಹಾಗೂ ಕರ್ನಾಟಕ ಭೂ ಕಂದಾಯ ನಿಯಮಾವಳಿ 1966ರ ನಿಯಮ 97(4)ರ ಅಡಿಯಲ್ಲಿ ಗೋಮಾಳ ಲೆಕ್ಕ ಶೀರ್ಷಿಕೆಯಿಂದ ತಗ್ಗಿಸಿಕೊಂಡು ಮಂಜೂರು ಮಾಡಲು ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. <br /> <br /> ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2)ರಂತೆ ಭೂ ಪರಿವರ್ತನೆ ಶುಲ್ಕವಾಗಿ ಎಕರೆಗೆ ತಲಾ ರೂ 1,30,680 ರೂಪಾಯಿಯನ್ನು ಇವರು ಪಾವತಿಸಬೇಕಿದೆ. ಇದನ್ನೂ ಒಟ್ಟು ಮೊತ್ತದಲ್ಲಿ ಸೇರಿಸಲಾಗಿದೆ ಎಂದರು. ಪ್ರಸಕ್ತ ಸಾಲಿನ ಮಾರುಕಟ್ಟೆ ದರವನ್ನು ಈ ಜಮೀನಿಗೆ ನಿಗದಿಪಡಿಸಲಾಗಿದೆ. <br /> <br /> ನೋಟಿಸ್ ನೀಡಿದ ಏಳು ದಿನದೊಳಗೆ ಸದರಿ ಮೊತ್ತವನ್ನು ಸಂಬಂಧಿಸಿದವರು ಸರ್ಕಾರಕ್ಕೆ ಜಮಾ ಮಾಡಬೇಕು. ತಪ್ಪಿದಲ್ಲಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.<br /> <br /> ಪ್ರಕರಣದ ವಿವರ: ಬಿಡದಿ ಹೋಬಳಿಯಲ್ಲಿ ಈಗಲ್ಟನ್ ಸಂಸ್ಥೆಯು ಒಟ್ಟಾರೆ 509 ಎಕರೆ ಭೂಮಿಯನ್ನು ಹೊಂದಿದೆ. ಅದರಲ್ಲಿ 132.26 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದೆ. ಈ ವಿವಾದದ ಸಲುವಾಗಿ ಹೈಕೋರ್ಟ್ ಸರ್ಕಾರದ ಪರ ತೀರ್ಪು ನೀಡಿತ್ತು. ಒತ್ತುವರಿದಾರರಿಂದ ಭೂಮಿ ವಶಪಡಿಸಿಕೊಂಡು, ದಂಡ ವಿಧಿಸುವಂತೆ ಸೂಚಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಈಗಲ್ಟನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.<br /> <br /> 132.26 ಎಕರೆಯಲ್ಲಿ ಒಟ್ಟಾರೆ 71.16 ಎಕರೆ ಜಮೀನಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ತಿಳಿಸಿತ್ತು. ಆ ನಂತರ ಸುಪ್ರೀಂ ಕೋರ್ಟ್ ಈ ಭೂ ವಿವಾದವನ್ನು ಬಗೆಹರಿಸಿಕೊಳ್ಳಲು ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಸಂಪುಟ ಸಭೆ ಎರಡು ಬಾರಿ ಪರಿಶೀಲನೆ ನಡೆಸಿ, ಒತ್ತುವರಿ ಭೂಮಿಯನ್ನು ಅದೇ ಸಂಸ್ಥೆಗೆ ಮಾರುಕಟ್ಟೆ ಮೌಲ್ಯದ ಅನ್ವಯ ಮಂಜೂರು ಮಾಡಲು ನಿರ್ಧರಿಸಿತ್ತು. ಅದರಂತೆ ಸರ್ಕಾರಿ ಆದೇಶವೂ ಹೊರಬಿತ್ತು. <br /> <br /> ಇವುಗಳ ಆಧಾರದ ಮೇಲೆ ಇದೀಗ ದರ ನಿಗದಿಪಡಿಸಿರುವುದಾಗಿಡಿ.ಸಿ ತಿಳಿಸಿದರು.<br /> ಈ ಸಂಸ್ಥೆ ಒತ್ತುವರಿ ಮಾಡಿಕೊಂಡಿರುವ ಉಳಿದ 61.10 ಎಕರೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪಿನಂತೆ ನಡೆದುಕೊಳ್ಳಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>