<p>ಸೋಮವಾರಪೇಟೆ: ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿರುವ ಆರೋಪದಡಿ ತಾಲ್ಲೂಕಿನ ಕಂದಾಯ ಇಲಾಖೆಯ 11 ನೌಕರರನ್ನು ಅಮಾನತುಗೊಳಿಸಿರುವ ಕ್ರಮವನ್ನು ಖಂಡಿಸಿ ತಾಲ್ಲೂಕು ಕಚೇರಿ ನೌಕರರು ಶುಕ್ರವಾರ ಪ್ರತಿಭಟಿಸಿದರು.<br /> <br /> ಕಂದಾಯ ಇಲಾಖೆ ನೌಕರರ ಸಂಘದ ಆಶ್ರಯದಲ್ಲಿ ತಹಶೀಲ್ದಾರ್ ಎ.ದೇವರಾಜ್ ಅವರಿಗೆ ಮನವಿ ಸಲ್ಲಿಸಿದ ನೌಕರರು ನಂತರ ಲೇಖನಿ ಸ್ಥಗಿತಗೊಳಿಸಿ ಕಚೇರಿ ಹೊರಕ್ಕೆ ಬಂದು ಸರ್ಕಾರದ ಕ್ರಮವನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿರಸ್ತೇದಾರ್ ಚಂದ್ರಮೌಳಿ, ಕಂದಾಯ ಇಲಾಖೆಯ ಇಬ್ಬರು ನಿರೀಕ್ಷಕರು ಹಾಗೂ 9 ಗ್ರಾಮ ಲೆಕ್ಕಿಗರಿಗೆ ಯಾವುದೇ ಸೂಚನೆ ನೀಡದೆ ದಿಢೀರ್ ಅಮಾನತುಗೊಳಿಸಿರುವುದು ಖಂಡನೀಯ ಎಂದರು.<br /> <br /> ಸರ್ಕಾರದ ಇಂತಹ ನಿಯಮದಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಹೋದ್ಯೋಗಿಗಳಿಗೂ ಹೆಚ್ಚಿನ ಕಾರ್ಯದ ಒತ್ತಡ ಬೀಳುವುದರಿಂದ ಮುಂದಿನ ದಿನಗಳಲ್ಲಿ ಜಿಲ್ಲಾ ಸಂಘದ ನಿರ್ದೇಶನದ ಅನ್ವಯ ಪ್ರತಿಭಟನೆಯ ರೂಪುರೇಷೆ ನಿಗದಿಗೊಳಿಸಲಾಗುತ್ತದೆ ಎಂದು ನುಡಿದರು.<br /> <br /> ಪ್ರತಿಭಟನೆಯಲ್ಲಿ ಕಂದಾಯ ಇಲಾಖಾ ನೌಕರರ ಸಂಘದ ಕಾರ್ಯದರ್ಶಿ ಪೂಣಚ್ಚ, ಶಿರಸ್ತೇದಾರ್ ಗಣೇಶ್ ಹಾಗೂ ಸಿಬ್ಬಂದಿ, ಭೂ ಮಾಪನಾ ಇಲಾಖಾ ಪರಿವೀಕ್ಷಕರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿರುವ ಆರೋಪದಡಿ ತಾಲ್ಲೂಕಿನ ಕಂದಾಯ ಇಲಾಖೆಯ 11 ನೌಕರರನ್ನು ಅಮಾನತುಗೊಳಿಸಿರುವ ಕ್ರಮವನ್ನು ಖಂಡಿಸಿ ತಾಲ್ಲೂಕು ಕಚೇರಿ ನೌಕರರು ಶುಕ್ರವಾರ ಪ್ರತಿಭಟಿಸಿದರು.<br /> <br /> ಕಂದಾಯ ಇಲಾಖೆ ನೌಕರರ ಸಂಘದ ಆಶ್ರಯದಲ್ಲಿ ತಹಶೀಲ್ದಾರ್ ಎ.ದೇವರಾಜ್ ಅವರಿಗೆ ಮನವಿ ಸಲ್ಲಿಸಿದ ನೌಕರರು ನಂತರ ಲೇಖನಿ ಸ್ಥಗಿತಗೊಳಿಸಿ ಕಚೇರಿ ಹೊರಕ್ಕೆ ಬಂದು ಸರ್ಕಾರದ ಕ್ರಮವನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿರಸ್ತೇದಾರ್ ಚಂದ್ರಮೌಳಿ, ಕಂದಾಯ ಇಲಾಖೆಯ ಇಬ್ಬರು ನಿರೀಕ್ಷಕರು ಹಾಗೂ 9 ಗ್ರಾಮ ಲೆಕ್ಕಿಗರಿಗೆ ಯಾವುದೇ ಸೂಚನೆ ನೀಡದೆ ದಿಢೀರ್ ಅಮಾನತುಗೊಳಿಸಿರುವುದು ಖಂಡನೀಯ ಎಂದರು.<br /> <br /> ಸರ್ಕಾರದ ಇಂತಹ ನಿಯಮದಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಹೋದ್ಯೋಗಿಗಳಿಗೂ ಹೆಚ್ಚಿನ ಕಾರ್ಯದ ಒತ್ತಡ ಬೀಳುವುದರಿಂದ ಮುಂದಿನ ದಿನಗಳಲ್ಲಿ ಜಿಲ್ಲಾ ಸಂಘದ ನಿರ್ದೇಶನದ ಅನ್ವಯ ಪ್ರತಿಭಟನೆಯ ರೂಪುರೇಷೆ ನಿಗದಿಗೊಳಿಸಲಾಗುತ್ತದೆ ಎಂದು ನುಡಿದರು.<br /> <br /> ಪ್ರತಿಭಟನೆಯಲ್ಲಿ ಕಂದಾಯ ಇಲಾಖಾ ನೌಕರರ ಸಂಘದ ಕಾರ್ಯದರ್ಶಿ ಪೂಣಚ್ಚ, ಶಿರಸ್ತೇದಾರ್ ಗಣೇಶ್ ಹಾಗೂ ಸಿಬ್ಬಂದಿ, ಭೂ ಮಾಪನಾ ಇಲಾಖಾ ಪರಿವೀಕ್ಷಕರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>