<p><strong>ಮಡಿಕೇರಿ:</strong> ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ರಾಜ್ಯದ ಪ್ರತಿಯೊಬ್ಬ ಕ್ರೀಡಾಪಟುಗೆ ತಲಾ 5 ಲಕ್ಷ ರೂಪಾಯಿ ಹಾಗೂ ತರಬೇತುದಾರರಿಗೂ 1 ಲಕ್ಷ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು.</p>.<p>ನಗರದ ಕೋಟೆ ಆವರಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಧನ ಸಹಾಯ ನೀಡಲಾಗುತ್ತಿದ್ದು, ಒಟ್ಟು 46 ಲಕ್ಷ ರೂಪಾಯಿ ಮಂಜೂರಾಗಿದೆ ಎಂದರು.</p>.<p>ಶೀಘ್ರದಲ್ಲಿಯೇ ಕ್ರೀಡಾಪಟುಗಳಿಗೆ ಅಥವಾ ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಅವರಿಂದ ಚೆಕ್ ವಿತರಿಸಲು ಕ್ರಮಕೈಗೊಳ್ಳಲಾಗುವುದು.</p>.<p>ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳು ದೇಶಕ್ಕೆ ಚಿನ್ನದ ಪದಕ ತಂದುಕೊಡುವಂತಾಗಲಿ ಎಂದು ಆಶಿಸಿದ ಸಚಿವರು, ಚೀನಾದ ಮಾದರಿಯಂತೆ ನಾವು ಕೂಡ ಮುಂದಿನ ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಈಗಿನಿಂದಲೇ ತರಬೇತಿ ನೀಡಲು ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.</p>.<p><strong>ಶೀಘ್ರ ಯುವನೀತಿ:</strong> ಯುವಜನರಲ್ಲಿನ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದಿಸೆಯಲ್ಲಿ ರಾಜ್ಯದಲ್ಲಿ ನೂತನ ಯುವ ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವ ಅಪ್ಪಚ್ಚು ರಂಜನ್ ಹೇಳಿದರು. <br /> ಅಮೆರಿಕಾ, ಜಪಾನ್, ಇಂಗ್ಲೆಂಡ್ ಮತ್ತಿತರ ರಾಷ್ಟ್ರಗಳಲ್ಲಿ ಜಾರಿಯಲ್ಲಿರುವ ಯುವ ನೀತಿ ಬಗ್ಗೆ ಅಧ್ಯಯನ ಮಾಡಿ ರಾಜ್ಯದಲ್ಲಿ ಯುವ ನೀತಿ ರೂಪಿಸಲಾಗುವುದು. ಈ ಬಗ್ಗೆ ಹಿರಿಯರು, ಚಿಂತಕರು ಸಲಹೆ ನೀಡಬಹುದಾಗಿದೆ ಎಂದು ಅವರು ಹೇಳಿದರು.</p>.<p>ಇಲಾಖೆಗೆ ರಾಜ್ಯ ಬಜೆಟ್ನಲ್ಲಿ 143 ಕೋಟಿಗಳ ಅನುದಾನ ನೀಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಕೋರಲಾಗುವುದು ಎಂದರು.</p>.<p><strong>`ಅಶ್ವಿನಿ ಪೊನ್ನಪ್ಪ ಪ್ರಕರಣ ಪರಿಶೀಲಿಸಿ ಕ್ರಮ~</strong></p>.<p>ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುತ್ತಿರುವ ಕೊಡಗು ಮೂಲದ ಅಶ್ವಿನಿ ಪೊನ್ನಪ್ಪ ಅವರು ಸದ್ಯ ಹೈದರಾಬಾದ್ನಲ್ಲಿ ನೆಲೆಸಿರುವ ಕಾರಣ ಆಂಧ್ರ ಪ್ರದೇಶ ಸರ್ಕಾರದಿಂದ ಸಹಾಯಹಸ್ತ ಪಡೆದಿದ್ದಾರೆಯೇ ಇಲ್ಲವೋ ಎನ್ನುವುದನ್ನು ಗಮನಿಸಿ ನೆರವು ನೀಡುವುದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು.</p>.<p>ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಕುರಿತ ದಾಖಲೆಗಳನ್ನು ಹಾಜರುಪಡಿಸುವಂತೆ ಅಶ್ವಿನಿ ಪೊನ್ನಪ್ಪ ಅವರಿಗೆ ಅಧಿಕಾರಿಗಳು ಸೂಚಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಆಂಧ್ರಪ್ರದೇಶ ಸರ್ಕಾರದಿಂದ ಯಾವುದಾದರೂ ನೆರವು ಪಡೆದಿದ್ದಾರೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಅಧಿಕಾರಿಗಳು ಈ ಮಾಹಿತಿ ಕೇಳಿರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ರಾಜ್ಯದ ಪ್ರತಿಯೊಬ್ಬ ಕ್ರೀಡಾಪಟುಗೆ ತಲಾ 5 ಲಕ್ಷ ರೂಪಾಯಿ ಹಾಗೂ ತರಬೇತುದಾರರಿಗೂ 1 ಲಕ್ಷ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು.</p>.<p>ನಗರದ ಕೋಟೆ ಆವರಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಧನ ಸಹಾಯ ನೀಡಲಾಗುತ್ತಿದ್ದು, ಒಟ್ಟು 46 ಲಕ್ಷ ರೂಪಾಯಿ ಮಂಜೂರಾಗಿದೆ ಎಂದರು.</p>.<p>ಶೀಘ್ರದಲ್ಲಿಯೇ ಕ್ರೀಡಾಪಟುಗಳಿಗೆ ಅಥವಾ ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಅವರಿಂದ ಚೆಕ್ ವಿತರಿಸಲು ಕ್ರಮಕೈಗೊಳ್ಳಲಾಗುವುದು.</p>.<p>ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳು ದೇಶಕ್ಕೆ ಚಿನ್ನದ ಪದಕ ತಂದುಕೊಡುವಂತಾಗಲಿ ಎಂದು ಆಶಿಸಿದ ಸಚಿವರು, ಚೀನಾದ ಮಾದರಿಯಂತೆ ನಾವು ಕೂಡ ಮುಂದಿನ ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಈಗಿನಿಂದಲೇ ತರಬೇತಿ ನೀಡಲು ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.</p>.<p><strong>ಶೀಘ್ರ ಯುವನೀತಿ:</strong> ಯುವಜನರಲ್ಲಿನ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದಿಸೆಯಲ್ಲಿ ರಾಜ್ಯದಲ್ಲಿ ನೂತನ ಯುವ ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವ ಅಪ್ಪಚ್ಚು ರಂಜನ್ ಹೇಳಿದರು. <br /> ಅಮೆರಿಕಾ, ಜಪಾನ್, ಇಂಗ್ಲೆಂಡ್ ಮತ್ತಿತರ ರಾಷ್ಟ್ರಗಳಲ್ಲಿ ಜಾರಿಯಲ್ಲಿರುವ ಯುವ ನೀತಿ ಬಗ್ಗೆ ಅಧ್ಯಯನ ಮಾಡಿ ರಾಜ್ಯದಲ್ಲಿ ಯುವ ನೀತಿ ರೂಪಿಸಲಾಗುವುದು. ಈ ಬಗ್ಗೆ ಹಿರಿಯರು, ಚಿಂತಕರು ಸಲಹೆ ನೀಡಬಹುದಾಗಿದೆ ಎಂದು ಅವರು ಹೇಳಿದರು.</p>.<p>ಇಲಾಖೆಗೆ ರಾಜ್ಯ ಬಜೆಟ್ನಲ್ಲಿ 143 ಕೋಟಿಗಳ ಅನುದಾನ ನೀಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಕೋರಲಾಗುವುದು ಎಂದರು.</p>.<p><strong>`ಅಶ್ವಿನಿ ಪೊನ್ನಪ್ಪ ಪ್ರಕರಣ ಪರಿಶೀಲಿಸಿ ಕ್ರಮ~</strong></p>.<p>ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುತ್ತಿರುವ ಕೊಡಗು ಮೂಲದ ಅಶ್ವಿನಿ ಪೊನ್ನಪ್ಪ ಅವರು ಸದ್ಯ ಹೈದರಾಬಾದ್ನಲ್ಲಿ ನೆಲೆಸಿರುವ ಕಾರಣ ಆಂಧ್ರ ಪ್ರದೇಶ ಸರ್ಕಾರದಿಂದ ಸಹಾಯಹಸ್ತ ಪಡೆದಿದ್ದಾರೆಯೇ ಇಲ್ಲವೋ ಎನ್ನುವುದನ್ನು ಗಮನಿಸಿ ನೆರವು ನೀಡುವುದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು.</p>.<p>ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಕುರಿತ ದಾಖಲೆಗಳನ್ನು ಹಾಜರುಪಡಿಸುವಂತೆ ಅಶ್ವಿನಿ ಪೊನ್ನಪ್ಪ ಅವರಿಗೆ ಅಧಿಕಾರಿಗಳು ಸೂಚಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಆಂಧ್ರಪ್ರದೇಶ ಸರ್ಕಾರದಿಂದ ಯಾವುದಾದರೂ ನೆರವು ಪಡೆದಿದ್ದಾರೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಅಧಿಕಾರಿಗಳು ಈ ಮಾಹಿತಿ ಕೇಳಿರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>