<p><strong>ನವದೆಹಲಿ (ಪಿಟಿಐ): </strong>`ಕಚ್ಚಾ ತೈಲದ ಬೆಲೆ ಏರಿಕೆಯು ಕಳವಳಕಾರಿ ವಿದ್ಯಮಾನವಾಗಿದ್ದು, ಅದರಿಂದ ದೇಶದ ಅರ್ಥ ವ್ಯವಸ್ಥೆ ಮೇಲೆ ಆಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಈ ಹಂತದಲ್ಲಿ ಅಂದಾಜು ಮಾಡುವುದು ಅವಸರದ ತೀರ್ಮಾನವಾಗಲಿದೆ~ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ವಿವಾದಾತ್ಮಕ ಅಣ್ವಸ್ತ್ರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಇರಾನ್ ಮತ್ತು ಪಶ್ಚಿಮದ ದೇಶಗಳ ಮಧ್ಯೆ ಹೆಚ್ಚಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿಢೀರನೆ ಏರಿಕೆ ಕಾಣುತ್ತಿದೆ.<br /> <br /> ಬಾಹ್ಯ ಒತ್ತಡ ಇಲ್ಲ: ಇರಾನ್ನಿಂದ ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವಂತೆ ನಮ್ಮ ಮೇಲೆ ಬಾಹ್ಯ ಒತ್ತಡವೇನೂ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಎಸ್. ಜೈಪಾಲ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ಭಾರತವು, ವಿಶ್ವಸಂಸ್ಥೆ ವಿಧಿಸುವ ಆರ್ಥಿಕ ದಿಗ್ಬಂಧನಕ್ಕೆ ಬದ್ಧವಾಗಿರುತ್ತದೆಯೇ ಹೊರತು, ಇತರ ಯಾವುದೇ ದೇಶಗಳ ಗುಂಪಿನ ದಿಗ್ಬಂಧನೆ ಪಾಲಿಸುವುದಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>`ಕಚ್ಚಾ ತೈಲದ ಬೆಲೆ ಏರಿಕೆಯು ಕಳವಳಕಾರಿ ವಿದ್ಯಮಾನವಾಗಿದ್ದು, ಅದರಿಂದ ದೇಶದ ಅರ್ಥ ವ್ಯವಸ್ಥೆ ಮೇಲೆ ಆಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಈ ಹಂತದಲ್ಲಿ ಅಂದಾಜು ಮಾಡುವುದು ಅವಸರದ ತೀರ್ಮಾನವಾಗಲಿದೆ~ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ವಿವಾದಾತ್ಮಕ ಅಣ್ವಸ್ತ್ರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಇರಾನ್ ಮತ್ತು ಪಶ್ಚಿಮದ ದೇಶಗಳ ಮಧ್ಯೆ ಹೆಚ್ಚಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿಢೀರನೆ ಏರಿಕೆ ಕಾಣುತ್ತಿದೆ.<br /> <br /> ಬಾಹ್ಯ ಒತ್ತಡ ಇಲ್ಲ: ಇರಾನ್ನಿಂದ ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವಂತೆ ನಮ್ಮ ಮೇಲೆ ಬಾಹ್ಯ ಒತ್ತಡವೇನೂ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಎಸ್. ಜೈಪಾಲ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ಭಾರತವು, ವಿಶ್ವಸಂಸ್ಥೆ ವಿಧಿಸುವ ಆರ್ಥಿಕ ದಿಗ್ಬಂಧನಕ್ಕೆ ಬದ್ಧವಾಗಿರುತ್ತದೆಯೇ ಹೊರತು, ಇತರ ಯಾವುದೇ ದೇಶಗಳ ಗುಂಪಿನ ದಿಗ್ಬಂಧನೆ ಪಾಲಿಸುವುದಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>