<p><strong>ರಾಜರಾಜೇಶ್ವರಿನಗರ: </strong>ಹೇರೋಹಳ್ಳಿ ಕಂದಾಯ ವಿಭಾಗ ಸೇರಿದಂತೆ ಐದು ವಾರ್ಡ್ಗಳಲ್ಲಿ ನಡೆದಿರುವ ಭಾರಿ ಅಕ್ರಮಗಳನ್ನು ಬಯಲಿಗೆ ಎಳೆಯಲು ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.<br /> <br /> ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.<br /> ಬಿಬಿಎಂಪಿಗೆ ಸೇರ್ಪಡೆಯಾದ ನಗರಸಭೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಡೆದಿದೆ. ವಿಶೇಷ ಲೆಕ್ಕ ಪರಿಶೋಧನೆ ಮಾಡಿ, ಅಗತ್ಯವಿದ್ದರೆ ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದ ಅವರು ಹೇರೋಹಳ್ಳಿ ಸೇರಿದಂತೆ ಕೆಲವು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲು ಆಯುಕ್ತರಿಗೆ ಸೂಚಿಸಿದರು.<br /> <br /> ಅಕ್ರಮ ಸಕ್ರಮಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು ಶೀಘ್ರ ಜಾರಿಗೆ ಬರಲಿದೆ. ಇದರಿಂದ ಸಂಗ್ರಹಗೊಳ್ಳುವ ಸಾವಿರಾರು ಕೋಟಿ ತೆರಿಗೆಯಿಂದ ನಗರದ ಅಭಿವೃದ್ದಿ ಮಾಡಲು ಸಾಧ್ಯ ಎಂದು ಹೇಳಿದರು. ರಾಜರಾಜೇಶ್ವರಿನಗರ ವಲಯದಲ್ಲಿ ಗರಿಷ್ಠ ₨ 200ಕೋಟಿ ತೆರಿಗೆ ಬರಬೇಕು. ಕೇವಲ ₨ 95 ಕೋಟಿ ಗುರಿಯನಟ್ಟುಕೊಂಡಿರುವುದು ಗಮನಿಸಿದರೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.<br /> <br /> ಆಯುಕ್ತ ಎಂ. ಲಕ್ಷ್ಮೀನಾರಾಯಣ ಮಾತನಾಡಿ ಸಚ್ಚಿದಾನಂದ ಬಡಾವಣೆ ನಿವಾಸಿಗಳಿಗೆ ಹೈಕೋರ್ಟ್ ಆದೇಶದಂತೆ ಖಾತೆ ಮತ್ತು ನಕ್ಷೆ ನೀಡುವುದರ ಜತೆಗೆ ಬಂಗಾರಪ್ಪ ನಗರ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ: </strong>ಹೇರೋಹಳ್ಳಿ ಕಂದಾಯ ವಿಭಾಗ ಸೇರಿದಂತೆ ಐದು ವಾರ್ಡ್ಗಳಲ್ಲಿ ನಡೆದಿರುವ ಭಾರಿ ಅಕ್ರಮಗಳನ್ನು ಬಯಲಿಗೆ ಎಳೆಯಲು ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.<br /> <br /> ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.<br /> ಬಿಬಿಎಂಪಿಗೆ ಸೇರ್ಪಡೆಯಾದ ನಗರಸಭೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಡೆದಿದೆ. ವಿಶೇಷ ಲೆಕ್ಕ ಪರಿಶೋಧನೆ ಮಾಡಿ, ಅಗತ್ಯವಿದ್ದರೆ ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದ ಅವರು ಹೇರೋಹಳ್ಳಿ ಸೇರಿದಂತೆ ಕೆಲವು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲು ಆಯುಕ್ತರಿಗೆ ಸೂಚಿಸಿದರು.<br /> <br /> ಅಕ್ರಮ ಸಕ್ರಮಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು ಶೀಘ್ರ ಜಾರಿಗೆ ಬರಲಿದೆ. ಇದರಿಂದ ಸಂಗ್ರಹಗೊಳ್ಳುವ ಸಾವಿರಾರು ಕೋಟಿ ತೆರಿಗೆಯಿಂದ ನಗರದ ಅಭಿವೃದ್ದಿ ಮಾಡಲು ಸಾಧ್ಯ ಎಂದು ಹೇಳಿದರು. ರಾಜರಾಜೇಶ್ವರಿನಗರ ವಲಯದಲ್ಲಿ ಗರಿಷ್ಠ ₨ 200ಕೋಟಿ ತೆರಿಗೆ ಬರಬೇಕು. ಕೇವಲ ₨ 95 ಕೋಟಿ ಗುರಿಯನಟ್ಟುಕೊಂಡಿರುವುದು ಗಮನಿಸಿದರೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.<br /> <br /> ಆಯುಕ್ತ ಎಂ. ಲಕ್ಷ್ಮೀನಾರಾಯಣ ಮಾತನಾಡಿ ಸಚ್ಚಿದಾನಂದ ಬಡಾವಣೆ ನಿವಾಸಿಗಳಿಗೆ ಹೈಕೋರ್ಟ್ ಆದೇಶದಂತೆ ಖಾತೆ ಮತ್ತು ನಕ್ಷೆ ನೀಡುವುದರ ಜತೆಗೆ ಬಂಗಾರಪ್ಪ ನಗರ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>