<p><strong>ಬೆಂಗಳೂರು:</strong> `ಸರ್ಕಾರಿ ಔಷಧ ವಿಜ್ಞಾನ ಕಾಲೇಜುಗಳಲ್ಲಿಯೂ ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಬೇಕು. ಇದರಿಂದ ಸಾಮಾನ್ಯ ಜನರಿಗೆ ನೆರವಾಗುತ್ತದೆ. ಇಲ್ಲಿ ಕ್ಷಯ, ರಕ್ತದೊತ್ತಡದಂತಹ ರೋಗಗಳಿಗೆ ಅಗತ್ಯ ಔಷಧೋಪಚಾರವನ್ನು ನೀಡಲು ಅವಕಾಶ ನೀಡಬೇಕು' ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಹೇಳಿದರು.<br /> <br /> ಸರ್ಕಾರಿ ಔಷಧ ವಿಜ್ಞಾನ ಕಾಲೇಜು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಔಷಧ ವಿಜ್ಞಾನ ಕಾಲೇಜುಗಳಲ್ಲಿ ಚಿಕಿತ್ಸೆ ನೀಡುವುದರಿಂದ ಅನೇಕ ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವೂ ಸಿಗದ ವೇಳೆಯಲ್ಲಿ ಜನರಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಇಲ್ಲಿ ಡಿಪ್ಲೊಮಾ ಪಡೆದವರಿಗೆ ಪದವಿಯನ್ನು ಪಡೆದುಕೊಳ್ಳಲು ಪ್ರತ್ಯೇಕ ಪಠ್ಯಕ್ರಮವನ್ನು ಅಳವಡಿಸಬೇಕು. ವೈದ್ಯಶಾಸ್ತ್ರೀಯ ರೂಪದಲ್ಲಿ ವಿದ್ಯಾರ್ಥಿಗಳಿಗೆ ಕಲಿಸಬೇಕು' ಎಂದು ಸಲಹೆ ನೀಡಿದರು.<br /> <br /> `ಔಷಧಗಳನ್ನು ತಯಾರಿಸುವಾಗ ಕೇವಲ ಅವುಗಳ ರಸಾಯನಿಕ ಜೋಡಣೆಗೆ ಮಹತ್ವ ನೀಡಲಾಗುತ್ತಿದೆ. ಆದರೆ, ಔಷಧಗಳ ಮೂಲ ಕಣಗಳನ್ನು ಸಂಶೋಧಿಸುವ ಕಾರ್ಯವಾಗಬೇಕಿದೆ. ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕಾದರೆ ಔಷಧಗಳ ಮೂಲ ರಸಾಯನಿಕಗಳನ್ನು ಪತ್ತೆ ಹಚ್ಚಿ ಸೃಷ್ಟಿಸುವ ಕೆಲಸ ಆಗಬೇಕಿದೆ' ಎಂದರು.<br /> <br /> `ಔಷಧ ಮಾರುಕಟ್ಟೆಯು ಹೊಸ ಸಂಶೋಧನೆಗಳನ್ನು ನಿರ್ಲಕ್ಷಿಸುತ್ತಿದೆ. ಆದರೆ, ಭಾರತದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ, ಮುಕ್ತವಾಗಿ ಪರಸ್ಪರ ಮಾಹಿತಿಯನ್ನು ಹಂಚಿಕೊಂಡು ಹೊಸ ಔಷಧಗಳನ್ನು ಕಂಡುಕೊಳ್ಳುವ ಯೋಜನೆಯನ್ನು ಜಾರಿಗೆ ತಂದಿದೆ.<br /> <br /> ಇದರಿಂದ ಸಾವಿರಕ್ಕೂ ಅಧಿಕ ಜನರ ಬಲಿ ತೆಗೆದುಕೊಳ್ಳುತ್ತಿದ್ದ ಕ್ಷಯ ರೋಗಕ್ಕೆ ಈಗ ದೇಶದಲ್ಲಿ 500 ಕ್ಕೂ ಅಧಿಕ ಔಷಧಿಗಳಿವೆ. ಹೀಗೆ ಆಳವಾದ ಸಂಶೋಧನೆಗಳು ನಡೆಯಬೇಕಾಗಿದೆ' ಎಂದು ಹೇಳಿದರು.<br /> <br /> `ಕಾಲೇಜುಗಳಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಬೋಧನಾ ಪದ್ಧತಿ ಇರುವೆಡೆಯಲ್ಲಿ ಸಂಶೋಧನೆಯೂ ಉತ್ತಮವಾಗಿರುತ್ತದೆ. ಕಾಲೇಜುಗಳು ಸಂಶೋಧನೆ, ಬೋಧನೆ ಮತ್ತು ಸಂಶೋಧನೆ ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕು. ಔಷಧ ವಿಜ್ಞಾನ ಕಾಲೇಜು 50 ವರ್ಷಗಳನ್ನು ಪೂರೈಸಿರುವ ಈ ಸಮಯದಲ್ಲಿ ಹೆಚ್ಚಿನ ಸಂಶೋಧನೆಯ ಕಡೆಗೆ ಒತ್ತು ನೀಡಬೇಕಾಗಿದೆ' ಎಂದರು.<br /> <br /> ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಮಾತನಾಡಿ, `ಸರ್ಕಾರಿ ಫಾರ್ಮಸಿ ಕಾಲೇಜಿನಲ್ಲಿ ಸಂಶೋಧನೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ತುಂಬಾ ದಿನಗಳಿಂದ ಇದೆ. ಆದ್ದರಿಂದ, ಸರ್ಕಾರವು ಈ ಸಂಶೋಧನೆಗಾಗಿಯೇ ವೆಚ್ಚ ಮಾಡಲು ರೂ9.2 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಇದರಲ್ಲಿ ಕಾಲೇಜುಗಳಿಗೆ ಅನುದಾನವನ್ನು ನೀಡಲಾಗುವುದು' ಎಂದು ಭರವಸೆ ನೀಡಿದರು.<br /> <br /> <strong>540 ಪ್ರಕರಣಗಳು ಬಾಕಿ</strong><br /> ಔಷಧ ನಿಯಂತ್ರಕ ಜಗಶೆಟ್ಟಿ ಮಾತನಾಡಿ, `ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿವೆ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಈ ಪ್ರಮಾಣ ಕಡಿಮೆ ಇದ್ದು, ಕೇವಲ 3.5 ರಷ್ಟಿದೆ.<br /> <br /> ಈ ಕುರಿತು ಸಾಕಷ್ಟು ಪ್ರಕರಣಗಳನ್ನು ದಾಖಲಿಸಿದ್ದು, ನ್ಯಾಯಾಲಯದಲ್ಲಿ ಈ ವರೆಗೆ 540 ಪ್ರಕರಣಗಳು ಬಾಕಿಯಿವೆ' ಎಂದು ಹೇಳಿದರು.<br /> <br /> `ಔಷಧ ಗುಣಮಟ್ಟ ನಿಯಂತ್ರಣ ಘಟಕದಲ್ಲಿ ಸುಮಾರು 20 ಕ್ಕೂ ಹೆಚ್ಚು ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಸರ್ಕಾರವು ಇವುಗಳನ್ನು ಭರಿಸಲು ಸಿದ್ಧವಾಗಿದೆ. ಅಲ್ಲದೇ, ದೇಶದಲ್ಲಿಯೇ ಮೊದಲ ಬಾರಿಗೆ ಸಂಚಾರಿ ಘಟಕವನ್ನು ಸ್ಥಾಪಿಸಲು ಸರ್ಕಾರದ ಅನುಮತಿಯನ್ನು ಕೇಳಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸರ್ಕಾರಿ ಔಷಧ ವಿಜ್ಞಾನ ಕಾಲೇಜುಗಳಲ್ಲಿಯೂ ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಬೇಕು. ಇದರಿಂದ ಸಾಮಾನ್ಯ ಜನರಿಗೆ ನೆರವಾಗುತ್ತದೆ. ಇಲ್ಲಿ ಕ್ಷಯ, ರಕ್ತದೊತ್ತಡದಂತಹ ರೋಗಗಳಿಗೆ ಅಗತ್ಯ ಔಷಧೋಪಚಾರವನ್ನು ನೀಡಲು ಅವಕಾಶ ನೀಡಬೇಕು' ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಹೇಳಿದರು.<br /> <br /> ಸರ್ಕಾರಿ ಔಷಧ ವಿಜ್ಞಾನ ಕಾಲೇಜು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಔಷಧ ವಿಜ್ಞಾನ ಕಾಲೇಜುಗಳಲ್ಲಿ ಚಿಕಿತ್ಸೆ ನೀಡುವುದರಿಂದ ಅನೇಕ ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವೂ ಸಿಗದ ವೇಳೆಯಲ್ಲಿ ಜನರಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಇಲ್ಲಿ ಡಿಪ್ಲೊಮಾ ಪಡೆದವರಿಗೆ ಪದವಿಯನ್ನು ಪಡೆದುಕೊಳ್ಳಲು ಪ್ರತ್ಯೇಕ ಪಠ್ಯಕ್ರಮವನ್ನು ಅಳವಡಿಸಬೇಕು. ವೈದ್ಯಶಾಸ್ತ್ರೀಯ ರೂಪದಲ್ಲಿ ವಿದ್ಯಾರ್ಥಿಗಳಿಗೆ ಕಲಿಸಬೇಕು' ಎಂದು ಸಲಹೆ ನೀಡಿದರು.<br /> <br /> `ಔಷಧಗಳನ್ನು ತಯಾರಿಸುವಾಗ ಕೇವಲ ಅವುಗಳ ರಸಾಯನಿಕ ಜೋಡಣೆಗೆ ಮಹತ್ವ ನೀಡಲಾಗುತ್ತಿದೆ. ಆದರೆ, ಔಷಧಗಳ ಮೂಲ ಕಣಗಳನ್ನು ಸಂಶೋಧಿಸುವ ಕಾರ್ಯವಾಗಬೇಕಿದೆ. ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕಾದರೆ ಔಷಧಗಳ ಮೂಲ ರಸಾಯನಿಕಗಳನ್ನು ಪತ್ತೆ ಹಚ್ಚಿ ಸೃಷ್ಟಿಸುವ ಕೆಲಸ ಆಗಬೇಕಿದೆ' ಎಂದರು.<br /> <br /> `ಔಷಧ ಮಾರುಕಟ್ಟೆಯು ಹೊಸ ಸಂಶೋಧನೆಗಳನ್ನು ನಿರ್ಲಕ್ಷಿಸುತ್ತಿದೆ. ಆದರೆ, ಭಾರತದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ, ಮುಕ್ತವಾಗಿ ಪರಸ್ಪರ ಮಾಹಿತಿಯನ್ನು ಹಂಚಿಕೊಂಡು ಹೊಸ ಔಷಧಗಳನ್ನು ಕಂಡುಕೊಳ್ಳುವ ಯೋಜನೆಯನ್ನು ಜಾರಿಗೆ ತಂದಿದೆ.<br /> <br /> ಇದರಿಂದ ಸಾವಿರಕ್ಕೂ ಅಧಿಕ ಜನರ ಬಲಿ ತೆಗೆದುಕೊಳ್ಳುತ್ತಿದ್ದ ಕ್ಷಯ ರೋಗಕ್ಕೆ ಈಗ ದೇಶದಲ್ಲಿ 500 ಕ್ಕೂ ಅಧಿಕ ಔಷಧಿಗಳಿವೆ. ಹೀಗೆ ಆಳವಾದ ಸಂಶೋಧನೆಗಳು ನಡೆಯಬೇಕಾಗಿದೆ' ಎಂದು ಹೇಳಿದರು.<br /> <br /> `ಕಾಲೇಜುಗಳಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಬೋಧನಾ ಪದ್ಧತಿ ಇರುವೆಡೆಯಲ್ಲಿ ಸಂಶೋಧನೆಯೂ ಉತ್ತಮವಾಗಿರುತ್ತದೆ. ಕಾಲೇಜುಗಳು ಸಂಶೋಧನೆ, ಬೋಧನೆ ಮತ್ತು ಸಂಶೋಧನೆ ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕು. ಔಷಧ ವಿಜ್ಞಾನ ಕಾಲೇಜು 50 ವರ್ಷಗಳನ್ನು ಪೂರೈಸಿರುವ ಈ ಸಮಯದಲ್ಲಿ ಹೆಚ್ಚಿನ ಸಂಶೋಧನೆಯ ಕಡೆಗೆ ಒತ್ತು ನೀಡಬೇಕಾಗಿದೆ' ಎಂದರು.<br /> <br /> ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಮಾತನಾಡಿ, `ಸರ್ಕಾರಿ ಫಾರ್ಮಸಿ ಕಾಲೇಜಿನಲ್ಲಿ ಸಂಶೋಧನೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ತುಂಬಾ ದಿನಗಳಿಂದ ಇದೆ. ಆದ್ದರಿಂದ, ಸರ್ಕಾರವು ಈ ಸಂಶೋಧನೆಗಾಗಿಯೇ ವೆಚ್ಚ ಮಾಡಲು ರೂ9.2 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಇದರಲ್ಲಿ ಕಾಲೇಜುಗಳಿಗೆ ಅನುದಾನವನ್ನು ನೀಡಲಾಗುವುದು' ಎಂದು ಭರವಸೆ ನೀಡಿದರು.<br /> <br /> <strong>540 ಪ್ರಕರಣಗಳು ಬಾಕಿ</strong><br /> ಔಷಧ ನಿಯಂತ್ರಕ ಜಗಶೆಟ್ಟಿ ಮಾತನಾಡಿ, `ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿವೆ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಈ ಪ್ರಮಾಣ ಕಡಿಮೆ ಇದ್ದು, ಕೇವಲ 3.5 ರಷ್ಟಿದೆ.<br /> <br /> ಈ ಕುರಿತು ಸಾಕಷ್ಟು ಪ್ರಕರಣಗಳನ್ನು ದಾಖಲಿಸಿದ್ದು, ನ್ಯಾಯಾಲಯದಲ್ಲಿ ಈ ವರೆಗೆ 540 ಪ್ರಕರಣಗಳು ಬಾಕಿಯಿವೆ' ಎಂದು ಹೇಳಿದರು.<br /> <br /> `ಔಷಧ ಗುಣಮಟ್ಟ ನಿಯಂತ್ರಣ ಘಟಕದಲ್ಲಿ ಸುಮಾರು 20 ಕ್ಕೂ ಹೆಚ್ಚು ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಸರ್ಕಾರವು ಇವುಗಳನ್ನು ಭರಿಸಲು ಸಿದ್ಧವಾಗಿದೆ. ಅಲ್ಲದೇ, ದೇಶದಲ್ಲಿಯೇ ಮೊದಲ ಬಾರಿಗೆ ಸಂಚಾರಿ ಘಟಕವನ್ನು ಸ್ಥಾಪಿಸಲು ಸರ್ಕಾರದ ಅನುಮತಿಯನ್ನು ಕೇಳಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>