<p> <strong>ಚಿಕ್ಕಬಳ್ಳಾಪುರ</strong>: ವಿದ್ಯಾರ್ಥಿಗಳು ಪಠ್ಯ-ಪುಸ್ತಕದ ಶಿಕ್ಷಣದ ಜೊತೆಗೆ ದೈಹಿತ ಅಭ್ಯಾಸಕ್ಕೂ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಅಭ್ಯಾಸ ಮತ್ತು ಕ್ರೀಡಾಕೂಟ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ.ಪವಾರ್ ತಿಳಿಸಿದರು.<br /> <br /> ನಗರದ ಎಸ್ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಏಕವಲಯ ಗುಡ್ಡಗಾಡು ಓಟದ ಸ್ಪರ್ಧೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.<br /> <br /> ಬುದ್ಧಿಶಕ್ತಿಯ ಜೊತೆಜೊತೆಗೆ ದೈಹಿಕ ಶ್ರಮಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ದೈಹಿಕ ಪರಿಶ್ರಮಪಟ್ಟಲ್ಲಿ ಕ್ರೀಡಾಕೂಟಗಳಲ್ಲಿ ಜಯ ಸಾಧಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದರು.<br /> <br /> ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಾಂಶುಪಾಲ ಟಿ.ಮುನಿಕೆಂಚೇಗೌಡ, ಕುಲಸಚಿವ ಬಿ.ಕೆ..ಉಮೇಶ್, ಉಪನ್ಯಾಸಕರಾದ ಪ್ರೊ. ವಿಜಯಕುಮಾರ್, ಡಾ. ಜಿ.ಗೋಪಾಲರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಚಿಕ್ಕಬಳ್ಳಾಪುರ</strong>: ವಿದ್ಯಾರ್ಥಿಗಳು ಪಠ್ಯ-ಪುಸ್ತಕದ ಶಿಕ್ಷಣದ ಜೊತೆಗೆ ದೈಹಿತ ಅಭ್ಯಾಸಕ್ಕೂ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಅಭ್ಯಾಸ ಮತ್ತು ಕ್ರೀಡಾಕೂಟ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ.ಪವಾರ್ ತಿಳಿಸಿದರು.<br /> <br /> ನಗರದ ಎಸ್ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಏಕವಲಯ ಗುಡ್ಡಗಾಡು ಓಟದ ಸ್ಪರ್ಧೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.<br /> <br /> ಬುದ್ಧಿಶಕ್ತಿಯ ಜೊತೆಜೊತೆಗೆ ದೈಹಿಕ ಶ್ರಮಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ದೈಹಿಕ ಪರಿಶ್ರಮಪಟ್ಟಲ್ಲಿ ಕ್ರೀಡಾಕೂಟಗಳಲ್ಲಿ ಜಯ ಸಾಧಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದರು.<br /> <br /> ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಾಂಶುಪಾಲ ಟಿ.ಮುನಿಕೆಂಚೇಗೌಡ, ಕುಲಸಚಿವ ಬಿ.ಕೆ..ಉಮೇಶ್, ಉಪನ್ಯಾಸಕರಾದ ಪ್ರೊ. ವಿಜಯಕುಮಾರ್, ಡಾ. ಜಿ.ಗೋಪಾಲರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>