<p>ಮಡಿಕೇರಿ: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.15ರಂದು ಸಾಂಪ್ರದಾಯಿಕವಾಗಿ ಹುತ್ತರಿ ಹಬ್ಬವನ್ನು ಆಚರಿಸಲಾಗುವುದು ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನಿಶ್ಚಯಿಸಿರುವಂತೆ ಅಂದು ರಾತ್ರಿ 9.15ಕ್ಕೆ ನೆರೆ ಕಟ್ಟಲಾಗುವುದು. ರಾತ್ರಿ 9.45ಕ್ಕೆ ಕದಿರು ತೆಗೆಯಲಾಗುವುದು ಎಂದು ಅವರು ಹೇಳಿದರು.<br /> <br /> ಈ ಕಾರ್ಯಕ್ರಮವನ್ನು ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ ಹಾಗೂ ಪಾಂಡೀರ ಕುಟುಂಬದ ಸಹಕಾರದಲ್ಲಿ ನಡೆಸಲಾಗುತ್ತಿದ್ದು, ಆಗಮಿಸುವ ಭಕ್ತರಿಗೆ ಕದಿರನ್ನು ನೀಡಲಾಗುವುದು ಎಂದರು.<br /> <br /> ನಂತರ ಮೆರವಣಿಗೆ ತೆರಳಿದ ಬಳಿಕ ಕದಿರನ್ನು ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ಅರ್ಪಿಸಿದ ಬಳಿಕ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ತಿಳಿಸಿದರು.<br /> <br /> ಡಿ.16ರಂದು ಹುತ್ತರಿ ಅಂಗವಾಗಿ ಮಧ್ಯಾಹ್ನ 3 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಹುತ್ತರಿ ಕೋಲಾಟ ನಡೆಯಲಿದೆ ಎಂದು ಅವರು ಹೇಳಿದರು. ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗಾಂಧಿ ಅಯ್ಯಪ್ಪ, ವ್ಯವಸ್ಥಾಪಕ ಸಂಪತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.15ರಂದು ಸಾಂಪ್ರದಾಯಿಕವಾಗಿ ಹುತ್ತರಿ ಹಬ್ಬವನ್ನು ಆಚರಿಸಲಾಗುವುದು ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನಿಶ್ಚಯಿಸಿರುವಂತೆ ಅಂದು ರಾತ್ರಿ 9.15ಕ್ಕೆ ನೆರೆ ಕಟ್ಟಲಾಗುವುದು. ರಾತ್ರಿ 9.45ಕ್ಕೆ ಕದಿರು ತೆಗೆಯಲಾಗುವುದು ಎಂದು ಅವರು ಹೇಳಿದರು.<br /> <br /> ಈ ಕಾರ್ಯಕ್ರಮವನ್ನು ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ ಹಾಗೂ ಪಾಂಡೀರ ಕುಟುಂಬದ ಸಹಕಾರದಲ್ಲಿ ನಡೆಸಲಾಗುತ್ತಿದ್ದು, ಆಗಮಿಸುವ ಭಕ್ತರಿಗೆ ಕದಿರನ್ನು ನೀಡಲಾಗುವುದು ಎಂದರು.<br /> <br /> ನಂತರ ಮೆರವಣಿಗೆ ತೆರಳಿದ ಬಳಿಕ ಕದಿರನ್ನು ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ಅರ್ಪಿಸಿದ ಬಳಿಕ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ತಿಳಿಸಿದರು.<br /> <br /> ಡಿ.16ರಂದು ಹುತ್ತರಿ ಅಂಗವಾಗಿ ಮಧ್ಯಾಹ್ನ 3 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಹುತ್ತರಿ ಕೋಲಾಟ ನಡೆಯಲಿದೆ ಎಂದು ಅವರು ಹೇಳಿದರು. ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗಾಂಧಿ ಅಯ್ಯಪ್ಪ, ವ್ಯವಸ್ಥಾಪಕ ಸಂಪತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>