<p><strong>ಹೈದರಾಬಾದ್ (ಪಿಟಿಐ): </strong>ಕೃಷ್ಣಾ ಹೆಚ್ಚುವರಿ ನೀರು ಹಂಚಿಕೆ ಕುರಿತು ಗುರುವಾರ ಪ್ರಕಟಿಸಲಾದ ತೀರ್ಪಿನಲ್ಲಿ ರಾಜ್ಯಕ್ಕೆ ಅನುಕೂಲವಾಗುವಂತಹ ಕೆಲವು ಅಂಶಗಳೂ ಇವೆ ಎಂದಿರುವ ಕಂದಾಯ ಸಚಿವ ಎನ್.ರಘುವರ ರೆಡ್ಡಿ, ತೀರ್ಪನ್ನು ಪೂರ್ಣ ಅಧ್ಯಯನ ಮಾಡಿದ ನಂತರ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.<br /> <br /> ಈ ತೀರ್ಪಿನಲ್ಲಿ ರಾಜ್ಯಕ್ಕೆ ಧನಾತ್ಮಕವಾಗುವಂತಹ ಕೆಲವು ಅಂಶಗಳಿದ್ದರೆ ಇನ್ನು ಕೆಲವು ಋಣಾತ್ಮಕ ಅಂಶಗಳಿವೆ. ಸರ್ಕಾರ ತೀರ್ಪನ್ನು ಕೂಲಕಂಷವಾಗಿ ಅಧ್ಯಯನ ಮಾಡುತ್ತಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರತಿಪಕ್ಷ ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ರಾಜ್ಯದ ರೈತರ ಮೇಲೆ ಇದು ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದಿದ್ದಾರೆ.</p>.<p>ಗುರುವಾರ ರಾತ್ರಿ ಗುಂಟೂರಿನಲ್ಲಿ ಪಕ್ಷ ಏರ್ಪಡಿಸಿದ್ದ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷ್ಣಾ ಹೆಚ್ಚುವರಿ ನೀರಿನ ಮೇಲಿನ ಹಕ್ಕನ್ನು ರಾಜ್ಯ ಕಳೆದುಕೊಂಡಿದೆ ಎಂದಿದ್ದಾರೆ.</p>.<p>ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ನ್ಯಾಯ ಮಂಡಳಿ ಅನುಮತಿ ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಣತ ವಕೀಲರನ್ನು ನೇಮಿಸಿಕೊಳ್ಳದ ಸರ್ಕಾರ ತನ್ನ ವಾದವನ್ನು ಸರಿಯಾಗಿ ಸಮರ್ಥಿಸಿಕೊಳ್ಳದೇ ಇದ್ದುದೇ ಈ ನಕಾರಾತ್ಮಕ ತೀರ್ಪು ಹೊರಬೀಳಲು ಕಾರಣ ಎಂದೂ ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ): </strong>ಕೃಷ್ಣಾ ಹೆಚ್ಚುವರಿ ನೀರು ಹಂಚಿಕೆ ಕುರಿತು ಗುರುವಾರ ಪ್ರಕಟಿಸಲಾದ ತೀರ್ಪಿನಲ್ಲಿ ರಾಜ್ಯಕ್ಕೆ ಅನುಕೂಲವಾಗುವಂತಹ ಕೆಲವು ಅಂಶಗಳೂ ಇವೆ ಎಂದಿರುವ ಕಂದಾಯ ಸಚಿವ ಎನ್.ರಘುವರ ರೆಡ್ಡಿ, ತೀರ್ಪನ್ನು ಪೂರ್ಣ ಅಧ್ಯಯನ ಮಾಡಿದ ನಂತರ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.<br /> <br /> ಈ ತೀರ್ಪಿನಲ್ಲಿ ರಾಜ್ಯಕ್ಕೆ ಧನಾತ್ಮಕವಾಗುವಂತಹ ಕೆಲವು ಅಂಶಗಳಿದ್ದರೆ ಇನ್ನು ಕೆಲವು ಋಣಾತ್ಮಕ ಅಂಶಗಳಿವೆ. ಸರ್ಕಾರ ತೀರ್ಪನ್ನು ಕೂಲಕಂಷವಾಗಿ ಅಧ್ಯಯನ ಮಾಡುತ್ತಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರತಿಪಕ್ಷ ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ರಾಜ್ಯದ ರೈತರ ಮೇಲೆ ಇದು ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದಿದ್ದಾರೆ.</p>.<p>ಗುರುವಾರ ರಾತ್ರಿ ಗುಂಟೂರಿನಲ್ಲಿ ಪಕ್ಷ ಏರ್ಪಡಿಸಿದ್ದ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷ್ಣಾ ಹೆಚ್ಚುವರಿ ನೀರಿನ ಮೇಲಿನ ಹಕ್ಕನ್ನು ರಾಜ್ಯ ಕಳೆದುಕೊಂಡಿದೆ ಎಂದಿದ್ದಾರೆ.</p>.<p>ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ನ್ಯಾಯ ಮಂಡಳಿ ಅನುಮತಿ ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಣತ ವಕೀಲರನ್ನು ನೇಮಿಸಿಕೊಳ್ಳದ ಸರ್ಕಾರ ತನ್ನ ವಾದವನ್ನು ಸರಿಯಾಗಿ ಸಮರ್ಥಿಸಿಕೊಳ್ಳದೇ ಇದ್ದುದೇ ಈ ನಕಾರಾತ್ಮಕ ತೀರ್ಪು ಹೊರಬೀಳಲು ಕಾರಣ ಎಂದೂ ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>