<p><strong>ಶಿವಮೊಗ್ಗ: </strong>ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿನ ಸೌಲಭ್ಯ ದೊರೆಯುವಂತೆ ಆಗಬೇಕು. ಬ್ಯಾಂಕ್ಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಸಲಹೆ ಮಾಡಿದರು.<br /> ನಗರದ ಪ್ರಗತಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಸ್ವಾಭಿಮಾನ್ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯದ ಸುಮಾರು ಒಟ್ಟು ಆರು ಲಕ್ಷ ಹಳ್ಳಿಗಳಲ್ಲಿ ಕೇವಲ 36 ಸಾವಿರ ಹಳ್ಳಿಗಳಲ್ಲಿ ಮಾತ್ರ ಬ್ಯಾಂಕ್ ಸೌಲಭ್ಯ ದೊರೆತಿದೆ. ಉಳಿದ ಹಳ್ಳಿಗಳಲ್ಲಿಯೂ ಬ್ಯಾಂಕ್ ಸೌಲಭ್ಯ ವಿಸ್ತರಣೆಯಾಗಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. <br /> <br /> ಗ್ರಾಮಾಂತರ ಭಾಗದಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ಉತ್ತಮ ಸೇವೆ ನೀಡುತ್ತಿದೆ. ಗ್ರಾಮಸ್ಥರ ಆರ್ಥಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲಿ ಎಂದು ಅವರು ಸಲಹೆ ನೀಡಿದರು. <br /> <br /> ಇದೇ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರ ಪ್ರತಿನಿಧಿಗಳಿಗೆ ಬಯೋಮೆಟ್ರಿಕ್ ಕರಯಂತ್ರ, ಸ್ಮಾರ್ಟ್ಕಾರ್ಡ್, ಪ್ರಗತಿ ಸುವಿಧಾ ಸಾಲ ಯೋಜನೆಯ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಬಂಧಕರಾದ ಎಂ.ಎನ್. ಪುರಾಣಿಕ್, ದೇಸಾಯಿ, ಉಪ ಮಹಾಪ್ರಬಂಧಕ ರಾಘವೇಂದ್ರ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ನ ಪ್ರಬಂಧಕ ಎಲ್. ಸುಬ್ಬರಾವ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿನ ಸೌಲಭ್ಯ ದೊರೆಯುವಂತೆ ಆಗಬೇಕು. ಬ್ಯಾಂಕ್ಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಸಲಹೆ ಮಾಡಿದರು.<br /> ನಗರದ ಪ್ರಗತಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಸ್ವಾಭಿಮಾನ್ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯದ ಸುಮಾರು ಒಟ್ಟು ಆರು ಲಕ್ಷ ಹಳ್ಳಿಗಳಲ್ಲಿ ಕೇವಲ 36 ಸಾವಿರ ಹಳ್ಳಿಗಳಲ್ಲಿ ಮಾತ್ರ ಬ್ಯಾಂಕ್ ಸೌಲಭ್ಯ ದೊರೆತಿದೆ. ಉಳಿದ ಹಳ್ಳಿಗಳಲ್ಲಿಯೂ ಬ್ಯಾಂಕ್ ಸೌಲಭ್ಯ ವಿಸ್ತರಣೆಯಾಗಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. <br /> <br /> ಗ್ರಾಮಾಂತರ ಭಾಗದಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ಉತ್ತಮ ಸೇವೆ ನೀಡುತ್ತಿದೆ. ಗ್ರಾಮಸ್ಥರ ಆರ್ಥಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲಿ ಎಂದು ಅವರು ಸಲಹೆ ನೀಡಿದರು. <br /> <br /> ಇದೇ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರ ಪ್ರತಿನಿಧಿಗಳಿಗೆ ಬಯೋಮೆಟ್ರಿಕ್ ಕರಯಂತ್ರ, ಸ್ಮಾರ್ಟ್ಕಾರ್ಡ್, ಪ್ರಗತಿ ಸುವಿಧಾ ಸಾಲ ಯೋಜನೆಯ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಬಂಧಕರಾದ ಎಂ.ಎನ್. ಪುರಾಣಿಕ್, ದೇಸಾಯಿ, ಉಪ ಮಹಾಪ್ರಬಂಧಕ ರಾಘವೇಂದ್ರ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ನ ಪ್ರಬಂಧಕ ಎಲ್. ಸುಬ್ಬರಾವ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>