<p>ಚಿತ್ರದುರ್ಗ: ಓಜೋನ್ ಪದರ ನಾಶಪಡಿಸಿದರೆ ಮಾನವನಿಗೆ ಆಪತ್ತು ಉಂಟಾಗಲಿದೆ ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ಸಹಪ್ರಾಧ್ಯಾಪಕ ಗೋಪಾಲ್ ಹೇಳಿದರು. <br /> <br /> ಚಿತ್ರದುರ್ಗ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಓಜೋನ್ ದಿನಾಚರಣೆಯಲ್ಲಿ ಮಾತನಾಡಿದರು. <br /> <br /> ಓಜೋನ್ ಪದರ ಸೂರ್ಯನಿಂದ ಬರುವ ಹಾನಿಕಾರಕ ನೇರಳಾತೀತ ಕಿರಣಗಳನ್ನು ತಡೆದು ಭೂಮಿಯ ಮೇಲೆ ಜೀವರಾಶಿಗಳ ಉದಯಕ್ಕೆ ಕಾರಣವಾಯಿತು ಎಂದು ತಿಳಿಸಿದರು. <br /> <br /> ವಿಜ್ಞಾನ ಕೇಂದ್ರದ ಎಸ್. ಮಲ್ಲಿಕಾರ್ಜುನಯ್ಯ ಮಾತನಾಡಿ, ಐಷಾರಾಮಿ ಜೀವನ ಪದ್ಧತಿಯಿಂದ ಮುಕ್ತರಾಗಿ ಓಜೋನ್ ಸಂರಕ್ಷಿಸಲು ಕರೆ ನೀಡಿದರು. <br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಪರಿಸರ ಅಧಿಕಾರಿ ರಾಜಶೇಖರ್ ಮಾತನಾಡಿದರು.<br /> ಪ್ರಾಸ್ತಾವಿಕ ಮಾತನಾಡಿದ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಹಾಗೂ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಬಿ. ನಾಗೇಂದ್ರ ಚೌಧರಿ, ಓಜೋನ್ ದಿನಾಚರಣೆಯ ಮಹತ್ವ ಅರಿತು ಪ್ರತಿನಿತ್ಯ ಜನರು ಇದನ್ನು ಸಂರಕ್ಷಿಸುವಲ್ಲಿ ಸಫಲರಾಗಬೇಕು ಎಂದರು.<br /> <br /> ತುರುವನೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕೃಷ್ಣಕುಮಾರಿ, ಉಪ ಪ್ರಾಂಶುಪಾಲರಾದ ನಾಗರತ್ನಮ್ಮ, ವಿಜ್ಞಾನ ಶಿಕ್ಷಕಿ ಮಂಜುಳಾ ಹಾಜರಿದ್ದರು.<br /> <br /> ಈ ಸಂದರ್ಭದಲ್ಲಿ `ಓಜೋನ್ ಸಂರಕ್ಷಣೆ ನಮ್ಮ ಹೊಣೆ~ ಕುರಿತ ವಿಷಯಕ್ಕೆ ಸಂಬಂಧಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಪಿಯು ವಿದ್ಯಾರ್ಥಿಗಳಾದ ಎಂ.ಎಚ್. ರಾಜೇಶ್, ಎಚ್.ಎಂ. ಮಂಜುನಾಥ್, ಎಚ್.ಎಲ್. ರಜನಿ, ಡಿ.ಎಸ್. ಪ್ರಿಯಾ, ಸಿಂಧೂರ ಅವರು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ಪಡೆದರು. <br /> <br /> ಸೌಜನ್ಯಾ ಪ್ರಾರ್ಥಿಸಿದರು. ಉಪನ್ಯಾಸಕ ಶ್ರೀನಿವಾಸರೆಡ್ಡಿ ವಂದಿಸಿದರು. ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.<br /> <br /> <strong>ಕಂಬಾರರಿಗೆ ಅಭಿನಂದನೆ</strong><br /> ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿರುವ ಡಾ.ಚಂದ್ರಶೇಖರ ಕಂಬಾರ ಅವರನ್ನು ಚಿತ್ರದುರ್ಗ ಬಯಲುಸೀಮೆ ಬರಹಗಾರರ ವೇದಿಕೆ ಅಭಿನಂದಿಸಿದೆ. <br /> <br /> ಕಂಬಾರ ಅವರು ಕನ್ನಡದ ಕೀರ್ತಿ ಪತಾಕೆ ಹಾರಿಸಿದ್ದಾರೆ ಎಂದು ಮಾಲತೇಶ್ ಅರಸ್, ಚಿಕ್ಕೋಬನಹಳ್ಳಿ ಮುರಾರ್ಜಿ, ಮೇಘ ಗಂಗಾಧರ ನಾಯ್ಕ ಮತ್ತಿತರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಓಜೋನ್ ಪದರ ನಾಶಪಡಿಸಿದರೆ ಮಾನವನಿಗೆ ಆಪತ್ತು ಉಂಟಾಗಲಿದೆ ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ಸಹಪ್ರಾಧ್ಯಾಪಕ ಗೋಪಾಲ್ ಹೇಳಿದರು. <br /> <br /> ಚಿತ್ರದುರ್ಗ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಓಜೋನ್ ದಿನಾಚರಣೆಯಲ್ಲಿ ಮಾತನಾಡಿದರು. <br /> <br /> ಓಜೋನ್ ಪದರ ಸೂರ್ಯನಿಂದ ಬರುವ ಹಾನಿಕಾರಕ ನೇರಳಾತೀತ ಕಿರಣಗಳನ್ನು ತಡೆದು ಭೂಮಿಯ ಮೇಲೆ ಜೀವರಾಶಿಗಳ ಉದಯಕ್ಕೆ ಕಾರಣವಾಯಿತು ಎಂದು ತಿಳಿಸಿದರು. <br /> <br /> ವಿಜ್ಞಾನ ಕೇಂದ್ರದ ಎಸ್. ಮಲ್ಲಿಕಾರ್ಜುನಯ್ಯ ಮಾತನಾಡಿ, ಐಷಾರಾಮಿ ಜೀವನ ಪದ್ಧತಿಯಿಂದ ಮುಕ್ತರಾಗಿ ಓಜೋನ್ ಸಂರಕ್ಷಿಸಲು ಕರೆ ನೀಡಿದರು. <br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಪರಿಸರ ಅಧಿಕಾರಿ ರಾಜಶೇಖರ್ ಮಾತನಾಡಿದರು.<br /> ಪ್ರಾಸ್ತಾವಿಕ ಮಾತನಾಡಿದ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಹಾಗೂ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಬಿ. ನಾಗೇಂದ್ರ ಚೌಧರಿ, ಓಜೋನ್ ದಿನಾಚರಣೆಯ ಮಹತ್ವ ಅರಿತು ಪ್ರತಿನಿತ್ಯ ಜನರು ಇದನ್ನು ಸಂರಕ್ಷಿಸುವಲ್ಲಿ ಸಫಲರಾಗಬೇಕು ಎಂದರು.<br /> <br /> ತುರುವನೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕೃಷ್ಣಕುಮಾರಿ, ಉಪ ಪ್ರಾಂಶುಪಾಲರಾದ ನಾಗರತ್ನಮ್ಮ, ವಿಜ್ಞಾನ ಶಿಕ್ಷಕಿ ಮಂಜುಳಾ ಹಾಜರಿದ್ದರು.<br /> <br /> ಈ ಸಂದರ್ಭದಲ್ಲಿ `ಓಜೋನ್ ಸಂರಕ್ಷಣೆ ನಮ್ಮ ಹೊಣೆ~ ಕುರಿತ ವಿಷಯಕ್ಕೆ ಸಂಬಂಧಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಪಿಯು ವಿದ್ಯಾರ್ಥಿಗಳಾದ ಎಂ.ಎಚ್. ರಾಜೇಶ್, ಎಚ್.ಎಂ. ಮಂಜುನಾಥ್, ಎಚ್.ಎಲ್. ರಜನಿ, ಡಿ.ಎಸ್. ಪ್ರಿಯಾ, ಸಿಂಧೂರ ಅವರು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ಪಡೆದರು. <br /> <br /> ಸೌಜನ್ಯಾ ಪ್ರಾರ್ಥಿಸಿದರು. ಉಪನ್ಯಾಸಕ ಶ್ರೀನಿವಾಸರೆಡ್ಡಿ ವಂದಿಸಿದರು. ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.<br /> <br /> <strong>ಕಂಬಾರರಿಗೆ ಅಭಿನಂದನೆ</strong><br /> ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿರುವ ಡಾ.ಚಂದ್ರಶೇಖರ ಕಂಬಾರ ಅವರನ್ನು ಚಿತ್ರದುರ್ಗ ಬಯಲುಸೀಮೆ ಬರಹಗಾರರ ವೇದಿಕೆ ಅಭಿನಂದಿಸಿದೆ. <br /> <br /> ಕಂಬಾರ ಅವರು ಕನ್ನಡದ ಕೀರ್ತಿ ಪತಾಕೆ ಹಾರಿಸಿದ್ದಾರೆ ಎಂದು ಮಾಲತೇಶ್ ಅರಸ್, ಚಿಕ್ಕೋಬನಹಳ್ಳಿ ಮುರಾರ್ಜಿ, ಮೇಘ ಗಂಗಾಧರ ನಾಯ್ಕ ಮತ್ತಿತರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>