<p><strong>ಬೀದರ್: </strong>ರಾಜ್ಯ ಹಣಕಾಸು ನಿಧಿಯ ಮೀಸಲು ಪ್ರಮಾಣ ಶೇ 22.75ರ ಅನ್ವಯ 2010-11ನೇ ಸಾಲಿನ ಅರ್ಹ ಫಲಾನುಭವಿಗಳಿಗೆ ಎರಡು ವರ್ಷಗಳ ತರುವಾಯ ನಗರಸಭೆಯ ಸೋಮವಾರ ಕಂಪ್ಯೂಟರ್ಗಳನ್ನು ವಿತರಿಸಲಾಯಿತು.<br /> <br /> ಅಂದಾಜು ರೂ. 5.25 ಲಕ್ಷ ವೆಚ್ಚದಲ್ಲಿ ಒಟ್ಟಾರೆ 21 ಫಲಾನುಭವಿಗಳಿಗೆ ಈ ಸೌಲಭ್ಯವನ್ನು ವಿತರಿಸಲಾಯಿತು. ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಸೇರಿದ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಶ್ರೀದೇವಿ ಕರಂಜಿ ಅವರು, ಶೇ 22.75ರ ಯೋಜನೆಯಡಿ ಕೊಡುತ್ತಿರುವ ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> `ಈಗ 2010-11ನೇ ಸಾಲಿನ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗಿದೆ. ನಂತರದ ಎರಡು ವರ್ಷ ಫಲಾನುಭವಿಗಳ ಆಯ್ಕೆಗಾಗಿ ಕ್ರಿಯಾ ಯೋಜನೆಯನ್ನೇ ರೂಪಿಸಿಲ್ಲ. ಹೀಗಾಗಿ ಸಾಧ್ಯವಾಗಿಲ್ಲ~ ಎಂದು ಆಯುಕ್ತ ರಾಮದಾಸ್ ಪ್ರತಿಕ್ರಿಯಿಸಿದರು.<br /> <br /> ಆದಷ್ಟು ಶೀಘ್ರವೇ ನಂತರದ ಎರಡು ವರ್ಷಗಳಿಗೂ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಿಯಾಯೋಜನೆ ರೂಪಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.<br /> <br /> ಸೌಲಭ್ಯದ ವಿತರಣೆ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶಿವಕುಮಾರ ಭಾವಿಕಟ್ಟಿ, ಎಚ್.ಎಸ್.ಮಾರ್ಟಿನ್, ಫರ್ನಾಂಡೀಸ್ ಹಿಪ್ಪಳಗಾಂವ್, ಧನರಾಜ ಹಾಜರಿದ್ದರು. ವಿದ್ಯಾನಗರ, ಮೈಲೂರ, ನಾವದಗೇರಿ, ತಾಳಘಾಟ, ಕುಂಬಾಳವಾಡಾ ಭಾಗಗಳ ವಿದ್ಯಾರ್ಥಿಗಳು ಫಲಾನುಭವಿಗಳಲ್ಲಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ರಾಜ್ಯ ಹಣಕಾಸು ನಿಧಿಯ ಮೀಸಲು ಪ್ರಮಾಣ ಶೇ 22.75ರ ಅನ್ವಯ 2010-11ನೇ ಸಾಲಿನ ಅರ್ಹ ಫಲಾನುಭವಿಗಳಿಗೆ ಎರಡು ವರ್ಷಗಳ ತರುವಾಯ ನಗರಸಭೆಯ ಸೋಮವಾರ ಕಂಪ್ಯೂಟರ್ಗಳನ್ನು ವಿತರಿಸಲಾಯಿತು.<br /> <br /> ಅಂದಾಜು ರೂ. 5.25 ಲಕ್ಷ ವೆಚ್ಚದಲ್ಲಿ ಒಟ್ಟಾರೆ 21 ಫಲಾನುಭವಿಗಳಿಗೆ ಈ ಸೌಲಭ್ಯವನ್ನು ವಿತರಿಸಲಾಯಿತು. ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಸೇರಿದ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಶ್ರೀದೇವಿ ಕರಂಜಿ ಅವರು, ಶೇ 22.75ರ ಯೋಜನೆಯಡಿ ಕೊಡುತ್ತಿರುವ ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> `ಈಗ 2010-11ನೇ ಸಾಲಿನ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗಿದೆ. ನಂತರದ ಎರಡು ವರ್ಷ ಫಲಾನುಭವಿಗಳ ಆಯ್ಕೆಗಾಗಿ ಕ್ರಿಯಾ ಯೋಜನೆಯನ್ನೇ ರೂಪಿಸಿಲ್ಲ. ಹೀಗಾಗಿ ಸಾಧ್ಯವಾಗಿಲ್ಲ~ ಎಂದು ಆಯುಕ್ತ ರಾಮದಾಸ್ ಪ್ರತಿಕ್ರಿಯಿಸಿದರು.<br /> <br /> ಆದಷ್ಟು ಶೀಘ್ರವೇ ನಂತರದ ಎರಡು ವರ್ಷಗಳಿಗೂ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಿಯಾಯೋಜನೆ ರೂಪಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.<br /> <br /> ಸೌಲಭ್ಯದ ವಿತರಣೆ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶಿವಕುಮಾರ ಭಾವಿಕಟ್ಟಿ, ಎಚ್.ಎಸ್.ಮಾರ್ಟಿನ್, ಫರ್ನಾಂಡೀಸ್ ಹಿಪ್ಪಳಗಾಂವ್, ಧನರಾಜ ಹಾಜರಿದ್ದರು. ವಿದ್ಯಾನಗರ, ಮೈಲೂರ, ನಾವದಗೇರಿ, ತಾಳಘಾಟ, ಕುಂಬಾಳವಾಡಾ ಭಾಗಗಳ ವಿದ್ಯಾರ್ಥಿಗಳು ಫಲಾನುಭವಿಗಳಲ್ಲಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>