<p><strong>ಕೃಷ್ಣರಾಜಪುರ : </strong>ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕೊರತೆ ಇದ್ದು ದೂಳು ತುಂಬಿದ ರಸ್ತೆ, ರಸ್ತೆಗಳನ್ನು ಸಮತಟ್ಟು ಮಾಡುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿಸಿದ ಮಟ್ಟದಲ್ಲಿ ನಡೆದಿಲ್ಲ ಎಂದು ತಹಶೀಲ್ದಾರ್ ಬಿ.ಆರ್.ಹರೀಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕೆ.ಆರ್.ಪುರ ಹಿರಿಯರ ವೇದಿಕೆ ಬಸವನಪುರ ಅಮರ ಜ್ಯೋತಿ ಕಾಲೆಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಸರ್ಕಾರಿ ಜಾಗ ಒತ್ತುವರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.<br /> <br /> ವಾರಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೂ, ಸಾವಿರಾರು ರೂಪಾಯಿ ವಿದ್ಯುತ್ ಬಿಲ್ ಪಾವತಿಸಬೇಕಾಗಿದೆ. ಹೀಗಾಗಿ ಅನಧಿಕೃತ ನೀರು ಪೂರೈಕೆ ಸಂಪರ್ಕವನ್ನು ಸಮಾರೋಪಾದಿಯಲ್ಲಿ ಕಡಿತಗೊಳಿಸಲು ಎರಡು ಜಾಗೃತದಳಗಳನ್ನು ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ : </strong>ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕೊರತೆ ಇದ್ದು ದೂಳು ತುಂಬಿದ ರಸ್ತೆ, ರಸ್ತೆಗಳನ್ನು ಸಮತಟ್ಟು ಮಾಡುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿಸಿದ ಮಟ್ಟದಲ್ಲಿ ನಡೆದಿಲ್ಲ ಎಂದು ತಹಶೀಲ್ದಾರ್ ಬಿ.ಆರ್.ಹರೀಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕೆ.ಆರ್.ಪುರ ಹಿರಿಯರ ವೇದಿಕೆ ಬಸವನಪುರ ಅಮರ ಜ್ಯೋತಿ ಕಾಲೆಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಸರ್ಕಾರಿ ಜಾಗ ಒತ್ತುವರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.<br /> <br /> ವಾರಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೂ, ಸಾವಿರಾರು ರೂಪಾಯಿ ವಿದ್ಯುತ್ ಬಿಲ್ ಪಾವತಿಸಬೇಕಾಗಿದೆ. ಹೀಗಾಗಿ ಅನಧಿಕೃತ ನೀರು ಪೂರೈಕೆ ಸಂಪರ್ಕವನ್ನು ಸಮಾರೋಪಾದಿಯಲ್ಲಿ ಕಡಿತಗೊಳಿಸಲು ಎರಡು ಜಾಗೃತದಳಗಳನ್ನು ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>