<p><strong>ಬೆಂಗಳೂರು: </strong>ವೈಯಾಲಿಕಾವಲ್ ಬಳಿ ಉದ್ಯಾನಕ್ಕಾಗಿ ಮೀಸಲು ಇರಿಸಿರುವ ಜಾಗದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ಈ ಜಾಗವನ್ನು ಪರಭಾರೆ ಮಾಡದಂತೆ ಆದೇಶಿಸಲು ಜ್ಯೋತಿ ಭಟ್ ಎನ್ನುವವರು ಕೋರಿದ್ದಾರೆ.<br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಬಿಬಿಎಂಪಿ ಹಾಗೂ ತೋಟಗಾರಿಕಾ ಇಲಾಖೆಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> `ಇಲ್ಲಿ ಈಗಾಗಲೇ ಫುಟ್ಬಾಲ್ ಮೈದಾನ ಇದೆ. ಈ ಮೈದಾನವನ್ನು ವಿಸ್ತರಣೆ ಮಾಡಲು ಹೈಕೋರ್ಟ್ ಕಳೆದ ವರ್ಷ ಅನುಮತಿ ನೀಡಿದೆ. ಆದರೆ ಈ ಮೈದಾನ ವಿಸ್ತರಣೆ ಮಾಡುವ ಬದಲು ಅನಗತ್ಯವಾಗಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ~ ಎನ್ನುವುದು ಅವರ ವಾದ. ವಿಚಾರಣೆಯನ್ನು ಮುಂದೂಡಲಾಗಿದೆ.<br /> <strong><br /> `ಉದ್ಯಾನದ ಜಾಗ ಪರಭಾರೆ~</strong><br /> ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ, ಕುಂದನಹಳ್ಳಿ ಹಾಗೂ ಚಿನ್ನಪ್ಪನಹಳ್ಳಿ ಬಳಿ ಇರುವ 132 ಎಕರೆ ಜಮೀನಿನ ಪೈಕಿ ಸಾರ್ವಜನಿಕ ಉಪಯೋಗಕ್ಕೆ ಮೀಸಲು ಇರಿಸಿರುವ ಜಾಗವನ್ನು `ಏರ್ಕ್ರಾಫ್ಟ್ ನೌಕರರ ಸಹಕಾರ ಸಂಘ~ವು ಪರಭಾರೆ ಮಾಡುತ್ತಿರುವುದಾಗಿ ದೂರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಬಿಬಿಎಂಪಿ, ಬಿಡಿಎ, ಸೊಸೈಟಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> ಸರ್ವೆ ನಂ.353ರಲ್ಲಿನ ಬಿಡಿಎ ಜಾಗವನ್ನು ಬಡಾವಣೆ ನಿರ್ಮಾಣಕ್ಕೆ ಈ ಸೊಸೈಟಿಗೆ ನೀಡಲಾಗಿತ್ತು. ಆ ಪೈಕಿ ಸ್ವಲ್ಪ ಜಮೀನನ್ನು ಉದ್ಯಾನ, ಆಟದ ಮೈದಾನಕ್ಕೆ ಮೀಸಲು ಇರಿಸುವಂತೆ ಬಿಡಿಎ ತಿಳಿಸಿತ್ತು. ಆದರೂ ಈಗ ಸೊಸೈಟಿ ಅದನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಧನಂಜಯ ಹಾಗೂ ಇತರರು ದೂರಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.<br /> <strong><br /> ನಿರೀಕ್ಷಣಾ ಜಾಮೀನು ಕೋರಿ ಅರ್ಜಿ</strong><br /> ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಒಳಗಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಅವರ ಪತ್ನಿ ವಾಣಿಶ್ರೀ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳವಾರ ಲೋಕಾಯುಕ್ತ ಕೋರ್ಟ್ ಮೊರೆ ಹೋಗಿದ್ದಾರೆ.<br /> <br /> ಇವರ ವಿರುದ್ಧ ಶಶಿಧರ್ ಎನ್ನುವವರು ದಾಖಲು ಮಾಡಿದ್ದ ದೂರಿನ ಆಧಾರದ ಮೇಲೆ ಕೋರ್ಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು.<br /> <br /> `ರಾಜಕೀಯಕ್ಕೆ ಬಂದ ಮೇಲೆ ವಿಶ್ವನಾಥ್ ಸುಮಾರು 70 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಕರ್ನಾಟಕ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿರುವ ಸುಮಾರು ಮೂರುವರೆ ಎಕರೆ ಜಮೀನನ್ನು ಹೆಸರಘಟ್ಟ ಹಾಗೂ ಶ್ರೀರಾಮನಹಳ್ಳಿಯಲ್ಲಿ ಹೊಂದಿದ್ದಾರೆ~ ಎನ್ನುವುದು ಶಶಿಧರ್ ಅವರ ದೂರು. ಈ ಆರೋಪದ ಹಿನ್ನೆಲೆಯಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈಯಾಲಿಕಾವಲ್ ಬಳಿ ಉದ್ಯಾನಕ್ಕಾಗಿ ಮೀಸಲು ಇರಿಸಿರುವ ಜಾಗದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ಈ ಜಾಗವನ್ನು ಪರಭಾರೆ ಮಾಡದಂತೆ ಆದೇಶಿಸಲು ಜ್ಯೋತಿ ಭಟ್ ಎನ್ನುವವರು ಕೋರಿದ್ದಾರೆ.<br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಬಿಬಿಎಂಪಿ ಹಾಗೂ ತೋಟಗಾರಿಕಾ ಇಲಾಖೆಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> `ಇಲ್ಲಿ ಈಗಾಗಲೇ ಫುಟ್ಬಾಲ್ ಮೈದಾನ ಇದೆ. ಈ ಮೈದಾನವನ್ನು ವಿಸ್ತರಣೆ ಮಾಡಲು ಹೈಕೋರ್ಟ್ ಕಳೆದ ವರ್ಷ ಅನುಮತಿ ನೀಡಿದೆ. ಆದರೆ ಈ ಮೈದಾನ ವಿಸ್ತರಣೆ ಮಾಡುವ ಬದಲು ಅನಗತ್ಯವಾಗಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ~ ಎನ್ನುವುದು ಅವರ ವಾದ. ವಿಚಾರಣೆಯನ್ನು ಮುಂದೂಡಲಾಗಿದೆ.<br /> <strong><br /> `ಉದ್ಯಾನದ ಜಾಗ ಪರಭಾರೆ~</strong><br /> ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ, ಕುಂದನಹಳ್ಳಿ ಹಾಗೂ ಚಿನ್ನಪ್ಪನಹಳ್ಳಿ ಬಳಿ ಇರುವ 132 ಎಕರೆ ಜಮೀನಿನ ಪೈಕಿ ಸಾರ್ವಜನಿಕ ಉಪಯೋಗಕ್ಕೆ ಮೀಸಲು ಇರಿಸಿರುವ ಜಾಗವನ್ನು `ಏರ್ಕ್ರಾಫ್ಟ್ ನೌಕರರ ಸಹಕಾರ ಸಂಘ~ವು ಪರಭಾರೆ ಮಾಡುತ್ತಿರುವುದಾಗಿ ದೂರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಬಿಬಿಎಂಪಿ, ಬಿಡಿಎ, ಸೊಸೈಟಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> ಸರ್ವೆ ನಂ.353ರಲ್ಲಿನ ಬಿಡಿಎ ಜಾಗವನ್ನು ಬಡಾವಣೆ ನಿರ್ಮಾಣಕ್ಕೆ ಈ ಸೊಸೈಟಿಗೆ ನೀಡಲಾಗಿತ್ತು. ಆ ಪೈಕಿ ಸ್ವಲ್ಪ ಜಮೀನನ್ನು ಉದ್ಯಾನ, ಆಟದ ಮೈದಾನಕ್ಕೆ ಮೀಸಲು ಇರಿಸುವಂತೆ ಬಿಡಿಎ ತಿಳಿಸಿತ್ತು. ಆದರೂ ಈಗ ಸೊಸೈಟಿ ಅದನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಧನಂಜಯ ಹಾಗೂ ಇತರರು ದೂರಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.<br /> <strong><br /> ನಿರೀಕ್ಷಣಾ ಜಾಮೀನು ಕೋರಿ ಅರ್ಜಿ</strong><br /> ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಒಳಗಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಅವರ ಪತ್ನಿ ವಾಣಿಶ್ರೀ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳವಾರ ಲೋಕಾಯುಕ್ತ ಕೋರ್ಟ್ ಮೊರೆ ಹೋಗಿದ್ದಾರೆ.<br /> <br /> ಇವರ ವಿರುದ್ಧ ಶಶಿಧರ್ ಎನ್ನುವವರು ದಾಖಲು ಮಾಡಿದ್ದ ದೂರಿನ ಆಧಾರದ ಮೇಲೆ ಕೋರ್ಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು.<br /> <br /> `ರಾಜಕೀಯಕ್ಕೆ ಬಂದ ಮೇಲೆ ವಿಶ್ವನಾಥ್ ಸುಮಾರು 70 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಕರ್ನಾಟಕ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿರುವ ಸುಮಾರು ಮೂರುವರೆ ಎಕರೆ ಜಮೀನನ್ನು ಹೆಸರಘಟ್ಟ ಹಾಗೂ ಶ್ರೀರಾಮನಹಳ್ಳಿಯಲ್ಲಿ ಹೊಂದಿದ್ದಾರೆ~ ಎನ್ನುವುದು ಶಶಿಧರ್ ಅವರ ದೂರು. ಈ ಆರೋಪದ ಹಿನ್ನೆಲೆಯಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>