<p><strong>ವಿಜಾಪುರ:</strong> `ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಜನ ಬೇಸತ್ತಿದ್ದಾರೆ. ರಾಜಕಾರಣ ಸಾಕು ಮಾಡಿ, ಅಭಿವೃದ್ಧಿಯತ್ತ ಗಮನ ಹರಿಸಿ. ನಾನು ದೊಡ್ಡವ, ನೀನು ದೊಡ್ಡವ ಎಂದು ನೀವು ಇದೇ ರೀತಿ ಜಗಳ ಮುಂದುವರಿಸಿದರೆ ಬರುವ ಚುನಾವಣೆಯಲ್ಲಿ ಪಕ್ಷಕ್ಕೆ ತೊಂದರೆಯಾದೀತು~ ಎಂದು ಸಂಸದ ರಮೇಶ ಜಿಗಜಿಣಗಿ ತಮ್ಮ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದರು.<br /> <br /> `ನಾನು ಈ ಮಾತನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹಾಗೂ ಮುಖ್ಯಮಂತ್ರಿಗಳಿಗೂ ಹೇಳುತ್ತೇನೆ~ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `ಒಬ್ಬ ವ್ಯಕ್ತಿ ಮತ್ತು ಒಂದು ಜಾತಿಯಿಂದ ಪಕ್ಷ ಕಟ್ಟಲು ಆಗುವುದಿಲ್ಲ. ಎಲ್ಲ ಜಾತಿ-ಜನಾಂಗದವರೂ ಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನು ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಪಾತ್ರವೂ ಪ್ರಮುಖವಾಗಿದೆ. ನಾವಿಬ್ಬರೂ ಸೇರಿ ರಾಜ್ಯದ ಶೇ 24ರಷ್ಟು ದಲಿತರಲ್ಲಿ ಅರ್ಧದಷ್ಟು ಮತಗಳು ಬಿಜೆಪಿಗೆ ಬರುವಂತೆ ಮಾಡಿದ್ದೇವೆ. ಆದರೆ ಈ ಸಾಧನೆಯನ್ನು ಯಾರೂ ಸ್ಮರಿಸುತ್ತಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಕೇವಲ ಮುಂದುವರಿದ ಜಾತಿಗಳಿಂದಷ್ಟೇ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಯಡಿಯೂರಪ್ಪ 50 ವರ್ಷಗಳಿಂದ ರಾಜ್ಯದಲ್ಲಿ ಸಂಚರಿಸಿ ಚಪ್ಪಲಿ ಹರಿದುಕೊಂಡರು. ಅನಂತಕುಮಾರ ಸಹ ಸಾಕಷ್ಟು ಶ್ರಮಪಟ್ಟರು. ಆದರೆ, ಆಗ ಬಿಜೆಪಿ ರಾಜ್ಯದಲ್ಲಿ ಏಕೆ ಅಧಿಕಾರಕ್ಕೆ ಬರಲಿಲ್ಲ? ನಾವು (ಜಿಗಜಿಣಗಿ-ಕಾರಜೋಳ) ಸೇರಿದ ನಂತರವಷ್ಟೇ ಬಿಜೆಪಿ ಏಕೆ ಅಧಿಕಾರಕ್ಕೆ ಬಂತು?~ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. `ದಲಿತರಿಗೆ ಅನ್ಯಾಯ ಆದರೆ ಸಹಿಸುವುದಿಲ್ಲ. ಯಾವ ಪಕ್ಷಕ್ಕೂ ಹೋಗುವುದಿಲ್ಲ~ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> `ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಜನ ಬೇಸತ್ತಿದ್ದಾರೆ. ರಾಜಕಾರಣ ಸಾಕು ಮಾಡಿ, ಅಭಿವೃದ್ಧಿಯತ್ತ ಗಮನ ಹರಿಸಿ. ನಾನು ದೊಡ್ಡವ, ನೀನು ದೊಡ್ಡವ ಎಂದು ನೀವು ಇದೇ ರೀತಿ ಜಗಳ ಮುಂದುವರಿಸಿದರೆ ಬರುವ ಚುನಾವಣೆಯಲ್ಲಿ ಪಕ್ಷಕ್ಕೆ ತೊಂದರೆಯಾದೀತು~ ಎಂದು ಸಂಸದ ರಮೇಶ ಜಿಗಜಿಣಗಿ ತಮ್ಮ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದರು.<br /> <br /> `ನಾನು ಈ ಮಾತನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹಾಗೂ ಮುಖ್ಯಮಂತ್ರಿಗಳಿಗೂ ಹೇಳುತ್ತೇನೆ~ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `ಒಬ್ಬ ವ್ಯಕ್ತಿ ಮತ್ತು ಒಂದು ಜಾತಿಯಿಂದ ಪಕ್ಷ ಕಟ್ಟಲು ಆಗುವುದಿಲ್ಲ. ಎಲ್ಲ ಜಾತಿ-ಜನಾಂಗದವರೂ ಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನು ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಪಾತ್ರವೂ ಪ್ರಮುಖವಾಗಿದೆ. ನಾವಿಬ್ಬರೂ ಸೇರಿ ರಾಜ್ಯದ ಶೇ 24ರಷ್ಟು ದಲಿತರಲ್ಲಿ ಅರ್ಧದಷ್ಟು ಮತಗಳು ಬಿಜೆಪಿಗೆ ಬರುವಂತೆ ಮಾಡಿದ್ದೇವೆ. ಆದರೆ ಈ ಸಾಧನೆಯನ್ನು ಯಾರೂ ಸ್ಮರಿಸುತ್ತಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಕೇವಲ ಮುಂದುವರಿದ ಜಾತಿಗಳಿಂದಷ್ಟೇ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಯಡಿಯೂರಪ್ಪ 50 ವರ್ಷಗಳಿಂದ ರಾಜ್ಯದಲ್ಲಿ ಸಂಚರಿಸಿ ಚಪ್ಪಲಿ ಹರಿದುಕೊಂಡರು. ಅನಂತಕುಮಾರ ಸಹ ಸಾಕಷ್ಟು ಶ್ರಮಪಟ್ಟರು. ಆದರೆ, ಆಗ ಬಿಜೆಪಿ ರಾಜ್ಯದಲ್ಲಿ ಏಕೆ ಅಧಿಕಾರಕ್ಕೆ ಬರಲಿಲ್ಲ? ನಾವು (ಜಿಗಜಿಣಗಿ-ಕಾರಜೋಳ) ಸೇರಿದ ನಂತರವಷ್ಟೇ ಬಿಜೆಪಿ ಏಕೆ ಅಧಿಕಾರಕ್ಕೆ ಬಂತು?~ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. `ದಲಿತರಿಗೆ ಅನ್ಯಾಯ ಆದರೆ ಸಹಿಸುವುದಿಲ್ಲ. ಯಾವ ಪಕ್ಷಕ್ಕೂ ಹೋಗುವುದಿಲ್ಲ~ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>