<p><strong>ಚೆನ್ನೈ, (ಪಿಟಿಐ):</strong> ಕಂದನ್ಕೊಳಂ ಅಣು ವಿದ್ಯುತ್ ಘಟಕ ಯೋಜನೆ ವಿರೋಧಿಸಿ 11 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸ್ಥಳೀಯರು ಬುಧವಾರ ಕೈಬಿಟ್ಟಿದ್ದಾರೆ. <br /> <br /> ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯರ ನಿಯೋಗ, ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದಾಗಿ ತಿಳಿಸಿದೆ.<br /> <br /> ಯೋಜನೆ ಸ್ಥಗಿತಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಬಳಿಕ ಈ ಕುರಿತು ಚರ್ಚಿಸಲು ಪ್ರಧಾನಿ ಭೇಟಿಗೆ ಸಮಯ ನಿಗದಿ ಪಡಿಸಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಪ್ರತಿಭಟನೆಯ ಸಂಯೋಜಕ ಎಸ್.ಪಿ.ಉದಯಕುಮಾರ್ ತಿಳಿಸಿದರು.<br /> <br /> ರಾಜ್ಯ ಸರ್ಕಾರದಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಮುಂದುವರಿಸಲಾಗುವುದು ಎಂದು ಹೇಳಿದರು.<br /> <br /> ಪ್ರಧಾನಿ ಕಾರ್ಯಾಲಯದ ಸಚಿವ ನಾರಾಯಣ ಸ್ವಾಮಿ ಅವರು ಗ್ರಾಮಕ್ಕೆ ಭೇಟಿ ನೀಡುವ ವಿಷಯ ಕೊನೆಯ ಗಳಿಗೆಯಲ್ಲಿ ತಿಳಿಸಿದ ಕಾರಣ ಪ್ರತಿಭಟನಾಕಾರರು ಅವರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿದರು. ನಂತರ ಅವರ ಮನವೊಲಿಸಲಾಯಿತು. <br /> <br /> <strong>`ಪ್ರಧಾನಿಗೆ ತಿಳಿಸುವೆ~<br /> </strong>ಕಂದನ್ಕೊಳಂ ಅಣು ವಿದ್ಯುತ್ ಘಟಕ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ತಮಿಳುನಾಡು ಸರ್ಕಾರ ವ್ಯಕ್ತಪಡಿಸಿದ ಕಳವಳವನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಗಮನಕ್ಕೆ ತರುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ ಹೇಳಿದ್ದಾರೆ.<br /> <br /> ಈ ಯೋಜನೆ ವಿರೋಧಿಸಿ ಸ್ಥಳೀಯರು ಉಪವಾಸ ಕೈಗೊಂಡಿದ್ದ ಕಂದನ್ಕೊಳಂ ಗ್ರಾಮಕ್ಕೆ ಭೇಟಿ ನೀಡಿ ಮರಳಿದ ಬಳಿಕ ಬುಧವಾರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. <br /> <br /> `ಪ್ರಧಾನಿ ಸಂದೇಶ ಹೊತ್ತು ಬಂದಿದ್ದ ನಾನು ಅದನ್ನು ಜಯಲಲಿತಾ ಅವರಿಗೆ ತಲುಪಿಸಿದ್ದೇನೆ. ಅದರಂತೆ ಅವರು ನೀಡಿರುವ ಕೆಲವು ಸಂದೇಶಗಳನ್ನು ಪ್ರಧಾನಿಗೆ ತಲುಪಿಸುತ್ತೇನೆ. ಪ್ರತಿಭಟನಾಕಾರರೊಂದಿಗೆ ನಡೆಸಿದ ಮಾತುಕತೆಯ ವಿವರವನ್ನು ಜಯಾ ಅವರಿಗೆ ನೀಡಿದ್ದೇನೆ. ಈ ವಿಷಯದಲ್ಲಿ ಪ್ರಧಾನಿ ಅವರೇ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ, (ಪಿಟಿಐ):</strong> ಕಂದನ್ಕೊಳಂ ಅಣು ವಿದ್ಯುತ್ ಘಟಕ ಯೋಜನೆ ವಿರೋಧಿಸಿ 11 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸ್ಥಳೀಯರು ಬುಧವಾರ ಕೈಬಿಟ್ಟಿದ್ದಾರೆ. <br /> <br /> ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯರ ನಿಯೋಗ, ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದಾಗಿ ತಿಳಿಸಿದೆ.<br /> <br /> ಯೋಜನೆ ಸ್ಥಗಿತಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಬಳಿಕ ಈ ಕುರಿತು ಚರ್ಚಿಸಲು ಪ್ರಧಾನಿ ಭೇಟಿಗೆ ಸಮಯ ನಿಗದಿ ಪಡಿಸಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಪ್ರತಿಭಟನೆಯ ಸಂಯೋಜಕ ಎಸ್.ಪಿ.ಉದಯಕುಮಾರ್ ತಿಳಿಸಿದರು.<br /> <br /> ರಾಜ್ಯ ಸರ್ಕಾರದಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಮುಂದುವರಿಸಲಾಗುವುದು ಎಂದು ಹೇಳಿದರು.<br /> <br /> ಪ್ರಧಾನಿ ಕಾರ್ಯಾಲಯದ ಸಚಿವ ನಾರಾಯಣ ಸ್ವಾಮಿ ಅವರು ಗ್ರಾಮಕ್ಕೆ ಭೇಟಿ ನೀಡುವ ವಿಷಯ ಕೊನೆಯ ಗಳಿಗೆಯಲ್ಲಿ ತಿಳಿಸಿದ ಕಾರಣ ಪ್ರತಿಭಟನಾಕಾರರು ಅವರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿದರು. ನಂತರ ಅವರ ಮನವೊಲಿಸಲಾಯಿತು. <br /> <br /> <strong>`ಪ್ರಧಾನಿಗೆ ತಿಳಿಸುವೆ~<br /> </strong>ಕಂದನ್ಕೊಳಂ ಅಣು ವಿದ್ಯುತ್ ಘಟಕ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ತಮಿಳುನಾಡು ಸರ್ಕಾರ ವ್ಯಕ್ತಪಡಿಸಿದ ಕಳವಳವನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಗಮನಕ್ಕೆ ತರುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ ಹೇಳಿದ್ದಾರೆ.<br /> <br /> ಈ ಯೋಜನೆ ವಿರೋಧಿಸಿ ಸ್ಥಳೀಯರು ಉಪವಾಸ ಕೈಗೊಂಡಿದ್ದ ಕಂದನ್ಕೊಳಂ ಗ್ರಾಮಕ್ಕೆ ಭೇಟಿ ನೀಡಿ ಮರಳಿದ ಬಳಿಕ ಬುಧವಾರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. <br /> <br /> `ಪ್ರಧಾನಿ ಸಂದೇಶ ಹೊತ್ತು ಬಂದಿದ್ದ ನಾನು ಅದನ್ನು ಜಯಲಲಿತಾ ಅವರಿಗೆ ತಲುಪಿಸಿದ್ದೇನೆ. ಅದರಂತೆ ಅವರು ನೀಡಿರುವ ಕೆಲವು ಸಂದೇಶಗಳನ್ನು ಪ್ರಧಾನಿಗೆ ತಲುಪಿಸುತ್ತೇನೆ. ಪ್ರತಿಭಟನಾಕಾರರೊಂದಿಗೆ ನಡೆಸಿದ ಮಾತುಕತೆಯ ವಿವರವನ್ನು ಜಯಾ ಅವರಿಗೆ ನೀಡಿದ್ದೇನೆ. ಈ ವಿಷಯದಲ್ಲಿ ಪ್ರಧಾನಿ ಅವರೇ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>